ಸುಂದರ ಭವಿಷ್ಯಕ್ಕಾಗಿ ಸ್ಪಷ್ಟ ಗುರಿ ಅಗತ್ಯ: ಮೊಯಿಲಿ


Team Udayavani, Sep 21, 2018, 12:27 PM IST

21-sepctember-10.jpg

ಮಹಾನಗರ: ಯುವಜನತೆ ತಮ್ಮ ಭವಿಷ್ಯದ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ. ವಿದ್ಯಾರ್ಥಿಗಳು ಸುಂದರ ಭವಿಷ್ಯವನ್ನು ನಿರ್ಮಾಣ ಮಾಡಲು ಕಲಿಕಾ ಹಂತದಲ್ಲಿಯೇ ಸ್ಪಷ್ಟ ಗುರಿ ಹೊಂದಬೇಕು ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ತಿಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನ 150ನೇ ಸಂಸ್ಥಾಪನ ದಿನಾಚರಣೆ ಅಂಗವಾಗಿ ವಿ.ವಿ. ಕಾಲೇಜಿನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಮಂಗಳೂರು ವಿವಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಕೆಲ ವರ್ಷಗಳ ಹಿಂದೆ ಕಾಲೇಜಿನಲ್ಲಿ ಮೂಲ ಸೌಕರ್ಯ ವ್ಯವಸ್ಥೆಯ ಕೊರತೆ ಇತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕಾಲೇಜು ಬೆಳವಣಿಗೆ ಕಾಣುತ್ತಿದೆ. ಸಂಸ್ಥೆಯಲ್ಲಿರುವ 32 ಮಂದಿ ಬೋಧಕರು ಪಿಎಚ್‌.ಡಿ.ಪದವೀಧರರಾಗಿದ್ದು, ವರ್ಷದಿಂದ ವರ್ಷಕ್ಕೆ ಶಿಕ್ಷಣದ ಗುಣಮಟ್ಟ ಕೂಡ ಹೆಚ್ಚುತ್ತಿದೆ ಎಂದು ತಿಳಿಸಿದರು.

ಓದುವ ಹವ್ಯಾಸ ಕಡಿಮೆ
ಮಂಗಳೂರು ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿ ಪ್ರೊ| ಎಂ.ಐ. ಸವದತ್ತಿ ಮಾತನಾಡಿ, ಶಿಕ್ಷಕ ವೃತ್ತಿ ನಿರಂತರ ಕಲಿಯುವ ಉದ್ಯೋಗವಾಗಿದ್ದು, ಇತ್ತೀಚೆಗೆ ಕೆಲವು ಶಿಕ್ಷಕರಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಕೆಲವು ವಿದ್ಯಾರ್ಥಿಗಳು ಕೇವಲ ಪದವಿ ಗಳಿಸುವ ಏಕಮಾತ್ರ ಉದ್ದೇಶಗಳಿಂದ ಕಾಲೇಜುಗಳಿಗೆ ತೆರಳುತ್ತಿದ್ದಾರೆ ಎಂದರು. ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ| ಎ.ಎಂ. ಖಾನ್‌ ಪ್ರಾಸ್ತಾವಿಕ ಮಾತನಾಡಿ, ವಿಶ್ವವಿದ್ಯಾನಿಲಯ ಕಾಲೇಜು 150 ವರ್ಷಗಳನ್ನು ಪೂರೈಸಿದ ಸವಿನೆನಪಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿ.ವಿ. ಕಾಲೇಜು ಕ್ಯಾಂಪಸ್‌ಗೆ ಸಿಸಿ ಕೆಮರಾ ಅಳವಡಿಸಲಾಗುವುದು. ಕಾಲೇಜು ಕ್ಯಾಂಪಸ್‌ ಒಳಗೆ ವೈಫೈ ಝೋನ್‌ ಆಗಿ ಪರಿವರ್ತನೆ ಮಾಡುತ್ತೇವೆ. ಸಸ್ಯಶಾಸ್ತ್ರ ವಿಭಾಗದಿಂದ ಉದ್ಯಾನ ನಿರ್ಮಾಣ ಮಾಡಲಿದ್ದು, 150 ವಿವಿಧ ತಳಿಯ ಸಸ್ಯಗಳನ್ನು ನೆಡಲಾಗುತ್ತದೆ ಎಂದರು.

ಸಮ್ಮಾನ
ಸಮಾರಂಭದಲ್ಲಿ ಪ್ರೊ| ಎಂ.ಐ. ಸವದತ್ತಿ ಅವರನ್ನು ಸಮ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ವಿ.ವಿ. ಕಾಲೇಜು ಮಂಗಳೂರಿನ ಪ್ರಾಂಶುಪಾಲ ಡಾ| ಉದಯಕುಮಾರ್‌ ಎಂ.ಎ., ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ., ಮೇಯರ್‌ ಭಾಸ್ಕರ್‌ ಕೆ., ಮಂಗಳೂರು ವಿ.ವಿ. ಕುಲಪತಿ (ಪ್ರಭಾರ) ಪ್ರೊ| ಕಿಶೋರ್‌ ಕುಮಾರ್‌ ಸಿ.ಕೆ., ಪಾಲಿಕೆ ಮುಖ್ಯಸಚೇತಕ ಶಶಿಧರ ಹೆಗ್ಡೆ, ಜೆಡಿಎಸ್‌ ಯುವಾಧ್ಯಕ್ಷ ಅಕ್ಷಿತ್‌ ಸುವರ್ಣ, ಕಾರ್ಪೊರೇಟರ್‌ ವಿನಯರಾಜ್‌ ಮೊದಲಾದವರು ಉಪಸ್ಥಿತರಿದ್ದರು. 

ಸಂಶೋಧನೆಯಲ್ಲಿ ತೊಡಗಿ
ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯ ಅಗತ್ಯವಿದೆ. ವಿದ್ಯಾರ್ಥಿಗಳು ಪದವಿ ಕಲಿಯುವ ಹಂತದಲ್ಲಿಯೇ ಸಂಶೋಧನೆಯಲ್ಲಿ ತೊಡಗಬೇಕು. ಕಾಲೇಜುಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಿಕೊಡಬೇಕಿದೆ. ಶಿಕ್ಷಕರು ಪಠ್ಯದ ಜತೆಗೆ ವಿದ್ಯಾರ್ಥಿಗಳಿಗೆ ಉತ್ತಮ ಗುಣಗಳನ್ನು ಕಲಿಸಬೇಕು. ದೇಶದಲ್ಲಿ ಬೇರೊಬ್ಬರನ್ನು ದೂಷಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಕಾಲೇಜುಗಳ ಬೆಳವಣಿಗೆಯ ದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರಕಾರಗಳು ಸಹಾಯ ಮಾಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ನಾಯಕತ್ವ ಗುಣ ಕಡಿಮೆಯಾಗಿದೆ ಎಂದು ಪ್ರೊ| ಎಂ.ಐ. ಸವದತ್ತಿ ಹೇಳಿದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.