ಪೊಲೀಸರಿಗೆ ವೇದವ್ಯಾಸ ಕಾಮತ್ ತರಾಟೆ
Team Udayavani, Sep 11, 2018, 12:33 PM IST
ಮಂಗಳೂರು: ನಗರದ ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಹಾಗೂ ಇತರ ಸಂಘಟನೆಗಳು ಸೋಮವಾರ ಬೆಳಗ್ಗೆ ಮಾಜಿ ಶಾಸಕ ಜೆ.ಆರ್. ಲೋಬೋ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಅದೇ ಹಾದಿಯಲ್ಲಿ ಸಾಗುತ್ತಿದ್ದ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಪ್ರತಿಭಟನೆಕಾರರು ಘೋಷಣೆ ಕೂಗಿದ್ದು, ತತ್ಕ್ಷಣ ಶಾಸಕರು ಕಾರು ನಿಲ್ಲಿಸಿ ಪೊಲೀಸರ ಬಳಿ ತೆರಳಿ ಆಕ್ಷೇಪ ವ್ಯಕ್ತಪಡಿಸಿದರು.
ಸ್ಥಳದಲ್ಲಿ ಸ್ವಲ್ಪಹೊತ್ತು ಗೊಂದಲ ನೆಲೆಸಿತ್ತು.ಶಾಸಕರ ಕಾರನ್ನು ಕಂಡು ಕಾರ್ಯಕರ್ತರು ಅವರ ವಿರುದ್ಧ ಘೋಷಣೆ ಕೂಗಿದ್ದಲ್ಲದೆ ಕೆಲವರು ಕಾರಿನತ್ತ ಧಾವಿಸಿದರು. ಕ್ರುದ್ಧರಾದ ಶಾಸಕರು ಕಾರಿನಿಂದ ಇಳಿದು ಬಂದರು. ಸ್ಥಳದಲ್ಲಿದ್ದ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಹಾಗೂ ಪೊಲೀಸ್ಅಧಿಕಾರಿಗಳು ಪರಿಸ್ಥಿತಿಯನ್ನು ತಿಳಿ ಗೊಳಿಸಲು ಪ್ರಯತ್ನಿಸಿದರು. ರಸ್ತೆಯಲ್ಲಿ ಧರಣಿ ನಡೆಸಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಮಾಡುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಮತ್ ಸರಕಾರ ಹಾಗೂ ಅಧಿಕಾರಿಗಳು ಬಂದ್ ಮಾಡುವವರಿಗೆ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಬಳಿಕ ಪೊಲೀಸರು ಧರಣಿನಿರತನ್ನು ಸ್ಥಳದಿಂದ ತೆರವುಗೊಳಿಸಿದರು.
ಬಲವಂತದ ಬಂದ್
ಮಾಧ್ಯಮದವರೊಂದಿಗೆ ಮಾತನಾಡಿದ ವೇದವ್ಯಾಸ ಕಾಮತ್, ಇದು ಸ್ವಯಂಪ್ರೇರಿತ ಅಲ್ಲ; ಬಲವಂತದ ಬಂದ್. ರಾಜ್ಯದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರವನ್ನು ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿದರು. ಸಾರ್ವಜನಿಕರ ಹಿತದ ಬದಲು ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಟ್ಟುಕೊಂಡು ಕಾಂಗ್ರೆಸ್ ಮತ್ತು ಇತರರು ಈ ಬಂದ್ಗೆ ಕರೆ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್ ಕುಂಪಲ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…