ಕರಾವಳಿ ಮೂಲದ ಘಾತಕ ಉಗ್ರರಿವರು


Team Udayavani, Oct 22, 2018, 11:24 AM IST

untitled-1.jpg

ಸನಾತನ ಸಂಸ್ಥೆಯಲ್ಲಿ  ಗುರುತಿಸಿಕೊಂಡಿದ್ದ ನೂಜಿಬಾಳ್ತಿಲದ ಜಯಪ್ರಕಾಶ್‌
ಕಡಬ: ನೂಜಿಬಾಳ್ತಿಲ ಗ್ರಾಮದ ಕಟ್ಟತ್ತಡ್ಕ ನಿವಾಸಿ ಕೃಷಿಕ ಸೋಮರಾಜನ್‌ ಅವರ ಪುತ್ರ ಜಯಪ್ರಕಾಶ್‌ ಯಾನೆ ಅಣ್ಣಾ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್‌ಗ‌ಳ ಪಟ್ಟಿಯಲ್ಲಿ ಆತನ ಹೆಸರನ್ನು ಸೇರ್ಪಡೆಗೊಳಿಸಿ ಆತನ ಬಂಧನಕ್ಕಾಗಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

ಹದಿನಾಲ್ಕು ವರ್ಷಗಳಿಂದ ಮನೆಯವರ ಸಂಪರ್ಕ ಕಡಿದುಕೊಂಡಿರುವ ಜಯಪ್ರಕಾಶ್‌ ಸನಾತನ ಸಂಸ್ಥೆಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ. ಮಾಲೆಂಗಾವ್‌ ಸ್ಫೋಟದ ತನಿಖೆಯ ವೇಳೆ ಕೆಲವು ವರ್ಷಗಳ ಹಿಂದೆ ಎನ್‌ಐಎ ಅಧಿಕಾರಿಗಳು ಕಡಬಕ್ಕೆ ಆಗಮಿಸಿ ಆತನ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದರು. ಬಳಿಕ ಆತನ ಫೋಟೋ ಇರುವ ಪೋಸ್ಟರ್‌ಗಳನ್ನು ಗ್ರಾಮ ಪಂಚಾಯತ್‌ ಹಾಗೂ ಕಂದಾಯ ಕಚೇರಿಗಳ ಬಳಿ ಹಚ್ಚಿ ಆತನ ಬಗ್ಗೆ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಎನ್‌ಐಎ ಪ್ರಕಟಿಸಿತ್ತು. ಜಯಪ್ರಕಾಶ್‌ ವಿರುದ್ಧ ಅಜೆ¾àರ್‌ ದರ್ಗಾ ಸ್ಫೋಟ, ಸಂಝೋತಾ ಎಕ್ಸ್‌ಪ್ರೆಸ್‌ ಬಾಂಬ್‌ ಸ್ಫೋಟ, ಗೋವಾ ಮತ್ತು ಹೈದರಾಬಾದ್‌ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿವೆ. ಲೇಖಕಿ ಗೌರಿ ಲಂಕೇಶ್‌ ಹತ್ಯೆಯ ತನಿಖೆಯ ವೇಳೆಯಲ್ಲಿಯೂ ತನಿಖಾಧಿಕಾರಿಗಳು ಜಯಪ್ರಕಾಶ್‌ನ  ಕೈವಾಡದ ಸಾಧ್ಯತೆಯ ಕುರಿತು ಮಾಹಿತಿ ಕಲೆಹಾಕಿದ್ದರು. 

ಖೋಟಾ ನೋಟು ಚಲಾವಣೆ ಕುಖ್ಯಾತಿಯ ಮೊದಿನ್‌ ಉಮ್ಮರ್‌
ಉಡುಪಿ/ಪಡುಬಿದ್ರಿ:
 ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಿಡುಗಡೆಗೊಳಿಸಿರುವ ಘಾತಕ ಉಗ್ರರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಉಡುಪಿ ಜಿಲ್ಲೆ ಮೂಳೂರಿನ ಮೊದಿನ್‌ ಉಮ್ಮರ್‌ ಬ್ಯಾರಿಯು ಖೋಟಾ ನೋಟು ಚಲಾ ವಣೆಯಲ್ಲಿ ಕುಖ್ಯಾತಿ ಪಡೆದವನಾಗಿದ್ದಾನೆ. ಕೇರಳ ಪೊಲೀಸರು ಈತನನ್ನು ಅರಸಿ ಬಂದಾಗಲೂ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಈತ ಖೋಟಾ ನೋಟಿನಿಂದಲೇ ತನ್ನ ಸಾಮ್ರಾಜ್ಯ ಕಟ್ಟಿಕೊಂಡಿದ್ದ.
ಮೂಳೂರಿನಲ್ಲಿ ಹೆದ್ದಾರಿ ಸಮೀಪವೇ ಬೃಹತ್‌ ಬಂಗಲೆಯೊಂದನ್ನು ನಿರ್ಮಿಸಿಕೊಂಡಿದ್ದ ಈತ ಕೇರಳ ಪೊಲೀಸರ ಹುಡುಕಾಟದ ಬಳಿಕ ಈ ಮನೆಯನ್ನು ಮಾರಿದ್ದ. ಮೂಳೂರು ಸುನ್ನಿ ಸೆಂಟರ್‌ ಬಳಿಯಲ್ಲಿನ ಜಾಗ ವೊಂದನ್ನೂ ಮಾರಾಟ ಮಾಡಿ ಬಳಿಕ ದುಬಾೖಗೆ ತೆರಳಿದ್ದ. ಸುನ್ನಿ ಸೆಂಟರ್‌ ಬಳಿಯಲ್ಲಿನ ಜಾಗದಲ್ಲಿ ಫ್ಲಾಟ್‌ಗಳನ್ನು ನಿರ್ಮಿಸುವುದಾಗಿ ಜನರನ್ನು ನಂಬಿಸಿ ಅನೇಕರಿಂದ ಹಣವನ್ನೂ ಪಡೆದುಕೊಂಡಿದ್ದ ಈತನ ವಿರುದ್ಧ ಹಲವಾರು ಚೆಕ್‌ ಬೌನ್ಸ್‌ ಕೇಸುಗಳೂ ಇದ್ದವು. ದುಬಾೖನಲ್ಲಿ ಜೈಲುವಾಸಿಯಾಗಿದ್ದ ಈತ ಮುಂದೆ ಬಿಡುಗಡೆಗೊಂಡಿದ್ದು, ಈತನ ಪಾಸ್‌ಪೋರ್ಟನ್ನು ಅಲ್ಲಿನ ಸರಕಾರವು ಹಿಡಿದಿಟ್ಟುಕೊಂಡಿದೆ ಎಂದು ಉಡುಪಿಯ ಪೊಲೀಸ್‌ ಮೂಲಗಳು ತಿಳಿಸಿವೆ. ಖೋಟಾ ನೋಟು ವ್ಯವಹಾರದಿಂದಲೇ ಈತ ಉಡುಪಿ ಜಿಲ್ಲೆ, ಬೆಂಗಳೂರು, ಹೈದರಾಬಾದ್‌ಗಳಲ್ಲಿ ಅಕ್ರಮ ಆಸ್ತಿಗಳನ್ನು ಖರೀದಿಸಿದ್ದನೆಂಬ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.