ಅಂಬೇಡ್ಕರ್‌ ಭವನಗಳಿಗೆ ಇನ್ನೂ ನಿವೇಶನ ಭಾಗ್ಯವಿಲ್ಲ 


Team Udayavani, Oct 17, 2018, 12:43 PM IST

17-october-8.gif

ಮಂಗಳೂರು : ನಿವೇಶನಗಳ ಕೊರತೆ, ಮಂಜೂರಾದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಬೇಡ್ಕರ್‌ ಭವನಗಳ ನಿರ್ಮಾಣಕ್ಕೆ ಸಮಸ್ಯೆ ಎದುರಾಗಿದೆ. ಜಿಲ್ಲೆಗೆ 2012-13 ನೇ ಸಾಲಿನಿಂದ 2017-18 ನೇ ಸಾಲಿನವರೆಗೆ ಮಂಜೂರಾದ ಒಟ್ಟು 96 ಅಂಬೇಡ್ಕರ್‌ ಭವನಗಳಲ್ಲಿ 9 ಮಾತ್ರ ಪೂರ್ಣ ಗೊಂಡಿದ್ದು, 22 ಭವನಗಳಿಗೆ ಇನ್ನೂ ನಿವೇಶನ ದೊರಕಿಲ್ಲ. 65 ಅಂಬೇಡ್ಕರ್‌ ಭವನಗಳ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ.

2012-18ರ ಅವಧಿಯಲ್ಲಿ ಮಂಗಳೂರು ತಾಲೂಕಿನಲ್ಲಿ 38 ಅಂಬೇಡ್ಕರ್‌ ಭವನಗಳು ಮಂಜೂರಾಗಿದ್ದು, ನಾಲ್ಕು ಮಾತ್ರ ಪೂರ್ಣಗೊಂಡಿವೆ. 24 ಭವನಗಳ ನಿರ್ಮಾಣ ಪ್ರಗತಿಯಲ್ಲಿದೆ. 10 ಭವನಗಳಿಗೆ ಇನ್ನೂ ನಿವೇಶನಗಳು ಲಭ್ಯವಾಗಿಲ್ಲ. ಬಂಟ್ವಾಳ ತಾಲೂಕಿಗೆ 21 , ಪುತ್ತೂರು ತಾಲೂಕಿಗೆ 10, ಸುಳ್ಯ ತಾಲೂಕಿಗೆ 15 ಹಾಗೂ ಬೆಳ್ತಂಗಡಿ ತಾಲೂಕಿಗೆ 12 ಅಂಬೇಡ್ಕರ್‌ ಭವನಗಳು ಮಂಜೂರಾಗಿವೆ. ಬಂಟ್ವಾಳ ತಾಲೂಕಿನಲ್ಲಿ 3 ಅಂಬೇಡ್ಕರ್‌ ಭವನಗಳು ಪೂರ್ಣಗೊಂಡಿದ್ದು, 12 ಭವನಗಳ ನಿರ್ಮಾಣ ನಡೆಯುತ್ತಿದೆ. 6 ಭವನಗಳಿಗೆ ನಿವೇಶನ ದೊರಕಿಲ್ಲ.

ಪುತ್ತೂರು ತಾಲೂಕಿನಲ್ಲಿ 1 ಅಂಬೇಡ್ಕರ್‌ ಭವನ ಪೂರ್ಣಗೊಂಡಿದ್ದು, 7 ಪ್ರಗತಿಯಲ್ಲಿವೆ. 2 ಭವನಗಳಿಗೆ ಇನ್ನೂ ನಿವೇಶನ ದೊರಕಿಲ್ಲ. ಸುಳ್ಯಕ್ಕೆ ಮಂಜೂರಾಗಿರುವ 15 ಅಂಬೇಡ್ಕರ್‌ ಭವನಗಳ ಪೈಕಿ 14 ಭವನಗಳ ಕಾಮಗಾರಿ ನಡೆಯುತ್ತಿದ್ದು, ಒಂದು ಕೂಡ ಪೂರ್ಣಗೊಂಡಿಲ್ಲ. ಒಂದು ಭವನಕ್ಕೆ ನಿವೇಶನ ಲಭ್ಯವಾಗಿಲ್ಲ.

ಯಾವುದೇ ಪ್ರಗತಿಯಿಲ್ಲ
ಬೆಳ್ತಂಗಡಿಯಲ್ಲಿ 1 ಅಂಬೇಡ್ಕರ್‌ ಭವನ ಪೂರ್ಣಗೊಂಡಿದ್ದು, 8ರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. 3 ಅಂಬೇಡ್ಕರ್‌ ಭವನಗಳು ನಿವೇಶನ ರಹಿತವಾಗಿವೆ. ನಿವೇಶನ ಸಮಸ್ಯೆಯನ್ನು ಎದುರಿಸುತ್ತಿರುವ 22 ಅಂಬೇಡ್ಕರ್‌ ಭವನಗಳಿಗೆ ನಿವೇಶನಗಳನ್ನು ಗುರುತಿಸಿ ಕೊಡುವಂತೆ ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳು ಕಂದಾಯ ಇಲಾಖೆಗೆ ಪತ್ರ ಬರೆದಿದ್ದರೂ ಯಾವುದೇ ಪ್ರಗತಿಯಾಗಿಲ್ಲ.

ಅನುದಾನ ಬಾಕಿ
96 ಅಂಬೇಡ್ಕರ್‌ ಭವನಗಳಿಗೆ ಒಟ್ಟು 29 ಕೋ.ರೂ. ಅನುದಾನ ನಿಗದಿಪಡಿಸಲಾಗಿದೆ. ಇದರಲ್ಲಿ 11.13 ಕೋ. ರೂ.ಬಿಡುಗಡೆಯಾಗಿದ್ದು 11.11 ಕೋ.ರೂ. ವಿನಿಯೋಗಿಸಲಾಗಿದೆ. 17.87 ಕೋ.ರೂ. ಸರಕಾರದಿಂದ ಬಿಡುಗಡೆಯಾಗಲು ಬಾಕಿ ಇದೆ.

ನಗರದ ಉರ್ವಸ್ಟೋರಿನಲ್ಲಿ ಸುಮಾರು 12 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾ ಮಟ್ಟದ ಅಂಬೇಡ್ಕರ್‌ ಭವನದ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 65 ಅಂಬೇಡ್ಕರ್‌ ಭವನಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.
– ಡಾ| ಯೋಗೀಶ್‌
ಜಿಲ್ಲಾ ಸಮಾಜ ಕಲ್ಯಾಣ ಇಲಾಖಾ
ಉಪನಿರ್ದೇಶಕ

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.