ಮಾರ್ಗಸೂಚಿಯಂತೆ ಕಂಬಳ ಆಯೋಜನೆ: ಸಮಿತಿ
Team Udayavani, Sep 22, 2018, 9:54 AM IST
ಮಂಗಳೂರು: ರಾಜ್ಯ ಸರಕಾರ ಕಾನೂನಿನಲ್ಲಿ ನೀಡಿರುವ ಮಾರ್ಗಸೂಚಿಯಂತೆಯೇ ಕಂಬಳ ಕ್ರೀಡೆ ಆಯೋಜನೆಗೊಳ್ಳಲಿದೆ ಎಂದು ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯ ದರ್ಶಿ ಎಂ. ರಾಜೀವ ಶೆಟ್ಟಿ ಎಡೂ¤ರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಸೆ. 23ರಂದು ಮೂಡಬಿದಿರೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ವಿಶೇಷ ಸಭೆ ಆಯೋಜಿಸಲಾಗಿದ್ದು ಕಾನೂನಿನಲ್ಲಿ ನೀಡಿರುವ ಮಾರ್ಗಸೂಚಿಯಂತೆ ಕಂಬಳ ಆಯೋಜಿಸುವ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ಕಂಬಳಗಳಲ್ಲಿ ಭಾಗವಹಿಸುವ ಎಲ್ಲ ಯಜ ಮಾನರು, ಕಂಬಳ ವ್ಯವಸ್ಥಾಪಕರು, ತೀರ್ಪುಗಾರರು, ಓಟಗಾರರು ಕಂಬಳಾಭಿಮಾನಿಗಳು ಭಾಗವಹಿಸ ಲಿದ್ದಾರೆ ಎಂದರು.
ಕೇಂದ್ರ ಸಚಿವ ಸದಾನಂದ ಗೌಡ ಶುಭಾಶಂಸನೆ ಮಾಡಲಿದ್ದು ಮಾಜಿ ಸಚಿವ ಅಭಯಚಂದ್ರ ಜೈನ್ ಸಭೆಯನ್ನು ಉದ್ಘಾಟಿಲಿಸುವರು. ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್. ಶೆಟ್ಟಿ ಕೂಳೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಉಮಾನಾಥ ಕೋಟ್ಯಾನ್,ಡಾ| ಜೀವಂಧರ್ ಬಲ್ಲಾಳ್, ರೋಹಿತ್ ಹೆಗ್ಡೆ ಮತ್ತಿತರರು ಭಾಗವಹಿಸಲಿದ್ದಾರೆ.ಸಭೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಲಿದೆ ಎಂದರು.ಜಿಲ್ಲಾ ಕಂಬಳ ಸಮಿತಿ ಕೋಶಾಧಿ ಕಾರಿ ಸುರೇಶ್ ಕೆ. ಪೂಜಾರಿ, ಕಾರ್ಯ ದರ್ಶಿ ತ್ರಿಶಾಲ್ ಕೆ. ಪೂಜಾರಿ, ಮಾಜಿ ಜಿಲ್ಲಾ ಸಂಚಾಲಕ ಸೀತಾರಾಮ ಶೆಟ್ಟಿ, ಕಂಬಳ ತೀರ್ಪುಗಾರ ಅಪ್ಪು ಯಾನೆ ವಲೇರಿಯನ್ ಡೇಸಾ ಉಪಸ್ಥಿತರಿದ್ದರು.
ಪೆಟಾ ದಾವೆ: ಮಾಹಿತಿ ಇಲ್ಲ
ಕಂಬಳ ವಿರುದ್ಧ ಪೆಟಾ ಸಂಘಟನೆ ಮತ್ತೆ ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿರುವ ಬಗ್ಗೆ ನಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಕಂಬಳ ಕ್ರೀಡೆಗಿದ್ದ ಕಾನೂನು ತೊಡಕುಗಳು ನಿವಾರಣೆಯಾಗಿದ್ದು ಕಳೆದ ಬಾರಿ ಕಂಬಳ ಸುವ್ಯವಸ್ಥಿತವಾಗಿ ನೆರವೇರಿದೆ. ಸರಕಾರ ನೀಡಿರುವ 12 ಮಾರ್ಗಸೂಚಿಗಳನ್ನು ಪಾಲಿಸಲು ಕಂಬಳ ಸಮಿತಿ ಬದ್ಧವಾಗಿದ್ದು ಇದರ ಕೆಲವು ಮಾರ್ಗಸೂಚಿಗಳಲ್ಲಿ ಸ್ವಲ್ಪ ಬದಲಾವಣೆ ಮಾಡುವಂತೆ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ