ನವರಾತ್ರಿ ಸಂಪನ್ನ; ವಿಜಯದಶಮಿ ವಿಶೇಷ ಪೂಜೆ
Team Udayavani, Oct 20, 2018, 10:23 AM IST
ಮಹಾನಗರ: ನಗರದ ವಿವಿಧ ದೇವಸ್ಥಾನಗಳಲ್ಲಿ ಅ. 10ರಿಂದ ಆರಂಭಗೊಂಡ ವೈಭವದ ನವರಾತ್ರಿ ಮಹೋತ್ಸವ ಗುರುವಾರ ಸಂಪನ್ನಗೊಂಡಿತು. ಶುಕ್ರವಾರ ವಿಜಯ ದಶಮಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಬಿಜೈ ಕಾಪಿಕಾಡು ಶ್ರೀ ಗುರು ವೈದ್ಯನಾಥ ಶ್ರೀದೇವಿ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಶ್ರೀ ದೈವದ ದರ್ಶನ ಸೇವೆ, ಆಯುಧ ಪೂಜೆ, ಮಹಾಪೂಜೆಯೊಂದಿಗೆ ನವರಾತ್ರಿ ಮಹೋತ್ಸವ ಸಂಪನ್ನಗೊಂಡಿತು.
ಬೋಳಾರ ಹಳೆಕೋಟೆ ಶ್ರೀ ಮಾರಿಯಮ್ಮ ಮಹಿಷಮರ್ದಿನಿ ದೇವಸ್ಥಾನದದಲ್ಲಿ ಗುರುವಾರ ರಾತ್ರಿ ರಥೋತ್ಸವ ನಡೆಯಿತು. ವಿಜಯದಶಮಿ ಪ್ರಯುಕ್ತ ಶ್ರೀ ಸರಸ್ವತಿ ಪೂಜೆಯೊಂದಿಗೆ ವಿದ್ಯಾರಂಭ ನಡೆಯಿತು. ದೇರೆಬೈಲ್ ತೋಟದಮನೆ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನ, ದೇರೆಬೈಲ್ ಕಲ್ಬಾವಿ ಬನ ಶ್ರೀ ಶ್ರೀಕುರು ಅಂಬಾರಾಜರಾಜೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನ, ಪೊಲೀಸ್ ಲೇನ್ ಶ್ರೀ ದೇವಿ ದೇವಸ್ಥಾನ, ತೋಡ್ಲಮಜಲು ಶ್ರೀ ದುರ್ಗಾಚಾಮುಂಡೇಶ್ವರೀ ಕ್ಷೇತ್ರ, ಮರಕಡ ಶ್ರೀ ಗುರು ಪರಾಶಕ್ತಿ ಮಠ, ಶ್ರೀ ಪರಾಶಕ್ತಿ ದೇಗುಲ ಸಮುಚ್ಚಯ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಆಯುಧ ಪೂಜೆಯೊಂದಿಗೆ ನವರಾತ್ರಿ ಕೊನೆಗೊಂಡಿತು. ಶುಕ್ರವಾರ ವಿಜಯದಶಮಿಯ ಪ್ರಯುಕ್ತ ವಿವಿಧ ಪೂಜಾವಿಧಿಗಳು ಜರಗಿದವು.
ಮಂಗಳಾದೇವಿ: ಇಂದು ನವರಾತ್ರಿ ಸಮಾರೋಪ
ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ರಾತ್ರಿ ರಥೋತ್ಸವ ಜರಗಿತು. ಅ. 20ರಂದು ನವರಾತ್ರಿ ಮಹೋತ್ಸವದ ಸಮಾರೋಪದ ಅಂಗವಾಗಿ ಸಭಾ ಕಾರ್ಯಕ್ರಮ ನಡೆಯಲಿದೆ. ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶನಿವಾರ ನವರಾತ್ರಿ ಸಮಾರೋಪಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ