ಶಾಸಕ ಕಾಮತ್‌ ಅವರಿಂದ ಸಿಎಂಗೆ ಮನವಿ


Team Udayavani, Sep 10, 2018, 12:36 PM IST

secptember-9.jpg

ಮಹಾನಗರ: ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ಮುಖ್ಯಮಂತ್ರಿ ಎಚ್‌.ಡಿ . ಕುಮಾರಸ್ವಾಮಿಯವರಿಗೆ ನಗರದಲ್ಲಿ ಲಿಖೀತ ಮನವಿ ಸಲ್ಲಿಸಿದರು.

ಸ್ಮಾರ್ಟ್‌ಸಿಟಿ ಯೋಜನೆಗೆ ವೇಗ ನೀಡಬೇಕು ಹಾಗೂ ಕಾಲಮಿತಿಯಡಿ ಯೋಜನೆ ಪೂರ್ಣಗೊಳಿಸಬೇಕು, ಪೂರ್ಣ ಪ್ರಮಾಣದ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸಬೇಕು, ಮಲ್ಟಿಲೇವಲ್‌ ಕಾರು ಪಾರ್ಕಿಂಗ್‌, ಮಾರುಕಟ್ಟೆಗಳ ನಿರ್ಮಾಣ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಸುರಿದ ಭಾರಿ ಮಳೆಗೆ ಮಂಗಳೂರು ನಗರ ದಕ್ಷಿಣದಲ್ಲಿ ಮನೆಗಳು, ಕಟ್ಟಡಗಳು ಹಾಗೂ ಸಾರ್ವಜನಿಕ ಸ್ವತ್ತುಗಳಿಗೆ ಅಪಾರ ಹಾನಿ ಸಂಭವಿಸಿದೆ. ಸುಮಾರು 50 ಕೋಟಿ ರೂಪಾಯಿ ನಷ್ಟದ ಅಂದಾಜು ಮಾಡಲಾಗಿದೆ. ಇದರೊಂದಿಗೆ ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವ, ದಸರಾ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಉತ್ಸವ ಮತ್ತು ಸಂಚಾರಕ್ಕೆ ರಸ್ತೆಗಳಲ್ಲಿ ಬಿದ್ದಿರುವ ಹೊಂಡ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಳ್ಳಲು ಕೂಡ ಅನುದಾನದ ಬಿಡುಗಡೆ ಮಾಡಲೇಬೇಕಿದೆ.

ಈ ಎಲ್ಲ ಕಾಮಗಾರಿಗಳಿಗೆ ಕನಿಷ್ಠ 50 ಕೋಟಿ ರೂ. ತತ್‌ಕ್ಷಣ ಬಿಡುಗಡೆ ಮಾಡಬೇಕು. ಮಹಾನಗರ ಪಾಲಿಕೆಯಲ್ಲಿ ಒಟ್ಟು ಇರಬೇಕಾಗಿರುವ ಸಿಬಂದಿ ಸಂಖ್ಯೆ 1,725. ಆದರೆ ಅದರಲ್ಲಿ 1,084 ಹುದ್ದೆಗಳು ಖಾಲಿ ಇವೆ. ಕೂಡಲೇ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಬೇಕು. ಮಹಾಕಾಳಿಪಡ್ಪು  ಪ್ರದೇಶದಲ್ಲಿ ರೈಲ್ವೆ ಇಲಾಖೆಯಿಂದ ಜಿಎಡಿ ನಕ್ಷೆ ಅನುಮೋದನೆಗೊಂಡಿದ್ದು ರೈಲ್ವೇ ಕೆಳಸೇತುವೆಯ ನಿರ್ಮಾಣಕ್ಕೆ ರಾಜ್ಯ ಸರಕಾರದ ಪಾಲು ಇಪ್ಪತ್ತು ಕೋಟಿ ರೂಪಾಯಿಯನ್ನು ಆದಷ್ಟು ಶೀಘ್ರ ಮಂಜೂರು ಮಾಡಿದರೆ ಸಂಚಾರಕ್ಕೆ ಅನುಕೂಲವಾಗುತ್ತದೆ. 

ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯಲ್ಲಿ ಐಸಿಯು ಬೆಡ್‌ಗಳನ್ನು ಹೆಚ್ಚಿಸಬೇಕು, ಆರೋಗ್ಯ ಕರ್ನಾಟಕ ಯೋಜನೆಗೆ ಹೆಚ್ಚುವರಿ ಕೌಂಟರ್‌ ತೆರೆಯಬೇಕು. ಯಾಂತ್ರೀಕೃತ ನಾಡದೋಣಿಗಳಿಗೆ ಸಬ್ಸಿಡಿ ದರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮೂಲಕ ಸೀಮೆ ಎಣ್ಣೆಯನ್ನು ಪೂರೈಸಲಾಗುತ್ತಿತ್ತು. ಆದರೆ ಈ ಬಾರಿ ಅದನ್ನು ಮೀನುಗಾರಿಕಾ ಇಲಾಖೆಯ ಮೂಲಕ ನೀಡಲಾಗುತ್ತಿದೆ. ಈಗಾಗಲೇ ಮೀನುಗಾರಿಕಾ ಇಲಾಖೆಗೆ ನೀಡಿರುವ ಅನುದಾನವನ್ನು ರಾಜ್ಯ ಸರಕಾರ ಕಡಿತ ಮಾಡಿರುವುದರಿಂದ ಮೀನುಗಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಈ ಸಮಸ್ಯೆ ಸರಿಪಡಿಸಬೇಕು. ಕಂದಾಯ ಇಲಾಖೆಯಲ್ಲಿ ಕೆಲವು ನಿಯಮಗಳಿಂದ ಆಗುತ್ತಿರುವ ಸಮಸ್ಯೆಗಳನ್ನು ನಿವಾರಿಸಬೇಕು ಎಂದವರು ಕೋರಿದ್ದಾರೆ. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.