ಗುರುಕಂಬಳ: ಹಿಂದೂ ಮುಖಂಡನ ಕೊಲೆಯತ್ನ
Team Udayavani, Sep 25, 2018, 10:40 AM IST
ಗುರುಪುರ: ಹಿಂದೂ ಸಂಘಟನೆಯ ಮುಖಂಡ, ಪೊಳಲಿ ನಿವಾಸಿ ಹರೀಶ್ ಶೆಟ್ಟಿ ಯಾನೆ ಶೆಟ್ಟಿ ಹರೀಶ್(38) ಅವರನ್ನು ನಾಲ್ವರ ತಂಡವೊಂದು ಕಡಿದು ಕೊಲೆಗೆತ್ನಿಸಿದ ಘಟನೆ ಗುರುಪುರ ಕೈಕಂಬ ಸಮೀಪದ ಗುರುಕಂಬಳ ಶಾಲೆಯ ಮುಂಭಾಗದ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ 8ರ ಸುಮಾರಿಗೆ ಸಂಭವಿಸಿದೆ.
ಘಟನೆಯ ವಿವರ
ಹರೀಶ್ ಶೆಟ್ಟಿ ಅವರು ರಾಜ್ ಅಕಾಡೆಮಿ ಸಮೀಪ ಇರುವ ಪತ್ನಿ ಮನೆಗೆ ದಿನಸಿ ಸಾಮಗ್ರಿಗಳನ್ನು ಹಿಡಿದುಕೊಂಡು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಬೈಕ್ ಗುರುಕಂಬಳ ಸಮೀಪ ಸಾಗುತ್ತಿದ್ದಾಗ ಎರಡು ಬೈಕ್ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ತಂಡ ಹರೀಶ್ ಅವರನ್ನು ತಲವಾರಿನಲ್ಲಿ ಕಡಿದು ಪರಾರಿಯಾಗಿದ್ದಾರೆ. ಇವರ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ಬಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕೈ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರು ಬಸ್ಸಿನ ಟೈಂ ಕೀಪರ್ ಆಗಿದ್ದು ಎಲ್ಲರೊಂದಿಗೆ ಆತ್ಮೀಯರಾಗಿದ್ದರು. ಹಿಂದೂ ಸಂಘಟನೆಗಳ ಮೂಲಕ ಕೆಲವೊಂದು ಸಮಾಜಮುಖೀ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ. ಈ ಹಲ್ಲೆ ಯಾಕಾಗಿ ನಡೆದಿದೆ ಎನ್ನುವುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.
ಹಲ್ಲೆ ಸುದ್ದಿಯಾಗುತ್ತಿದ್ದಂತೆ ಕೈಕಂಬದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣ ಗೊಂಡಿತ್ತು. ಬಜಪೆ ಪೊಲೀಸರು ತತ್ಕ್ಷಣ ಧಾವಿಸಿ ಬಿಗು ಬಂದೋಬಸ್ತ್ ಕೈಗೊಂಡಿದ್ದಾರೆ. ಶಾಸಕ ಭರತ್ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ