ನೇತ್ರಾವತಿ, ಫಲ್ಗುಣಿಗೆ 400 ಕೋ.ರೂ. ವೆಚ್ಚದ ನದಿ ದಂಡೆ


Team Udayavani, Sep 24, 2018, 10:12 AM IST

netravati.jpg

ಮಂಗಳೂರು: ಸಬರಮತಿ, ಬ್ರಹ್ಮಪುತ್ರ ನದಿ ದಂಡೆಯಲ್ಲಿ ಸಂರಕ್ಷಣೆ ಕೈಗೊಂಡ ಮಾದರಿಯಲ್ಲಿ ದ. ಕನ್ನಡ ಜಿಲ್ಲೆಯ ನೇತ್ರಾವತಿ ಹಾಗೂ ಫಲ್ಗುಣಿ ನದಿ ದಂಡೆಗಳಲ್ಲೂ ಕೈಗೊಳ್ಳಲು ರಾಜ್ಯ ಸಣ್ಣ ನೀರಾವರಿ ಇಲಾಖೆ ನಿರ್ಧರಿಸಿದೆ. ಭಾರೀ ಪ್ರವಾಹದಿಂದ ಕೊರೆದು ಆಗುವ ಹಾನಿಯನ್ನು ತಪ್ಪಿಸುವುದು ಇದರ ಉದ್ದೇಶ. 

ನೇತ್ರಾವತಿ ನದಿಯಲ್ಲಿ ಬಿ.ಸಿ. ರೋಡ್‌ನ‌ ಸೇತುವೆಯಿಂದ ಮಂಗಳೂರಿನ ಅಳಿವೆ ಬಾಗಿಲುವರೆಗೆ ಹಾಗೂ ಫಲ್ಗುಣಿ ನದಿಯಲ್ಲಿ ಗುರುಪುರ ಡ್ಯಾಂನಿಂದ ಸಮುದ್ರ ಸೇರುವ ಪ್ರದೇಶದವರೆಗಿನ ದಂಡೆ ನಿರ್ಮಾಣಕ್ಕೆ ಪ್ರಾಥಮಿಕವಾಗಿ ಯೋಚಿಸಲಾಗಿದೆ. ಈ ಸಂಬಂಧ 400 ಕೋಟಿ ರೂ.ಗಳ ಪ್ರಸ್ತಾವನೆಯನ್ನು ದ.ಕ. ಸಣ್ಣ ನೀರಾವರಿ ಇಲಾಖೆಯು ಸರಕಾರಕ್ಕೆ ಸಲ್ಲಿಸಿದೆ. ಕೇಂದ್ರ ಸರಕಾರದ ನೆರವು ಪಡೆದು ಅನುಷ್ಠಾನಕ್ಕೆ ಉದ್ದೇಶಿಸಲಾಗಿದೆ.

ಪ್ರಸ್ತಾವನೆ ಸಂಬಂಧ ಎರಡೂ ನದಿ ಪಾತ್ರದಲ್ಲಿ ಹಿಂದೆ ಪ್ರಾಥಮಿಕ ಸರ್ವೇ ಕೂಡ ನಡೆಸಲಾಗಿತ್ತು. ಮತ್ತೂಮ್ಮೆ ಸರ್ವೇ ನಡೆಸಿ ವರದಿ ನೀಡುವಂತೆ ರಾಜ್ಯ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ವೇಗೆ ಸಚಿವ ಸಿ.ಎಸ್‌. ಪುಟ್ಟರಾಜು ಒಪ್ಪಿಗೆ ನೀಡಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಲಾಭವೇನು?
ಈ ಬಾರಿ ಭಾರೀ ಮಳೆಯಿಂದ ನೇತ್ರಾವತಿ ಹಾಗೂ ಫಲ್ಗುಣಿ ಉಕ್ಕಿ ಹರಿದಿದ್ದವು. ನದಿ ದಡದ ಕೃಷಿ, ವಸತಿ ಪ್ರದೇಶಕ್ಕೆ ಹಾನಿಯಾಗಿತ್ತು. ನದಿದಂಡೆ ನಿರ್ಮಿಸಿ ನದಿ ಪಾತ್ರದ ಜನರಿಗೆ ನೆರೆ ನೀರಿನ ಸಮಸ್ಯೆ ಆಗದಂತೆ ಕಾಪಾಡುವುದು ಯೋಜನೆಯ ಮುಖ್ಯ ಗುರಿ. ಪ್ರವಾಸೋದ್ಯಮಕ್ಕೂ ಇದು ಪೂರಕ ವಾತಾವರಣ ನಿರ್ಮಿಸಬಹುದು. 
ಅಗತ್ಯವಿದ್ದಲ್ಲಿ  ಮಾತ್ರ! ಪ್ರಸ್ತಾವಿತ ಯೋಜನೆಯಂತೆ ಎರಡೂ ನದಿಗಳ ಉದ್ದಕ್ಕೆ ದಂಡೆ ನಿರ್ಮಾಣದ ಉದ್ದೇಶವಿಲ್ಲ, ಬಹಳ ಅಗತ್ಯ ಇದ್ದಲ್ಲಿ ಮಾತ್ರ ಕಾಂಕ್ರೀಟ್‌ ಅಥವಾ ಇತರ ಮಾದರಿಯ ದಂಡೆ ನಿರ್ಮಿಸಲಾಗುತ್ತದೆ. 
ಪ್ರವಾಸೋದ್ಯಮ ಸ್ನೇಹಿ ಸಬರಮತಿ ನದಿದಂಡೆ.

ಗುಜರಾತ್‌ನ ಸಬರಮತಿಯನ್ನು “ನದಿ ದಂಡೆ ಸಂರಕ್ಷಣ ಯೋಜನೆಯಡಿ’ ಅಭಿವೃದ್ಧಿಪಡಿಸಲಾಗಿದೆ. ನೀರು ಕೃಷಿ, ವಸತಿ ಪ್ರದೇಶಗಳಿಗೆ ನುಗ್ಗದಂತೆ ಮುನ್ನೆಚ್ಚರಿಕೆ ಒಂದಾದರೆ, ತೀರ ಪ್ರದೇಶವನ್ನು ಪ್ರವಾಸೋದ್ಯಮ ಹಾಗೂ ಪರಿಸರಪೂರಕವಾಗಿ ಮಾಡುವುದು ಯೋಜನೆಯ ಉದ್ದೇಶ. ಪ್ರಸ್ತುತ ಯೋಜನೆಯಿಂದಾಗಿ ಅಲ್ಲಿ ಪ್ರವಾಸೋದ್ಯಮ ಪೂರಕ ಚಟುವಟಿಕೆಗಳು ಗರಿ ಗೆದರಿವೆ. ಬ್ರಹ್ಮಪುತ್ರ ನದಿ ಭಾಗದಲ್ಲೂ ಅಗತ್ಯವಿರುವ ಪ್ರದೇಶಗಳಲ್ಲಿ ಕಾಂಕ್ರೀಟ್‌ ದಂಡೆ ನಿರ್ಮಿಸಲಾಗಿದೆ. ನರ್ಮದಾ ನದಿಯಲ್ಲೂ ಕೆಲವೆಡೆ ನದಿ ದಂಡೆ ನಿರ್ಮಾಣ ಮಾಡಲಾಗಿದೆ.

ನದಿ ತೀರ ಸಂಪರ್ಕಿಸುವ ರಸ್ತೆ
ನೇತ್ರಾವತಿ ಹಾಗೂ ಫಲ್ಗುಣಿ ನದಿ ದಂಡೆ ಯೋಜನೆ ಜಾರಿ ಸಂದರ್ಭ ಹಲವು ವರ್ಷದಿಂದ ಬಾಕಿಯುಳಿದಿರುವ ಮಂಗಳಾ ಕಾರ್ನಿಷ್‌ ಯೋಜನೆಗೆ ಮರುಜೀವ ದೊರೆಯಬಹುದೇ ಎಂಬ ಆಶಾಭಾವ ಈಗ ಮೂಡಿದೆ. ನೇತ್ರಾವತಿ ಹರಿಯುವ ಜಪ್ಪು ಸೇತುವೆಯಲ್ಲಿಂದ ಫಲ್ಗುಣಿ ನದಿಯ ಕೂಳೂರುವರೆಗೆ ನದಿಯ ಪಕ್ಕ ರಸ್ತೆ ನಿರ್ಮಿಸುವ ಈ ಯೋಜನೆ ಘೋಷಣೆಯಲ್ಲಿ ಬಾಕಿಯಾಗಿದೆ. ನದಿದಂಡೆ ಅನುಷ್ಠಾನಗೊಂಡಲ್ಲಿ ಮಂಗಳಾ ಕಾರ್ನಿಷ್‌ ಯೋಜನೆಯೂ ಜಾರಿಯಾಗಿ ಪ್ರವಾಸೋದ್ಯಮ ಅಭಿವೃದ್ಧಿಯ ಹೊಸ ನಿರೀಕ್ಷೆಯನ್ನು ಆಶಿಸಬಹುದು.

ನೇತ್ರಾವತಿ ಹಾಗೂ ಫಲ್ಗುಣಿಗೆ ನದಿದಂಡೆ ಸಂರಕ್ಷಣಾ ಕಾಮಗಾರಿ ಕೈಗೊಳ್ಳಲು ಮಾಸ್ಟರ್‌ಪ್ಲ್ಯಾನ್‌ ಸಿದ್ಧಪಡಿಸಲಾಗುತ್ತಿದೆ. ನೆರೆ ನೀರು ಕೃಷಿ, ವಸತಿ ಪ್ರದೇಶಕ್ಕೆ ನುಗ್ಗುವ ಸ್ಥಳದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಶೀಘ್ರ ಸೂಕ್ತ ಸರ್ವೇ ನಡೆಸಲಾಗುವುದು.
ಗೋಕುಲ್‌ದಾಸ್‌, ಕಾ.ಪಾ. ಎಂಜಿನಿಯರ್‌, ಸಣ್ಣ ನೀರಾವರಿ ಇಲಾಖೆ, ದ.ಕ.

* ದಿನೇಶ್‌ ಇರಾ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.