ಮಂಗಳೂರು ದಸರಾ ಸಂಪನ್ನ
Team Udayavani, Oct 21, 2018, 9:41 AM IST
ಮಂಗಳೂರು: ವಿಜೃಂಭಣೆಯಿಂದ ನಡೆದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಉತ್ಸವವು ಶನಿವಾರ ಮುಂಜಾನೆ ಕ್ಷೇತ್ರದಲ್ಲಿ ಪೂಜಿಸಲಾದ ವಿಗ್ರಹಗಳ ಜಲಸ್ತಂಭನದೊಂದಿಗೆ ಸಂಪನ್ನಗೊಂಡಿತು.
ಶ್ರೀ ಆದಿಶಕ್ತಿ, ಶ್ರೀ ಮಹಾಗಣಪತಿ, ನವದುರ್ಗೆಯರ ಸಹಿತ ಶ್ರೀ ಶಾರದೆಯ ವಿಗ್ರಹಗಳನ್ನು ಭಕ್ತ ಸಮೂಹದ ಮಧ್ಯೆ ಕ್ಷೇತ್ರದ ಪುಷ್ಕರಿಣಿಯಲ್ಲಿ ಜಲಸ್ತಂಭನಗೊಳಿಸಲಾಯಿತು.
ಶುಕ್ರವಾರ ಸಂಜೆ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆರಂಭಗೊಂಡ ಶೋಭಾಯಾತ್ರೆಯು ರಾತ್ರಿಯಿಡೀ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶನಿವಾರ ಮುಂಜಾನೆ ಕ್ಷೇತ್ರವನ್ನು ತಲುಪಿತು.
ಮೆರವಣಿಗೆಯಲ್ಲಿ ಹಲವಾರು ತಂಡಗಳು, 70ಕ್ಕೂ ಹೆಚ್ಚು ಟ್ಯಾಬ್ಲೋಗಳು ಪಾಲ್ಗೊಂಡಿದ್ದವು. ಸಂಸ್ಕೃತಿಯನ್ನು ಬಿಂಬಿಸುವ ಹುಲಿವೇಷ, ಡೊಳ್ಳು ಕುಣಿತ, ಬ್ಯಾಂಡ್ – ವಾದ್ಯಘೋಷ, ಪುರಾಣ, ಅಧ್ಯಾತ್ಮವನ್ನು ಬಿಂಬಿಸುವ ಸ್ತಬ್ಧಚಿತ್ರಗಳು ವರ್ಣರಂಜಿತವಾಗಿ ಮೂಡಿಬಂದವು. ಮೆರವಣಿಗೆಯ ಸೌಂದರ್ಯವನ್ನು ಸವಿಯುವುದಕ್ಕಾಗಿ ದೂರದೂರುಗಳಿಂದಲೂ ದಾಖಲೆಯ ಸಂಖ್ಯೆಯ ಭಕ್ತರು ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ