ಹಾಸ್ಟೆಲ್‌ ದುರಸ್ತಿಗೆ ಸರಕಾರದ ನಿರಾಸಕ್ತಿ


Team Udayavani, Sep 24, 2018, 10:02 AM IST

24-sepctember-1.jpg

ಮಹಾನಗರ: ಕೊಡಿಯಾಲ ಬೈಲ್‌ನಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕುದ್ಮುಲ್‌ ರಂಗರಾವ್‌ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿದ್ದ ಸುಮಾರು 150 ಮಂದಿ ವಿದ್ಯಾರ್ಥಿ ನಿಯರು ಒಂದು ವರ್ಷದಿಂದ ಖಾಸಗಿ ಕಟ್ಟಡದಲ್ಲಿ ನೆಲೆಸಿದ್ದಾರೆ. ಆದರೆ, ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹೆಣ್ಣು ಮ ಕ್ಕಳ ವಸತಿ ನಿಲಯದ ದುರಸ್ತಿಗೆ ಸರಕಾರಕ್ಕೆ ಸಲ್ಲಿಸಿರುವ ಅಂದಾಜು ಪಟ್ಟಿಯು ಕಡತದಲ್ಲಿಯೇ ಬಾಕಿಯಾಗಿದ್ದು, ಖಾಸಗಿ ಕಟ್ಟಡಕ್ಕೆ ಪ್ರತಿ ತಿಂಗಳು ಒಂದು ಲಕ್ಷ ರೂ. ಬಾಡಿಗೆ ನೀಡಬೇಕಾದ ಅನಿವಾರ್ಯ ಎದುರಾಗಿದೆ.

ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ದೂರದ ಊರಿನ ವಿದ್ಯಾರ್ಥಿನಿಯರಿಗೆ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸುವ ನಿಟ್ಟಿನಲ್ಲಿ ದಿ| ಕುದ್ಮುಲ್‌ ರಂಗರಾವ್‌ ಹೆಣ್ಣು ಮಕ್ಕಳ ವಸತಿ ನಿಲಯ ಮೂವತ್ತು ವರ್ಷಗಳ ಹಿಂದೆಯೇ ಸ್ಥಾಪನೆಗೊಂಡಿತ್ತು. ಆದರೆ ವರ್ಷಗಳ ಹಿಂದೆ ಈ ಕಟ್ಟಡ ವಾಸಯೋಗ್ಯವಲ್ಲ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ಇಲಾಖೆ ಇಲ್ಲಿಂದ ವಿದ್ಯಾರ್ಥಿನಿಯರನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರಗೊಳಿಸಿ, ವಸತಿ ನಿಲಯದ ದುರಸ್ತಿಗೆ ಸರಕಾರಕ್ಕೆ ಮನವಿ ಮಾಡಿತ್ತು. ಆದರೆ ವರ್ಷಗಳೇ ಸಂದರೂ ಸರಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಖಾಸಗಿ ಕಟ್ಟಡಕ್ಕೆ ದುಬಾರಿ ಬಾಡಿಗೆ ನೀಡುವಂತಾಗಿದೆ.

ವಿದ್ಯಾರ್ಥಿನಿ ನಿಲಯ ವಾಸಯೋಗ್ಯವಲ್ಲ: ವರದಿ
ವರ್ಷಗಳ ಹಿಂದೆ ವಿದ್ಯಾರ್ಥಿನಿಯರು ಕಟ್ಟಡದ ಒಳಗೆ ಇದ್ದ ಸಂದರ್ಭದಲ್ಲಿಯೇ ಕಟ್ಟಡದ ಸ್ಲ್ಯಾಬ್ ತುಂಡು ಬಿದ್ದ ಹಿನ್ನೆಲೆಯಲ್ಲಿ ಇಲಾಖೆ ಎಚ್ಚೆತ್ತುಕೊಂಡಿತ್ತು. ಜಿಲ್ಲಾ ಪಂಚಾಯತ್‌ನ ಎಂಜಿನಿಯರ್‌ ಗಳಿಂದ ವರದಿ ಕೇಳಿತ್ತು. ಜಿಲ್ಲಾ ಪಂಚಾಯತ್‌ನ ಕಾರ್ಯನಿರ್ವಾಹಕ ಅಭಿಯಂತರರು 2017 ಜೂನ್‌ನಲ್ಲಿ ಕಟ್ಟಡ ಪರಿಶೀಲಿಸಿ, ವಸತಿ ನಿಲಯ ಕಟ್ಟಡದ ನೆಲ ಮಹಡಿಯ ಕಾಲಂಗಳ ಕಬ್ಬಿಣವು ಸಂಪೂರ್ಣ ತುಕ್ಕು ಹಿಡಿದಿದ್ದು, ಕೆಲವು ಕಡೆಗಳಲ್ಲಿ ಬಿರುಕು ಬಿಟ್ಟಿದೆ. ಒಂದನೇ ಮಹಡಿಯ ಛಾವಣಿಯಲ್ಲಿ ಹಲವು ಕಡೆ ಬಿರುಕು ಕಾಣಿಸಿದೆ. ಎರಡನೇ ಮಹಡಿಯ ಕಾಂಕ್ರೀಟ್‌ ಬಿರುಕು ಬಿಟ್ಟಿದೆ. ಎಲ್ಲ ಮಹಡಿಗಳ ಛಾವಣಿಯ ಕಬ್ಬಿಣಗಳು ತುಕ್ಕು ಹಿಡಿದಿದೆ. ಆ ಹಿನ್ನೆಲೆಯಲ್ಲಿ ವಸತಿ ನಿಲಯದ ಕಟ್ಟಡ ವಾಸಕ್ಕೆ ಯೋಗ್ಯವಲ್ಲ ಹಾಗೂ ವಾಸವಿದ್ದಲ್ಲಿ ಅಪಾಯವಿದೆ. ಈ ಬಗ್ಗೆ ತಜ್ಞರಿಂದ ತಾಂತ್ರಿಕ ಅಭಿಪ್ರಾಯವನ್ನು ಕೂಡಲೇ ಪಡೆದುಕೊಳ್ಳಬೇಕು ಎಂದು ವರದಿ ನೀಡಿದ್ದರು. 

ಅಂದಾಜು ಪಟ್ಟಿ ಸಲ್ಲಿಕೆ
ಕೊಡಿಯಾಲಬೈಲ್‌ನ ಹೆಣ್ಣು ಮಕ್ಕಳ ವಸತಿ ನಿಲಯ ವಾಸಯೋಗ್ಯವಲ್ಲ ಎಂದು ಅರಿತ ಬಳಿಕ ವಿದ್ಯಾರ್ಥಿನಿಯರನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸಿ, ಕಟ್ಟಡದ ದುರಸ್ತಿಗಾಗಿ ಅಂದಾಜು ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಿದ್ದೇವೆ. ಶೀಘ್ರವೇ ಸರಕಾರ ಸ್ಪಂದಿಸುವ ನಿರೀಕ್ಷೆ ಇದೆ.
– ಯೋಗೀಶ್‌,
ಸಮಾಜ ಕಲ್ಯಾಣಾಧಿಕಾರಿ, ದ.ಕ.

ಸರಕಾರ ಎಚ್ಚೆತ್ತುಕೊಳ್ಳಲಿ
ಸಮಾಜ ಕಲ್ಯಾಣ ಇಲಾಖೆಯು ಸ್ವಂತ ಕಟ್ಟಡ ಹೊಂದಿದ್ದರೂ ಸೂಕ್ತ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ಈಗ ಬಾಡಿಗೆ ಕಟ್ಟಡಕ್ಕೆ ಮೊರೆ ಹೋಗಿದೆ. ಇದ ರಿಂದ ಉರ್ವ ಮಾರಿಗುಡಿ ಬಳಿ ಖಾಸಗಿ ಕಟ್ಟಡವನ್ನು ಬಾಡಿಗೆ ಪಡೆದ ಇಲಾಖೆ ವಿದ್ಯಾರ್ಥಿನಿಯರನ್ನು ಅಲ್ಲಿಗೆ ಸ್ಥಳಾಂತರಿಸಿದೆ. ಕಟ್ಟಡಕ್ಕೆ ತಿಂಗಳಿಗೆ ಒಂದು ಲಕ್ಷ ರೂ. ಬಾಡಿಗೆ ನೀಡಿ ಊಟದ ವ್ಯವಸ್ಥೆಯನ್ನು ಕಲ್ಪಿಸುವ ಕೆಲಸ ಮಾಡುತ್ತಿದೆ. ಸರಕಾರ ಈ ಬಗ್ಗೆ ಎಚ್ಚೆತ್ತು ಹೆಣ್ಣು ಮಕ್ಕಳ ವಸತಿ ನಿಲಯದ ಸ್ವಂತ ಕಟ್ಟಡವನ್ನು ದುರಸ್ತಿ ಮಾಡಬೇಕಾಗಿದೆ.

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.