ಕರಾವಳಿ ಅಪರಾಧ ಸುದ್ದಿಗಳು


Team Udayavani, Mar 18, 2019, 5:17 AM IST

crime-news-symbolic-750.jpg

ಮಂಗಳೂರು: ಕಲ್ಲಿನಿಂದ ಜಜ್ಜಿ ಅಪರಿಚಿತ ವ್ಯಕ್ತಿಯ  ಕೊಲೆ
ಮಂಗಳೂರು: ನಗರದ ಅಜೀಜುದ್ದೀನ್‌ ರಸ್ತೆ ಬದಿಯ ಟೆಂಪೋ ಪಾರ್ಕಿಂಗ್‌ ಜಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಸ್ಥಿತಿಯಲ್ಲಿ  ರವಿವಾರ ಬೆಳಗ್ಗೆ  ಪತ್ತೆಯಾಗಿದೆ.
ಕೊಲೆಯಾದ ವ್ಯಕ್ತಿ ಸುಮಾರು 35ರಿಂದ 40 ವರ್ಷ ಪ್ರಾಯದವ ರಾಗಿದ್ದು, ಅವರ ಕೈಯ ತೋಳಿನಲ್ಲಿ “ಜಗ್ಗರಾವ್‌’ ಎಂದು ಹಚ್ಚೆ ಹಾಕಲಾ ಗಿದೆ. ಬೇರೆ   ಮಾಹಿತಿ ಲಭಿಸಿಲ್ಲ.  ರವಿ ವಾರ ಬೆಳಗ್ಗೆ 9 ಗಂಟೆಗೆ  ಮೃತ ದೇಹ ಕಂಡು ಬಂದಿದೆ.  ಕೊಲೆಗೆ  ಬಳಸಿದ್ದೆನ್ನಲಾದ ದೊಡ್ಡ ಕಲ್ಲು  ಭುಜದ ಭಾಗ ದಲ್ಲಿತ್ತು.  ಪಾಂಡೇಶ್ವರ  ಠಾಣೆಯಲ್ಲಿ  ಕೊಲೆ ಪ್ರಕರಣ ದಾಖಲಾಗಿದೆ. 
ಕಾರ್ಮಿಕರೇ ಅಧಿಕ
ಈ ಪ್ರದೇಶದಲ್ಲಿ ಮೀನುಗಾರಿಕೆ ಮತ್ತು ಗೂಡ್ಸ್‌ ಶೆಡ್‌ ಪ್ರದೇಶದ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರ ಮೂಲಕ ಮೃತರ ಗುರುತು ಪತ್ತೆಗೆ ಪೊಲೀಸರು  ಶ್ರಮಿಸುತ್ತಿದ್ದಾರೆ. 
ಮೃತರ ಚಹರೆ
ಮೃತ ವ್ಯಕ್ತಿ 5.7 ಎತ್ತರ, ಕಪ್ಪು ಬಣ್ಣದ ಸುಮಾರು 2 ಇಂಚು ಉದ್ದದ ತಲೆ ಕೂದಲು, ತೆಳು ಗಡ್ಡ, ಕಪ್ಪು ದಪ್ಪ ಮೀಸೆ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಸ್ಲೇಟ್‌ ಬಣ್ಣ ಅರ್ಧ ತೋಳಿನ ಹಳೆಯ ಟೀಶರ್ಟ್‌ ಮತ್ತು ಲುಂಗಿ ಧರಿಸಿದ್ದಾರೆ.  ತಮಿಳುನಾಡು ಮೂಲದವನಿರುವ ಸಾಧ್ಯ ತೆ ಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬಂಟಕಲ್ಲು: ವಿವಾಹಿತ ಮಹಿಳೆ ಆತ್ಮಹತ್ಯೆ 
ಪತಿ ಮನೆಯವರ ವಿರುದ್ಧ ದೂರು ದಾಖ ಲು
ಶಿರ್ವ:
ಬಂಟಕಲ್ಲು ಅರಸೀಕಟ್ಟೆಯ ಗಂಡನ ಮನೆ ಯಲ್ಲಿ ಸಂಗೀತಾ (26) ಅವರು ಶನಿ ವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಟಕಲ್ಲು ಅರಸೀಕಟ್ಟೆ ನಿವಾಸಿ ಸುಜಯ್‌ ಅವರ ಪತ್ನಿ ಯಾ ಗಿ ರುವ ಈಕೆಗೆ ಗಂಡ, ಅತ್ತಿಗೆ ಸುಜಾತಾ ಮತ್ತು ಅತ್ತೆ ಕುಸುಮಾ  ಅವರು  ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ ಹಾಗೂ 2 ತಿಂಗಳ ಗರ್ಭಿಣಿಯಾಗಿದ್ದಾಗ ಬಲವಂತದಿಂದ ಮಾತ್ರೆಗಳನ್ನು ತಿನ್ನಿಸಿ ಗರ್ಭಪಾತ ಮಾಡಿಸಿದ್ದರು ಎಂದು ಆರೋಪಿಸಲಾಗಿದೆ. 
ಇದೇ ಕಾರಣಕ್ಕೆ ನೊಂದು ಆಕೆ  ಚೂಡಿದಾರದ ಶಾಲಿನಿಂದ ನೇಣು ಬಿಗಿ ದು ಕೊಂಡಿದ್ದು, ಕೂಡಲೇ ಅವ ರ ನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಕರೆತಂದರೂ ಜೀವ ಉಳಿಸಲಾಗಲಿಲ್ಲ. ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿ ಗರ್ಭಪಾತ ಮಾಡಿಸಿ ಆತ್ಮಹತ್ಯೆಗೆ ದುಷೆರಣೆ ನೀಡಿದ ಆರೋಪ ಹೊರಿಸಿ ಗಂಡ, ಅತ್ತಿಗೆ ಮತ್ತು ಅತ್ತೆ  ವಿರುದ್ಧ ಮೃತರ ಸಹೋದರ ಸುಭಾಸ್‌  ಅವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಣಿಪಾಲ: ರಿಕ್ಷಾ ಢಿಕ್ಕಿ; ರಸ್ತೆ ದಾಟಲು ನಿಂತಿದ್ದ ಮಹಿಳೆ ಸಾವು
ಉಡುಪಿ:ಮಣಿಪಾಲ ಎಂಜೆಸಿ ಬಸ್‌ ನಿಲ್ದಾಣದ ಬಳಿ ಭಾಗಶಃ ಪೂರ್ಣಗೊಂಡಿರುವ  ರಸ್ತೆಯಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಮೂಲತಃ ಕೋಲ್ಕತಾದವರಾಗಿದ್ದು ಮಣಿಪಾಲದಲ್ಲಿ ಕೆಲಸಕ್ಕಿದ್ದ ಕಲ್ಯಾಣಿ (47) ಮೃತಪಟ್ಟವರು. ಅವರು ಮಧ್ಯಾಹ್ನ ರಸ್ತೆ ದಾಟಲೆಂದು ರಸ್ತೆ ಬದಿ ನಿಂತಿದ್ದಾಗ ಟೈಗರ್‌ ಸರ್ಕಲ್‌ ಕಡೆಯಿಂದ ಸಿಂಡಿಕೇಟ್‌ ಸರ್ಕಲ್‌ ಕಡೆಗೆ ಅತಿವೇಗದಿಂದ ಬಂದ ಆಟೋರಿಕ್ಷಾ ಢಿಕ್ಕಿ ಹೊಡೆಯಿತು. ಪರಿಣಾಮವಾಗಿ ರಸ್ತೆಗೆ ಬಿದ್ದ ಕಲ್ಯಾಣಿ ಅವರ ತಲೆ ಮತ್ತು ಮುಖಕ್ಕೆ ಗಂಭೀರ ಗಾಯವಾಗಿ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು.  ಇಲ್ಲಿ ಒಂದು ಭಾಗದ ರಸ್ತೆ ಭಾಗಶಃ ಪೂರ್ಣಗೊಂಡಿದ್ದು ಈ ರಸ್ತೆಯಲ್ಲಿ ವಾಹನಗಳು ಎರಡೂ ಬದಿಯಿಂದ ಸಂಚರಿಸುತ್ತಿವೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.