ಕುಸಿದ ನೀರಿನ ಮಟ್ಟ; ಉಪ್ಪು ನೀರು ನುಗ್ಗುವ ಸಾಧ್ಯತೆ


Team Udayavani, Sep 24, 2018, 10:12 AM IST

24-sepctember-2.jpg

ಬಜಪೆ: ಮಳವೂರು ಬಹು ಗ್ರಾಮ ಕುಡಿಯುವ ನೀರು ಯೋಜನೆಯ ವೆಂಟೆಡ್‌ ಡ್ಯಾಂ ನೀರಿನ ಮಟ್ಟ ಕುಸಿದಿದ್ದು ಕುಡಿಯುವ ನೀರಿಗೆ ಆಪತ್ತು ಬರುವ ಸನ್ನಿವೇಶ ಎದುರಾಗಿದೆ. ಡ್ಯಾಂನ ನೀರು ಮತ್ತು ಹರಿಯುವ ನೀರಿನ ಮಟ್ಟ ಕೇವಲ ಒಂದು ಅಡಿಯಷ್ಟೇ ಏರುಪೇರು. ಇಲ್ಲಿಗೆ ತುರ್ತಾಗಿ ಹಲಗೆ ಹಾಕದಿದ್ದಲ್ಲಿ ಉಪ್ಪು ನೀರು ಕುಡಿಯುವ ನೀರಿನೊಂದಿಗೆ ಸೇರಿ ಕುಡಿಯುವ ನೀರಿಗೆ ಆಪತ್ತು ಎದುರಾಗಲಿದೆ.

ಮೊದಲಿಗೆ 7 ಗ್ರಾ.ಪಂ.ನ 11 ಗ್ರಾಮಗಳಿಗೆ ಮಳವೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಳಿಕ ಸೂರಿಂಜೆ, ಕೊಳಂಬೆ ಸೌಹಾರ್ದ ನಗರ, ದೇಲಂತಬೆಟ್ಟು ಸಹಿತ 14 ಗ್ರಾಮಗಳಿಗೆ ಈ ಕುಡಿಯುವ ನೀರಿನ ಯೋಜನೆ ವಿಸ್ತರಿಸಿದೆ. ಒಟ್ಟು 80 ಕಿಂಡಿಗಳಿದ್ದು 320 ಹಲಗೆಗಳಿವೆ. ಗುರುಪುರ ನದಿಗೆ ಹಾಕಲಾದ ಈ ವೆಂಟೆಡ್‌ ಡ್ಯಾಂಗೆ ನೀರಿನ ಹರಿವು ನೋಡಿ ಕಳೆದ ನವೆಂಬರ್‌ ತಿಂಗಳಲ್ಲಿ ಹಲಗೆ ಹಾಕಲಾಗಿತ್ತು. ಆದರೆ ಈ ಬಾರಿ ನೀರಿನ ಮಟ್ಟ ಒಮ್ಮೆಲೇ ತಗ್ಗಿದ ಕಾರಣ ಒಂದು ವಾರದೊಳಗೆ ಮತ್ತೆ ಹಲಗೆ ಹಾಕಬೇಕಾದ ಅನಿವಾರ್ಯತೆ ಇದೆ.

ತಿಂಗಳಲ್ಲೇ ಇಳಿದ ನೀರಿನ ಮಟ್ಟ
ಒಂದೇ ತಿಂಗಳಲ್ಲಿ ನದಿಯ ನೀರಿನ ಮಟ್ಟ 8 ಅಡಿ ಇಳಿದಿದೆ. ಆ.16ಕ್ಕೆ ವೆಂಟೆಡ್‌ ಡ್ಯಾಂ ಮೇಲಿಂದ ಹರಿಯುತ್ತಿದ್ದ ನೀರು ಈಗ 8 ಅಡಿಯಷ್ಟು ತಗ್ಗಿದ್ದು ವೆಂಟೆಡ್‌ ಡ್ಯಾಂ ಹಲಗೆ ಹಾಕುವಲ್ಲಿ ಕೇವಲ ಒಂದು ಅಡಿಯಷ್ಟು ನೀರಿದೆ.

ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಸಮಿತಿಗೆ ಆಯ್ಕೆ
ಸೆ.15ಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಗೆ ಆಯ್ಕೆ ನಡೆದಿದೆ. ಜೋಕಟ್ಟೆ ಗ್ರಾ.ಪಂ. ಅಧ್ಯಕ್ಷರು ಈ ಸಮಿತಿಯ ಅಧ್ಯಕ್ಷರು. ಪೆರ್ಮದೆ ಗ್ರಾ.ಪಂ.ಅಧ್ಯಕ್ಷರು ಈ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ. ಡ್ಯಾಂ ಬಗ್ಗೆ ಪ್ರತಿ ತಿಂಗಳು ಸಭೆ ಕರೆದು ಚರ್ಚೆಸಿ ನಿರ್ವಹಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಕೊಳಂಬೆ ಸೌಹಾರ್ದನಗರ ಮಾತ್ರ ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತಿದ್ದು ಉಳಿದೆಲ್ಲ ಮೂಲ್ಕಿ- ಮೂಡಬಿದಿರೆ ಕ್ಷೇತ್ರದ ವ್ಯಾಪ್ತಿಯು ಈ ಯೋಜನೆಯನ್ನು ಅವಲಂಬಿಸಿದೆ.

ನೀರಿನ ಮಟ್ಟ ಕಡಿಮೆ
ಗ್ರಾ.ಪಂ.ವ್ಯಾಪ್ತಿಯ ಬಾವಿ, ಕೆರೆಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಮಾರ್ಚ್‌, ಎಪ್ರಿಲ್‌ ತಿಂಗಳಲ್ಲಿ ನೀರು ಹರಿಯುವ ತೋಡುಗಳಲ್ಲಿ ನೀರಿನ ಹರಿವು ಈಗಾಗಲೇ ಕಡಿಮೆಯಾಗಿದ್ದು ಶೀಘ್ರದಲ್ಲೇ ಬತ್ತಲಿದೆ. 15 ದಿನಗಳೊಳಗೆ ಮಳೆ ಬಾರದೇ ಇದ್ದಲ್ಲಿ ಮಳವೂರು ವೆಂಟೆಡ್‌ ಡ್ಯಾಂಗೆ ಹಲಗೆ ಹಾಕಲೇಬೇಕು. ಉಪ್ಪು ನೀರು ಕುಡಿಯುವ ನೀರಿಗೆ ಸೇರದಂತೆ ಎಚ್ಚರ ವಹಿಸಬೇಕಾಗಿದೆ.
ಗಣೇಶ್‌ ಅರ್ಬಿ, ಮಳವೂರು
  ಗ್ರಾ.ಪಂ.ಅಧ್ಯಕ್ಷ

‡ ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.