ಅಡ್ಡರಸ್ತೆಗಳ ಸೂಚನ ಫಲಕಗಳು ಅಡ್ಡ ಬಿದ್ದಿವೆ!


Team Udayavani, Oct 15, 2018, 10:37 AM IST

15-october-3.gif

ಮಹಾನಗರ: ಒಂದು ಕಡೆ ನಗರ ಸ್ಮಾರ್ಟ್‌ಸಿಟಿಯಾಗಿ ಪರಿವರ್ತನೆಯಾಗುತ್ತಿದೆ. ಇನ್ನೊಂದೆಡೆ, ಮಹಾನಗರಗಳಿಗೆ ಇರಲೇ ಬೇಕಾದ ಮೂಲಸೌಕರ್ಯಗಳು ಸಮರ್ಪಕವಾಗಿಲ್ಲ ಎನ್ನುವುದು ವಾಸ್ತವ. ಅದಕ್ಕೊಂದು ಉತ್ತಮ ನಿದರ್ಶನ ನಗರದ ಹಲವು ಬಡಾವಣೆಗಳಲ್ಲಿ ಅಡ್ಡಲಾಗಿ ಬಿದ್ದಿರುವ ಅಡ್ಡರಸ್ತೆ ನಾಮಫಲಕಗಳು!

ನಗರದ ಮುಖ್ಯರಸ್ತೆಗಳಿಂದ ಒಳ ರಸ್ತೆಗಳ ಕಡೆಗೆ ಸಾಗುವ ದಾರಿಯಲ್ಲಿ ಅಳವಡಿಸಲಾದ ಬಹುತೇಕ ಕಡೆಯ ಅಡ್ಡರಸ್ತೆ ಸೂಚನ ಫಲಕಗಳು ಸಮರ್ಪಕ ನಿರ್ವಹಣೆ ಇಲ್ಲದೆ ಹೆಸರಿಗಷ್ಟೇ ಇವೆ ಎಂಬಂತಾಗಿವೆ. ಇದರಿಂದ ಹೊಸದಾಗಿ ನಗರಕ್ಕೆ ಆಗಮಿಸುವ ಮಂದಿ ತಮ್ಮ ಪರಿಚಿತರು, ಸಂಬಂಧಿಕರು, ಸ್ನೇಹಿತರ ಮನೆಗಳಿಗೆ ದಾರಿ ಹುಡುಕುವುದೇ ಕಷ್ಟಕರವಾಗಿದೆ. ಈ ಬಗ್ಗೆ ಕ್ರಮ ಜರಗಿಸಬೇಕಾದ ಜನಪ್ರತಿನಿಧಿಗಳು ಹಾಗೂ ಮಹಾನಗರ ಪಾಲಿಕೆ ಮಾತ್ರ ಇತ್ತ ಗಮನಹರಿಸುತ್ತಿಲ್ಲ.

ಅಡ್ಡರಸ್ತೆ ಫಲಕದಲ್ಲಿನ ಹೆಸರೇ ಮಾಯ
ಜನರಿಗೆ ನಗರದ ವಿವಿಧ ಭಾಗಗಳಿಗೆ ದಾರಿ ತಿಳಿಸುವ ನಿಟ್ಟಿನಲ್ಲಿ ನಗರದ ಮುಖ್ಯ ಭಾಗಗಳಲ್ಲಿ ಸೂಚನ ಫಲಕಗಳನ್ನು ಕಳೆದ ಅವಧಿಯಲ್ಲಿ ಪಾಲಿಕೆ ಅಳವಡಿಸಿತ್ತು. ಆದಾದ ಬಳಿಕ ಮುಖ್ಯ ರಸ್ತೆಗಳಲ್ಲಿ ಸೂಚನ ಫಲಕಗಳ ಸಮಸ್ಯೆ ಬಗೆಹರಿಯಿತು. ಆದರೆ ಇದೀಗ ಒಳರಸ್ತೆಗಳಲ್ಲಿ ಇಂತಹದೇ ಸಮಸ್ಯೆ ಸೃಷ್ಟಿಯಾಗಿದೆ. ಕೆಲವು ಭಾಗಗಳಲ್ಲಿ ಅಡ್ಡರಸ್ತೆ ಫಲಕದ ಕಂಬಗಳು ಮಾತ್ರ ಉಳಿದಿದ್ದು, ಬರೆದ ಹೆಸರೇ ಮಾಯವಾಗಿದೆ. ಅದಕ್ಕೆ ಬಣ್ಣ ಹಚ್ಚಿ ಯಾವ ಕಡೆ ರಸ್ತೆ ಸಾಗುತ್ತದೆ ಎಂಬುದರ ಕುರಿತು ಬರೆಯಬೇಕಾದ ಆವಶ್ಯಕತೆ ಇದೆ.

ಅಡ್ಡ ಬಿದ್ದಿವೆ ಅಡ್ಡರಸ್ತೆ ಫಲಕ
ಕೆಲವು ಭಾಗಗಳಲ್ಲಿ ಅಡ್ಡ ರಸ್ತೆ ಸೂಚನ ಫಲಕ ಬುಡ ಸಮೇತ ಧರೆಗುರುಳಿದೆ. ಅಪಘಾತ ಅಥವಾ ಇನ್ಯಾವುದೋ ಕಾರಣಗಳಿಂದಾಗಿ ಅಡ್ಡರಸ್ತೆ ಕಂಬಗಳು ಬೀಳುತ್ತಿದೆ. ಇದಕ್ಕೆ ಕಾರಣರಾದ ವ್ಯಕ್ತಿಗಳು ಈ ಬಗ್ಗೆ ಕ್ಯಾರೇ ಅನ್ನದೇ ಹೋಗುತ್ತಿದ್ದಾರೆ. ಆ ಬಳಿಕ ಸೂಚನ ಫಲಕದ ಕಾಮಗಾರಿ ಮಾಡುವ ಬಗ್ಗೆ ಪಾಲಿಕೆಯು ಆಸಕ್ತಿ ತೋರುತ್ತಿಲ್ಲ. 

ಅಡ್ಡ ಫಲಕಗಳ ಮೇಲೆ ಜಾಹೀರಾತು ಮಹಿಮೆ
ಅಡ್ಡರಸ್ತೆಗಳ ಫಲಕಗಳ ಮೇಲೆ ದಾರಿ ಬಗ್ಗೆ ಮಾಹಿತಿ ನೀಡುವ ಬರೆಹಗಳು ಮಾಯ, ಒಂದುವೇಳೆ, ಜನರ ಉಪಯೋಗಕ್ಕಾಗಿ ಅಡ್ಡರಸ್ತೆ ನಾಮ ಫಲಕಗಳನ್ನು ಹಾಕಿದರೆ ಅವುಗಳ ಮೇಲೆಯೇ ಜಾಹೀರಾತು ಪೋಸ್ಟರ್‌ಗಳು ರಾರಾಜಿಸುತ್ತಿವೆ. ಇಂತಹ ಜಾಹೀರಾತುದಾರರ ಮೇಲೆ ಇನ್ನಾದರೂ ಕ್ರಮ ಜರಗಿಸಬೇಕಾದ್ದು ಪಾಲಿಕೆಯ ಜವಾಬ್ದಾರಿ.

ನಿರ್ವಹಣೆ ಮರೀಚಿಕೆ
ಬಹುತೇಕ ಒಳರಸ್ತೆಗಳ ಫಲಕಗಳು ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದೆ. ಈ ಬಗ್ಗೆ ಪಾಲಿಕೆಯ ಗಮನ ಸೆಳೆಯಲು ಆ ವ್ಯಾಪ್ತಿಯ ಜನರು ಆಸಕ್ತಿ ಇರುವುದಿಲ್ಲ. ಯಾಕೆಂದರೆ ಅವರಿಗೆ ರಸ್ತೆಯ ಬಗ್ಗೆ ಮೊದಲೇ ಮಾಹಿತಿ ಇರುತ್ತದೆ. ಆದರೆ ಹೊರ ಭಾಗಗಳಿಂದ ಬರುವ ಜನರಿಗೆ ಅಡ್ಡರಸ್ತೆಗಳ ಫಲಕಗಳು ಹೆಚ್ಚು ಸಹಕಾರಿಯಾಗುತ್ತದೆ. ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಗಮನ ಹರಿಸಬೇಕಾದ ಆವಶ್ಯಕತೆ ಇದೆ.

ನಾಮಫಲಕ ಗುರುತಿಸಲು ಕ್ರಮ
ನಗರದ ವಿವಿಧ ಭಾಗಗಳ ಅಡ್ಡರಸ್ತೆಗಳ ಫಲಕಗಳಲ್ಲಿ ಶಿಥಿಲಾವಾಸ್ಥೆಯಲ್ಲಿರುವ ಫಲಕಗಳನ್ನು ಗುರುತಿಸಿ ಕೂಡಲೇ ಆ ಬಗ್ಗೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು.
ಶಶಿಧರ್‌ ಹೆಗ್ಡೆ, ಮನಪಾ
   ಮುಖ್ಯ ಸಚೇತಕರು

ಪ್ರಜ್ಞಾ ಶೆಟ್ಟಿ 

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.