ಚೌತಿ ಹಬ್ಬಕ್ಕೆ ಬಂದಿದೆ 10- 12 ಅಡಿ ಉದ್ದದ ಕಬ್ಬು


Team Udayavani, Sep 12, 2018, 10:16 AM IST

12-sepctember-2.jpg

ಬಜಪೆ: ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಮೂಡೆಗೆ ಇರುವಷ್ಟೇ ಪ್ರಾಮುಖ್ಯ ಚೌತಿ ಹಬ್ಬದ ಕಬ್ಬುವಿಗೆ ಇರುತ್ತದೆ. ಹೀಗಾಗಿ ಎರಡು ದಿನ ಮುಂಚಿತವಾಗಿಯೇ ಬಹುತೇಕ ಎಲ್ಲ ಅಂಗಡಿಗಳಲ್ಲಿ ಕಬ್ಬು ಮಾರಾಟ ಆರಂಭವಾಗುತ್ತದೆ. ಪ್ರತಿ ವರ್ಷದಂತೆ ಬಜಪೆ ಕಬ್ಬುವಿಗೆ ವಿಶೇಷ ಬೇಡಿಕೆ ಇದೆ. ಕಾರಣ ಆನಂದ ಗೌಡ ಎಂಬವರು ಬೆಳೆಸುವ ಗದ್ದೆ ಹಾಗೂ ಗೊಬ್ಬರ. ಅದಕ್ಕಿಂತಲೂ ಹೆಚ್ಚಾಗಿ ಆ ಕಬ್ಬುವಿನಲ್ಲಿ ಸಾಮರಸ್ಯದ ಸವಿ, ಸುವಾಸನೆಯಿದೆ. ಸ್ವಾಮಿಲಪದವಿನ ಆನಂದ ಗೌಡ ಅವರದ್ದು ಮೆಕ್ಯಾನಿಕ್‌ ವೃತ್ತಿಯಾದರೂ ಬೇಸಾಯದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಬಜಪೆ ಕಲ್ಲೋಡಿಯಲ್ಲಿ ಕಳೆದ 6 ವರ್ಷಗಳಿಂದ ಕಬ್ಬು ಬೆಳೆಸುತ್ತಿರುವ ಇವರು, ತಮ್ಮ ಹಿರಿಯರು ಮಾಡುತ್ತಿದ್ದ ಕೃಷಿಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಇವರ ತಂದೆ ದೇಜಪ್ಪ ಅವರು ಕೂಡ ಸ್ವಾಮಿಲ ಪದವು, ಕೊರಕಂಬಳದಲ್ಲಿ ಕಬ್ಬು ಬೆಳೆಸುತ್ತಿದ್ದರು. ಅಲ್ಲಿ ನೀರಿನ ಸಮಸ್ಯೆಯಿಂದಾಗಿ ಈಗ ಕಲ್ಲೋಡಿಯಲ್ಲಿ ಬೆಳೆಸುತ್ತಿದ್ದಾರೆ.

ಸಾಮರಸ್ಯದ ಸವಿ
ಆನಂದ ಗೌಡ ಅವರು ಕಲ್ಲೋಡಿಯಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಸುಮಾರು 1ಎಕ್ರೆ ಜಾಗದಲ್ಲಿ ಕಬ್ಬು ಬೆಳೆಸಿದ್ದಾರೆ. ಇದರ ಜತೆ ಭತ್ತ ಬೇಸಾಯವನ್ನೂ ಮಾಡು ತ್ತಿ ದ್ದಾರೆ. ಕರೀಂ ಫಾರ್ಮ್ ನಲ್ಲಿರುವ ಗದ್ದೆಯಲ್ಲಿ ಕಬ್ಬು ಬೆಳೆಸುತ್ತಿರುವ ಇವರ ಈ ಗದ್ದೆಯ ಯಜಮಾನ ಕರೀಂ ಸಾಹೇಬರು. ಕ್ರೈಸ್ತರ ತೆನೆ ಹಬ್ಬಕ್ಕೂ ಅಪಾರ ಕಬ್ಬನ್ನು ಇವರೇ ಒದಗಿಸುತ್ತಿದ್ದಾರೆ. ಪೆರ್ಮುದೆ, ಬಜಪೆ ಚರ್ಚ್‌ಗಳಿಗೆ ಇವರು ಕಬ್ಬನ್ನು ಒದಗಿಸುತ್ತಿದ್ದಾರೆ.ಜಮೀನು ಕರೀಂ ಸಾಹೇಬರದ್ದು, ಬೆಳೆಸುವವರು ಆನಂದ ಗೌಡರು, ಕ್ರೈಸ್ತರ ತೆನೆಹಬ್ಬ, ಹಿಂದೂಗಳ ಚೌತಿ ಹಬ್ಬಕ್ಕೆ ಕಬ್ಬು ನೀಡುತ್ತಾರೆ. ಈ ಮೂಲಕ ಸಾಮರಸ್ಯ ಸಾರುತ್ತಿದ್ದಾರೆ. 

10ರಿಂದ 12 ಅಡಿ ಉದ್ದ
ಇವರು ಬೆಳೆಸುವ ಕಬ್ಬಿಗೆ ಹಟ್ಟಿ ಗೊಬ್ಬರ ಮತ್ತು ಸುಡುಮಣ್ಣು ಹಾಕುತ್ತಾರೆ. ಯಾವುದೇ ರಾಸಾಯನಿಕ ಗೊಬ್ಬರ ಬಳಸುವುದಿಲ್ಲ. ಹೀಗಾಗಿ ಕಬ್ಬುಗಳು ಪುಷ್ಟಿಯಾಗಿ ಬೆಳೆಯುತ್ತವೆ. ಒಡೆಯುವುದಿಲ್ಲ. ಸಾಧಾರಣ ಕಬ್ಬುಗಳು 6ರಿಂದ 7 ಅಡಿ ಉದ್ದವಿರುತ್ತದೆ. ಆದರೆ ಇಲ್ಲಿ ಬೆಳೆದ ಕಬ್ಬು ಸರಿಸುಮಾರು 10ರಿಂದ 12 ಅಡಿ ಉದ್ದವಿವೆ. ಕೆಲವು ಅದಕ್ಕಿಂತಲೂ ಉದ್ದವಾಗಿ ಬೆಳೆದಿವೆ ಎನ್ನುತ್ತಾರೆ ಆನಂದ ಗೌಡ. ಕಬ್ಬುಗಳಿಗೆ ಬೇಡಿಕೆ ಇದೆ. ಕರಂಬಾರು, ಕಳವಾರಿನಿಂದ ಜನ ರು ಈಗಾಗಲೇ ಕಬ್ಬುಗಳನ್ನು ಕೊಂಡೊಯ್ಯಲು ಬಂದಿದ್ದಾರೆ. ಒಳ್ಳೆಯ ಪುಷ್ಟಿದಾಯಕ ಕಬ್ಬುಗಳನ್ನೇ ಜನ ಬಯಸುತ್ತಾರೆ. ದರದ ಬಗ್ಗೆ ಚಿಂತಿಸುವುದಿಲ್ಲ ಎನ್ನುತ್ತಾರೆ ಆನಂದ ಗೌಡರು.

ಒಂದು ಕಟ್ಟಿಗೆ 350 ರೂ.
ಒಂದು ಕಟ್ಟಿನಲ್ಲಿ 12 ಕಬ್ಬುಗಳನ್ನು ಕಟ್ಟಿ ಗದ್ದೆಗಳಿಂದ ಟೆಂಪೋಗಳಲ್ಲಿ ಅಂಗಡಿಗಳಿಗೆ ಸಾಗಾಟ ಮಾಡಲಾಗುತ್ತದೆ. ಒಂದು ಕಬ್ಬಿಗೆ 35 ರಿಂದ 50 ರೂ. ಇದೆ. ಪ್ರತಿ ಬಾರಿ ಬಜಪೆ ಪೇಟೆಯಲ್ಲಿ ನಾವೇ ಕುಳಿತು ಮಾರಾಟ ಮಾಡುತ್ತೇವೆ. ಕಳೆದ ಬಾರಿಯೂ 30ರಿಂದ 40 ರೂ. ದರವಿತ್ತು. ಕಾರ್ಮಿಕರಿಗೆ 700 ರೂ. ಕೂಲಿ ನೀಡಬೇಕು. ಈ ಬಾರಿ ಎಪ್ರಿಲ್‌, ಮೇ ತಿಂಗಳಿನಲ್ಲಿ ನೀರಿನ ಸಮಸ್ಯೆ ಎದುರಾಗಿದ್ದರೂ ಉತ್ತಮ ಬೆಳೆ ಬಂದಿದೆ ಎನ್ನುತ್ತಾರೆ ಆನಂದ.

ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.