ಅ. 14; ಮಂಗಳೂರು ದಸರಾ ಸಿಎಂ ಉದ್ಘಾಟನೆ: ಪೂಜಾರಿ


Team Udayavani, Oct 6, 2018, 9:55 AM IST

dasara.jpg

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಅ. 10ರಿಂದ 20ರವರೆಗೆ ನಡೆಯಲಿದೆ. ವೈಭವದ “ಮಂಗಳೂರು ದಸರಾ’ವನ್ನು ಅ. 14 ರಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದು, ಅ. 19ರಂದು ವೈಭವದ ಮಂಗಳೂರು ದಸರಾ ಮೆರವಣಿಗೆ ಸಂಪನ್ನ ಗೊಳ್ಳಲಿದೆ ಎಂದು ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ. 

ಕುದ್ರೋಳಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 10ರಂದು ಬೆಳಗ್ಗೆ 9 ಗಂಟೆಗೆ ಉತ್ಸವ ಆರಂಭವಾಗಲಿದೆ. 11.50ಕ್ಕೆ ನವದುರ್ಗೆ ಮತ್ತು ಶಾರದೆ ಪ್ರತಿಷ್ಠಾಪನೆ ನಡೆಯಲಿದ್ದು, ಇದರ ಉದ್ಘಾ  ಟನೆಯನ್ನು ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್‌. ಅವರು ನೆರವೇರಿ ಸು ವರು. ಅನಂತರ ಪ್ರತಿ ದಿನವೂ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 19ರಂದು ಸಂಜೆ 4ಕ್ಕೆ ಶೋಭಾ ಯಾತ್ರೆ ನಡೆಯಲಿದೆ ಎಂದರು.

ದಸರಾ ಉದ್ಘಾಟನೆಯ ಸಂದರ್ಭ ಸಚಿವ ಯು.ಟಿ. ಖಾದರ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್‌, ಶಾಸಕ ರಾದ ವೇದವ್ಯಾಸ ಕಾಮತ್‌, ಭೋಜೇ ಗೌಡ, ಹರೀಶ್‌ ಕುಮಾರ್‌, ಮೇಯರ್‌ ಭಾಸ್ಕರ್‌, ಬಿಲ್ಲವ ಮಹಾಮಂಡಲ ಅಧ್ಯಕ್ಷ ಜಯ ಸಿ. ಸುವರ್ಣ ಭಾಗವಹಿಸಲಿದ್ದಾರೆ ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್‌.ಎಸ್‌. ಸಾಯಿ ರಾಮ್‌, ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಕಾರ್ಯದರ್ಶಿ ಮಾಧವ ಸುವರ್ಣ, ಖಜಾಂಚಿ ಪದ್ಮರಾಜ್‌, ರವಿಶಂಕರ ಮಿಜಾರ್‌, ದೇವೇಂದ್ರ ಪೂಜಾರಿ, ಡಾ| ಬಿ.ಜಿ. ಸುವರ್ಣ, ಡಾ| ಅನಸೂಯಾ, ಬಿ.ವಿ. ಕಟ್ಟೆಮಾರ್‌, ಶ್ರೀಕರ ಪೂಜಾರಿ, ಚಿತ್ತರಂಜನ್‌ ಉಪಸ್ಥಿತರಿದ್ದರು. 

“ಏನೋ ಹೇಳಬೇಕು’ ಎಂದವರು ಸುಮ್ಮನಾದರು!
ಪತ್ರಿಕಾಗೋಷ್ಠಿಯಲ್ಲಿ ಜನಾರ್ದನ ಪೂಜಾರಿ ಅವರು, “ನಾನು ನಿಮಗೊಂದು ವಿಷಯ ಹೇಳಬೇಕು ಎಂದುಕೊಂಡಿ¨ªೇನೆ. ಹೇಳಬಾರದು ಎಂದಿದ್ದೆ… ಹೇಳಬೇಕೋ… ಬೇಡವೋ?’ ಎಂದು ಕೇಳಿದರು. “ಹೇಳಿ ಸರ್‌’ ಎಂದು ಸುದ್ದಿಗಾರರು ವಿನಂತಿಸಿದರು. ಮೈಕ್‌ ಕೈಗೆತ್ತಿಕೊಂಡ ಪೂಜಾರಿ ಅವರು ಒಂದು ಕ್ಷಣ ಏನೋ ಯೋಚಿಸಿ, “ಬೇಡ… ಬೇಡ… ಹೇಳುವುದಿಲ್ಲ’ ಎಂದು ಸುಮ್ಮನಾದರು. “ಹೇಳಿ’ ಎಂದು ಸುದ್ದಿಗಾರರು ಒತ್ತಾಯಿಸಿದರೂ ಪೂಜಾರಿಯವರು ಹೇಳಬೇಕಾದ ವಿಷಯವನ್ನು ಹೇಳದೆ ಮೌನ ವಹಿಸಿರುವುದು ಕುತೂಹಲ ಸೃಷ್ಟಿಸಿದೆ. 

ಪ್ರತಿ ಜಿಲ್ಲೆಯಿಂದ ಕಲಾತಂಡ
ಮಂಗಳೂರು ದಸರಾ ಮೆರವಣಿಗೆ ಯಲ್ಲಿ ಈ ಬಾರಿ ಸ್ತಬ್ಧ ಚಿತ್ರಗಳ ಜತೆಗೆ ರಾಜ್ಯದ 30 ಜಿಲ್ಲೆಗಳಿಂದ ವಿವಿಧ ಕಲಾತಂಡಗಳು ಕೂಡ ಭಾಗವಹಿಸಲಿವೆ. ಈ ಮೂಲಕ ರಾಜ್ಯದ ಎಲ್ಲ ಕಲಾಪ್ರಕಾರಗಳು ದಸರಾ ಮೆರವಣಿಗೆಯಲ್ಲಿ ಸಂಗಮಿಸಲಿವೆ. ವೇದಕುಮಾರ್‌ ಮೆರವಣಿಗೆಯನ್ನು ಸಂಘಟಿಸ ಲಿದ್ದು, 75ಕ್ಕೂ ಅಧಿಕ ಕಲಾ ತಂಡಗಳು, ಸ್ತಬ್ಧಚಿತ್ರಗಳು ಇರಲಿವೆ. ನಗರವನ್ನು ವಿದ್ಯುತ್‌ ದೀಪಗಳಿಂದ ಶೃಂಗರಿಸುವಂತೆ ವಿನಂತಿಸ ಲಾಗಿದ್ದು, ಸರ್ವರೂ ಸ್ಪಂದಿಸು  ತ್ತಿದ್ದಾರೆ ಎಂದು ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.