ಗುರುಕಂಬಳ: ಹಿಂದೂ ಮುಖಂಡನ ಕೊಲೆಯತ್ನ
Team Udayavani, Sep 25, 2018, 10:40 AM IST
ಗುರುಪುರ: ಹಿಂದೂ ಸಂಘಟನೆಯ ಮುಖಂಡ, ಪೊಳಲಿ ನಿವಾಸಿ ಹರೀಶ್ ಶೆಟ್ಟಿ ಯಾನೆ ಶೆಟ್ಟಿ ಹರೀಶ್(38) ಅವರನ್ನು ನಾಲ್ವರ ತಂಡವೊಂದು ಕಡಿದು ಕೊಲೆಗೆತ್ನಿಸಿದ ಘಟನೆ ಗುರುಪುರ ಕೈಕಂಬ ಸಮೀಪದ ಗುರುಕಂಬಳ ಶಾಲೆಯ ಮುಂಭಾಗದ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ 8ರ ಸುಮಾರಿಗೆ ಸಂಭವಿಸಿದೆ.
ಘಟನೆಯ ವಿವರ
ಹರೀಶ್ ಶೆಟ್ಟಿ ಅವರು ರಾಜ್ ಅಕಾಡೆಮಿ ಸಮೀಪ ಇರುವ ಪತ್ನಿ ಮನೆಗೆ ದಿನಸಿ ಸಾಮಗ್ರಿಗಳನ್ನು ಹಿಡಿದುಕೊಂಡು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಬೈಕ್ ಗುರುಕಂಬಳ ಸಮೀಪ ಸಾಗುತ್ತಿದ್ದಾಗ ಎರಡು ಬೈಕ್ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ತಂಡ ಹರೀಶ್ ಅವರನ್ನು ತಲವಾರಿನಲ್ಲಿ ಕಡಿದು ಪರಾರಿಯಾಗಿದ್ದಾರೆ. ಇವರ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ಬಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕೈ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರು ಬಸ್ಸಿನ ಟೈಂ ಕೀಪರ್ ಆಗಿದ್ದು ಎಲ್ಲರೊಂದಿಗೆ ಆತ್ಮೀಯರಾಗಿದ್ದರು. ಹಿಂದೂ ಸಂಘಟನೆಗಳ ಮೂಲಕ ಕೆಲವೊಂದು ಸಮಾಜಮುಖೀ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ. ಈ ಹಲ್ಲೆ ಯಾಕಾಗಿ ನಡೆದಿದೆ ಎನ್ನುವುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.
ಹಲ್ಲೆ ಸುದ್ದಿಯಾಗುತ್ತಿದ್ದಂತೆ ಕೈಕಂಬದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣ ಗೊಂಡಿತ್ತು. ಬಜಪೆ ಪೊಲೀಸರು ತತ್ಕ್ಷಣ ಧಾವಿಸಿ ಬಿಗು ಬಂದೋಬಸ್ತ್ ಕೈಗೊಂಡಿದ್ದಾರೆ. ಶಾಸಕ ಭರತ್ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ