ಹರಿಹರದಲ್ಲಿ  ಘಟಕ; ಪರ್ಯಾಯ ಇಂಧನ ಗುರಿ


Team Udayavani, Oct 22, 2018, 10:15 AM IST

mrpl.jpg

ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೋ ಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಎಲ್‌) ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ 2ಜಿ ಎಥೆನಾಲ್‌ ಘಟಕ ಸ್ಥಾಪಿಸಲು ಮುಂದಾಗಿದೆ. ಮೂರು ವರ್ಷಗಳಲ್ಲಿ ಇದು ನಿರ್ಮಾಣ ವಾದಾಗ ರಾಜ್ಯದ ಅತಿ ದೊಡ್ಡ 2ಜಿ ಎಥೆನಾಲ್‌ ಘಟಕ ಎನಿಸಿಕೊಳ್ಳಲಿದೆ. ತೈಲ ಬೆಲೆ ಗಗನಕ್ಕೆ ಏರುತ್ತಿರುವ ಈ ಕಾಲದಲ್ಲಿ ಇದೊಂದು ಮುಖ್ಯ ಹೆಜ್ಜೆಯಾಗಿದೆ.

ಎಂಆರ್‌ಪಿಎಲ್‌ ಪ್ರಸ್ತುತ ರಾಜ್ಯದ ಶೇ. 95ರಷ್ಟು ವಾಹನ ಇಂಧನ ಬೇಡಿಕೆ ಪೂರೈಸುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯೇರಿಕೆ ಗ್ರಾಹಕರಿಗಷ್ಟೇ ಅಲ್ಲ; ತೈಲ ಕಂಪೆನಿಗಳಿಗೂ ತಲೆನೋವು. ಭವಿಷ್ಯದಲ್ಲಿ ಪರ್ಯಾಯ ಇಂಧನ ಮೂಲವನ್ನು ಹುಡುಕಿ ಬಳಕೆಗೆ ಗ್ರಾಹಕರನ್ನು ಉತ್ತೇಜಿಸದೆ ಹೋದರೆ ಹಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಎಂಆರ್‌ಪಿಎಲ್‌ ಈಗ ಕಲ್ಲೆಣ್ಣೆ ಉತ್ಪಾದನೆ ಮತ್ತು ಬಳಕೆಯನ್ನು ಕಡಿಮೆಗೊಳಿಸಲು ಹೊಸ ಪ್ರಯತ್ನಗಳನ್ನು ನಡೆಸುತ್ತಿದೆ. ಹರಿಹರದಲ್ಲಿ ಸುಮಾರು 40 ಎಕರೆಯಲ್ಲಿ ಸ್ಥಾಪನೆಗೊಳ್ಳಲಿರುವ ಎಥೆನಾಲ್‌ ಘಟಕ ಇದರ ಭಾಗ.

ಸಕ್ಕರೆ ಅಂಶವಿರುವ ಕಬ್ಬು, ಕಬ್ಬಿನ ತ್ಯಾಜ್ಯವಾದ ಕಾಕಂಬಿ, ಗೋಧಿ, ಜೋಳ ಮತ್ತಿತರ ಬೆಳೆಗಳಿಂದ ಎಥೆನಾಲ್‌ ಉತ್ಪಾದಿಸಬಹುದು. ಇವು ಯಥೇತ್ಛವಾಗಿ ಬೆಳೆಯುವ ಹರಿಹರ ಪ್ರದೇಶ ಸ್ಥಾವರ ಸ್ಥಾಪನೆಗೆ ಸೂಕ್ತ ಎಂದು ಕಂಡುಕೊಳ್ಳಲಾಗಿದೆ. ಕೆಐಎಡಿಬಿ ಯಿಂದ ಈಗಾಗಲೇ ಸುಮಾರು 40 ಎಕರೆ ಜಮೀನು ಪಡೆದುಕೊಂಡಿರುವ ಎಂಆರ್‌ಪಿಎಲ್‌, ಯೋಜನೆಯ ತಾಂತ್ರಿಕ ಅನುಮತಿಯ ಪ್ರಕ್ರಿಯೆ ನಡೆಸುತ್ತಿದೆ. 

ಹಾಲಿ ಎಥೆನಾಲ್‌ ಉತ್ಪಾದನೆ 7.50 ಲಕ್ಷ ಲೀ.
ಯಾವ ಬೆಳೆಯ ಆಧಾರದಲ್ಲಿ, ಎಷ್ಟು ಎಥೆನಾಲ್‌ ಉತ್ಪಾದಿಸಲಾಗುತ್ತದೆ ಎಂಬ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ. ಆದರೆ ರಾಜ್ಯದ ಮೊದಲ ಅತ್ಯಂತ ಸುಸಜ್ಜಿತ ಬೃಹತ್‌ ಎಥೆನಾಲ್‌ ಉತ್ಪಾದಕ ಸ್ಥಾವರ ಇದಾಗಲಿದೆ. ರಾಜ್ಯದ ಒಟ್ಟು 85 ಸಕ್ಕರೆ ಕಾರ್ಖಾನೆಗಳಲ್ಲಿ ಸುಮಾರು 68 ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ 15ರಲ್ಲಿ ಮಾತ್ರ ಎಥೆನಾಲ್‌ ಉತ್ಪಾದಿಸ ಲಾಗುತ್ತಿದೆ. ಈಗ ರಾಜ್ಯದಲ್ಲಿ ಉತ್ಪಾದನೆ ಯಾಗುತ್ತಿರುವ ಎಥೆನಾಲ್‌ ಸುಮಾರು 7.50 ಲಕ್ಷ ಲೀ. ಇದನ್ನು ಹೆಚ್ಚಿಸಲು ಕೇಂದ್ರ ಸರಕಾರದ ಸೂಚನೆಯ ಮೇರೆಗೆ ಜೋಳ, ಗೋಧಿಯಿಂದಲೂ ಎಥೆನಾಲ್‌ ಉತ್ಪಾದನೆಗೆ ಎಂಆರ್‌ಪಿಎಲ್‌ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. 

ಪೆಟ್ರೋಲ್‌ಗೆ ಶೇ.10ರಷ್ಟು ಎಥೆನಾಲ್‌ ಮಿಶ್ರಣ ಗುರಿ
ಪ್ರಸ್ತುತ ಪೆಟ್ರೋಲ್‌ಗೆ ಶೇ.5ರಷ್ಟು ಎಥೆನಾಲ್‌ ಮಿಶ್ರಣಕ್ಕೆ ಅವಕಾಶವಿದೆ. ಈ ಮಿತಿಯನ್ನು ಶೇ.10ರಷ್ಟು ಏರಿಸಿ ಕಡ್ಡಾಯ ಮಾಡುವ ಬಗ್ಗೆ ಕೇಂದ್ರ ಸರಕಾರ ಉತ್ಸುಕವಾಗಿದೆ. ವಾಹನಗಳ ಕಾರ್ಯಕ್ಷಮತೆಗೆ ಇದರಿಂದ ಸಮಸ್ಯೆ ಇಲ್ಲ ಎಂಬುದು ಕೇಂದ್ರದ ವಾದ. ಎಥೆನಾಲ್‌ ಬಳಕೆ ಅಧಿಕವಾದಂತೆ ಕಚ್ಚಾ ತೈಲ ಆಮದು ಕಡಿಮೆಯಾಗಲಿದ್ದು, ತೈಲ ಬೆಲೆ ನಿಯಂತ್ರಣ ಸರಕಾರದ ಗುರಿ. 

ಪಂಜಾಬ್‌, ಹರಿಯಾಣ ಸಹಿತ ಕೆಲವೆಡೆ ಗೋಧಿ ಮತ್ತು ಇತರ ಬೆಳೆ ಕಟಾವಿನ ಬಳಿಕ ಹುಲ್ಲಿನ ವಿಲೇವಾರಿ ದುಬಾರಿಯಾಗುತ್ತದೆ ಎಂಬ ಕಾರಣಕ್ಕೆ ಬೆಂಕಿ ಕೊಡುತ್ತಾರೆ. ಇದು ವಾಯು ಮಾಲಿನ್ಯಕ್ಕೂ ಕಾರಣವಾಗುತ್ತದೆ. 2ಜಿ ಎಥೆನಾಲ್‌ ಸ್ಥಾವರಕ್ಕೆ ಈ ಹುಲ್ಲನ್ನು ಕಚ್ಚಾ ಸಾಮಗ್ರಿಯಾಗಿ ಬಳಸಬಹುದು. ಇತ್ತೀಚೆಗೆ ಐಒಸಿಎಲ್‌ ಒರಿಸ್ಸಾದಲ್ಲಿ 2ಜಿ ಎಥೆನಾಲ್‌ ಸ್ಥಾವರ ನಿರ್ಮಿಸಿದೆ. ಇದೇ ರೀತಿ ದಾವಣಗೆರೆ ಹಾಗೂ ಸುತ್ತಮುತ್ತ ಸಿಗುವ ಬೆಳೆಯ ಉಳಿಕೆಯನ್ನು ಪಡೆದು ಎಥೆನಾಲ್‌ ತಯಾರಿ ಎಂಆರ್‌ಪಿಎಲ್‌ ಗುರಿ.

40 ಎಕರೆ ಭೂಮಿ ನಿಗದಿ
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಎಂಆರ್‌ಪಿಎಲ್‌ನ 2ಜಿ ಎಥೆನಾಲ್‌ ಉತ್ಪಾದನ ಸ್ಥಾವರ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಈ ಸಂಬಂಧ ಸುಮಾರು 40 ಎಕ್ರೆ ಭೂಮಿಯನ್ನು ಕೆಐಎಡಿಬಿ ಒದಗಿಸಿದೆ. ತಂತ್ರಜ್ಞಾನದ ಆಯ್ಕೆ ಪ್ರಸ್ತುತ ಪ್ರಗತಿಯಲ್ಲಿದೆ.
ಎಂ. ವೆಂಕಟೇಶ್‌, ವ್ಯವಸ್ಥಾಪಕ ನಿರ್ದೇಶಕರು, ಎಂಆರ್‌ಪಿಎಲ್‌

ದಿನೇಶ್‌ ಇರಾ

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.