ಮೂಡಬಿದಿರೆ: ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ
Team Udayavani, Sep 24, 2018, 3:41 PM IST
ಮೂಡಬಿದಿರೆ: ಸುಮಾರು ಎರಡು ವರ್ಷಗಳ ನಂತರ ಮೂಡಬಿದಿರೆಯಲ್ಲಿ ನೆತ್ತರು ಹರಿದಿದೆ. ಪ್ರಶಾಂತ್ ಪೂಜಾರಿ ಕೊಲೆ ಆರೋಪಿ ಇಮ್ತಿಯಾಜ್ ( 30) ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ.
ಮೂಡಬಿದಿರೆಯ ಹೊರವಲಯದ ಗಂಟಾಲ್ ಕಟ್ಟೆ ಎಂಬಲ್ಲಿ ಈ ಕೃತ್ಯ ನಡೆದಿದೆ. ಬೆಳಿಗ್ಗೆ6 ಗಂಟೆ ಸುಮಾರಿಗೆ ಕಾರಿನಲ್ಲಿ ಇಮ್ತಿಯಾಜ್ ಹೋಟೇಲಿಗೆ ಬಂದಿದ್ದ ದುಷ್ಕರ್ಮಿಗಳು ಚಹಾ ನೀಡುವಂತೆ ಕೇಳಿದ್ದರು. ಇಮ್ತಿಯಾಜ್ ಚಹಾ ಮಾಡಲು ಒಳ ಹೋದಾಗ ತಲವಾರಿನಿಂದ ಆತನ ತಲೆ, ಮತ್ತು ಕಾಲಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಮ್ತಿಯಾಜ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ವರ್ಷಗಳ ಹಿಂದೆ ಹಿಂದೂ ಸಂಘಟನೆಯ ಪ್ರಶಾಂತ್ ಪೂಜಾರಿಯನ್ನು ಹಾಡು ಹಗಲೇ ಕೊಚ್ಚಿ ಕೊಲ್ಲಲಾಗಿತ್ತು. ಇಮ್ತಿಯಾಜ್ ಈ ಪ್ರಕರಣದ ಆರೋಪಿಯಾಗಿದ್ದ. ಪ್ರಶಾಂತ್ ಪೂಜಾರಿ ಕೊಲೆಗೆ ಪ್ರತಿಕಾರವಾಗಿ ಈ ಕೊಲೆ ಯತ್ನ ನಡೆದಿರಬಹುದು ಎಂದು ಶಂಕಿಸಲಾಗಿದೆ. ದುಷ್ಕರ್ಮಿಗಳು ಪರಾರಿಯಾಗಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬಿಸಿದ್ದಾರೆ .
ಎರಡು ವರ್ಷಗಳ ಹಿಂದೆ ಕೊಲೆಯಾಗಿದ್ದ ಪ್ರಶಾಂತ್ ಪೂಜಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು
ಜೆಡಿಎಸ್ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್ ಬಾವಾ
ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ
“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ