ಪೊಲೀಸರಿಗೆ ವೇದವ್ಯಾಸ ಕಾಮತ್ ತರಾಟೆ
Team Udayavani, Sep 11, 2018, 12:33 PM IST
ಮಂಗಳೂರು: ನಗರದ ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಹಾಗೂ ಇತರ ಸಂಘಟನೆಗಳು ಸೋಮವಾರ ಬೆಳಗ್ಗೆ ಮಾಜಿ ಶಾಸಕ ಜೆ.ಆರ್. ಲೋಬೋ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಅದೇ ಹಾದಿಯಲ್ಲಿ ಸಾಗುತ್ತಿದ್ದ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಪ್ರತಿಭಟನೆಕಾರರು ಘೋಷಣೆ ಕೂಗಿದ್ದು, ತತ್ಕ್ಷಣ ಶಾಸಕರು ಕಾರು ನಿಲ್ಲಿಸಿ ಪೊಲೀಸರ ಬಳಿ ತೆರಳಿ ಆಕ್ಷೇಪ ವ್ಯಕ್ತಪಡಿಸಿದರು.
ಸ್ಥಳದಲ್ಲಿ ಸ್ವಲ್ಪಹೊತ್ತು ಗೊಂದಲ ನೆಲೆಸಿತ್ತು.ಶಾಸಕರ ಕಾರನ್ನು ಕಂಡು ಕಾರ್ಯಕರ್ತರು ಅವರ ವಿರುದ್ಧ ಘೋಷಣೆ ಕೂಗಿದ್ದಲ್ಲದೆ ಕೆಲವರು ಕಾರಿನತ್ತ ಧಾವಿಸಿದರು. ಕ್ರುದ್ಧರಾದ ಶಾಸಕರು ಕಾರಿನಿಂದ ಇಳಿದು ಬಂದರು. ಸ್ಥಳದಲ್ಲಿದ್ದ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಹಾಗೂ ಪೊಲೀಸ್ಅಧಿಕಾರಿಗಳು ಪರಿಸ್ಥಿತಿಯನ್ನು ತಿಳಿ ಗೊಳಿಸಲು ಪ್ರಯತ್ನಿಸಿದರು. ರಸ್ತೆಯಲ್ಲಿ ಧರಣಿ ನಡೆಸಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಮಾಡುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಮತ್ ಸರಕಾರ ಹಾಗೂ ಅಧಿಕಾರಿಗಳು ಬಂದ್ ಮಾಡುವವರಿಗೆ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಬಳಿಕ ಪೊಲೀಸರು ಧರಣಿನಿರತನ್ನು ಸ್ಥಳದಿಂದ ತೆರವುಗೊಳಿಸಿದರು.
ಬಲವಂತದ ಬಂದ್
ಮಾಧ್ಯಮದವರೊಂದಿಗೆ ಮಾತನಾಡಿದ ವೇದವ್ಯಾಸ ಕಾಮತ್, ಇದು ಸ್ವಯಂಪ್ರೇರಿತ ಅಲ್ಲ; ಬಲವಂತದ ಬಂದ್. ರಾಜ್ಯದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರವನ್ನು ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿದರು. ಸಾರ್ವಜನಿಕರ ಹಿತದ ಬದಲು ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಟ್ಟುಕೊಂಡು ಕಾಂಗ್ರೆಸ್ ಮತ್ತು ಇತರರು ಈ ಬಂದ್ಗೆ ಕರೆ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್