ರಥಬೀದಿ ಶಾರದಾ ಮಾತೆಯ ಶೋಭಾಯಾತ್ರೆ
Team Udayavani, Oct 21, 2018, 9:34 AM IST
ಮಂಗಳೂರು: ಮಂಗಳೂರು ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ ಆಚಾರ್ಯ ಮಠ ವಠಾರ
ದಲ್ಲಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ 96ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಅ. 10ರಿಂದ 20ರ ವರೆಗೆ ವಿಜೃಂಭಣೆಯಿಂದ ಜರಗಿತು.
ಶನಿವಾರ ಭವ್ಯ ಶೋಭಾಯಾತ್ರೆಯೊಂದಿಗೆ ಉತ್ಸವ ಸಂಪನ್ನಗೊಂಡಿತು. ಶ್ರೀ ಶಾರದಾ ಮಾತೆಯ ಬೃಹತ್ ಶೋಭಾಯಾತ್ರೆ ಶ್ರೀ ಮಹಾಮ್ಮಾಯ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ್ ವೃತ್ತ, ಅಮ್ಮೆಂಬಳ ಸುಬ್ಟಾರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂ ಚಿತ್ರಾ, ಬಸವನಗುಡಿ, ಚಾಮರಗಲ್ಲಿ, ರಥಬೀದಿಯಾಗಿ ಸಾಗಿ ಬಂದು ಶ್ರೀ ಮಹಾಮ್ಮಾಯ ತೀರ್ಥದಲ್ಲಿ ಜಲಸ್ತಂಭನ (ವಿಸರ್ಜನೆ) ಮಾಡಲಾಯಿತು. ಸೇವಾ ರೂಪದಲ್ಲಿ, ಹರಕೆ ರೂಪದಲ್ಲಿ ವೇಷಧಾರಿಗಳು ತಮ್ಮ ಸೇವೆ ಸಲ್ಲಿಸಿದರು.
ದ.ಕ. ಜಿಲ್ಲೆಯಲ್ಲಿ ಪ್ರಸಿದ್ಧಿ ಪಡೆದಿರುವ ರಥಬೀದಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದಲ್ಲಿ
ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಶ್ರೀ ಶಾರದಾ ಮಾತೆಗೆ ವಿಶೇಷ ಮಂಗಳೂರು ಮಲ್ಲಿಗೆಯ ಜಲ್ಲೆ ಮುಡಿಸಿ ಭಕ್ತರ ದರ್ಶನಕ್ಕೆ ಇರಿಸಲಾಗಿತ್ತು. ಬಳಿಕ ವರ್ಣರಂಜಿತ ಶೋಭಾಯಾತ್ರೆ ಸಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ