ಪಟೇಲ್‌ ಪ್ರತಿಮೆಯಲ್ಲಿ ಸೇರಿದೆ ಕರಾವಳಿಯ ಉಕ್ಕು!


Team Udayavani, Oct 31, 2018, 8:31 AM IST

pateel.png

ಮಂಗಳೂರು: ಸರ್ದಾರ್‌ ಸರೋವರದ ಬಳಿ ಅ. 31ರಂದು ಉದ್ಘಾಟನೆಗೊಳ್ಳಲಿರುವ ವಿಶ್ವದ ಅತೀ ಎತ್ತರದ ವಲ್ಲಭಭಾಯಿ ಪಟೇಲ್‌ ಪ್ರತಿಮೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕೊಡುಗೆಯೂ ಇದೆ. ಈ ಜಿಲ್ಲೆಯ ಕೃಷಿಕರ ಮನೆಗಳಿಂದ ಸಂಗ್ರಹಿಸಿ ಕಳುಹಿಸಲಾದ 3 ಕ್ವಿಂಟಾಲ್‌ನಷ್ಟು ಉಕ್ಕು ಅದರ ನಿರ್ಮಾಣಕ್ಕೆ ಬಳಕೆಯಾಗಿದೆ.
ಪಟೇಲರ ಪ್ರತಿಮೆ ಯೋಜನೆ ಹಾಕಿಕೊಂಡಾಗ ಅದರಲ್ಲಿ ದೇಶದ ಎಲ್ಲ ಭಾಗದ ಜನರ ಸಹಯೋಗ ಇರಬೇಕು ಎಂದು ಬಿಜೆಪಿ ನಿರ್ಧರಿಸಿ ಪ್ರತೀ ಗ್ರಾಮದಿಂದ ಉಕ್ಕು ಸಂಗ್ರಹಕ್ಕೆ ಮುಂದಾಗಿತ್ತು. ಕರಾವಳಿಯಲ್ಲಿ 2014ರ ಜ. 23ರಿಂದ 31ರ ವರೆಗೆ ಲೋಹ ಸಂಗ್ರಹ ನಡೆದಿತ್ತು. ಒಟ್ಟು 349 ಗ್ರಾ. ಪಂ.ಗಳ ಪೈಕಿ ಕೆಲವು ಕಡೆ ಪೂರ್ಣ ಸ್ಪಂದನೆ ದೊರೆತಿರಲಿಲ್ಲ. ಆದರೂ ಬಹುತೇಕ ಗ್ರಾಮಗಳಿಂದ ತಲಾ ಒಂದು ಕಿಲೋದಂತೆ ಸುಮಾರು 3 ಕ್ವಿಂಟಾಲ್‌ ಉಕ್ಕು ಸಂಗ್ರಹಿಸಲಾಗಿತ್ತು.

ಉಕ್ಕು ಸಂಗ್ರಹಕ್ಕೆ ಕಿಟ್‌ಗಳು
ಪ್ರತೀ ಪಂಚಾಯತ್‌ನ ಒಬ್ಬ ಸಾಧಕ ರೈತನ ಬಳಿಗೆ ಬಿಜೆಪಿ ಕಾರ್ಯಕರ್ತರು ತೆರಳಿ, ಆತ ಬಳಸಿದ ಉಕ್ಕಿನ ಕೃಷಿ ಉಪಕರಣ ಸಂಗ್ರಹಿಸಿದ್ದರು. ಇದೇ ಸಂದರ್ಭ ಕೃಷಿಕನ ಮನೆಯಲ್ಲಿ ಸಣ್ಣ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು. ಕೆಲವೆಡೆ ಉಕ್ಕನ್ನು ಮೆರವಣಿಗೆಯಲ್ಲಿ ಆಯಾ ಪಂಚಾಯತ್‌ ಕೇಂದ್ರ ಸ್ಥಾನಕ್ಕೆ ತಂದುದೂ ಇತ್ತು. ಇನ್ನುಳಿದೆಡೆ ಉಕ್ಕನ್ನು ಪಡೆದು ಕೇಂದ್ರ ಕಚೇರಿಗೆ ನೀಡಲಾಗಿತ್ತು. ಉಕ್ಕು ಸಂಗ್ರಹಕ್ಕಾಗಿ ಪ್ರತ್ಯೇಕ ಕಿಟ್‌ಗಳನ್ನು ಬಿಜೆಪಿ ಕೇಂದ್ರ ಕಚೇರಿಯಿಂದ ದ.ಕ. ಮತ್ತು ಉಡುಪಿ ಜಿಲ್ಲಾ ಕಚೇರಿಗೆ ನೀಡಲಾಗಿತ್ತು.

ಕರಾವಳಿಯ ಮಣ್ಣು
ಕೆಲವು ಗ್ರಾಮಗಳಿಂದ ತಾಮ್ರವನ್ನೂ ಸಂಗ್ರಹಿಸಲಾಗಿತ್ತು. ಜತೆಗೆ ಕೆಲವು ಗ್ರಾಮಗಳ ಪಾರಂಪರಿಕ ಅಥವಾ ಪುಣ್ಯ ಸ್ಥಳಗಳಿಂದ ಹಿಡಿ ಮಣ್ಣನ್ನು ಸಂಗ್ರಹಿಸಿ ನೀಡಲಾಗಿತ್ತು. ಅಭಿಯಾನಕ್ಕೆ ತಾಲೂಕು ಮಟ್ಟದಲ್ಲಿ 60 ಮಂದಿ, ಗ್ರಾ.ಪಂ. ಮಟ್ಟದಲ್ಲಿ ಹತ್ತು ಮಂದಿಯ ತಂಡ ರಚಿಸಲಾಗಿತ್ತು. ಬಹುತೇಕ ಗ್ರಾಮಗಳಿಂದ ಸ್ಪಂದನೆ ದೊರಕಿತ್ತು ಎಂದು ಲೋಹ ಸಂಗ್ರಹ ದ.ಕ. ಜಿಲ್ಲಾ ಸಮಿತಿಯ ಸಂಚಾಲಕರಾಗಿದ್ದ, ಹಾಲಿ ಶಾಸಕ ಡಾ| ವೈ. ಭರತ್‌ ಶೆಟ್ಟಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಹಸ್ತಾಂತರ
ಪ್ರತಿಮೆ ನಿರ್ಮಾಣಕ್ಕೆ ಮುನ್ನ 2013ರ ಡಿ. 15ರಂದು ಮಂಗಳೂರಿನಲ್ಲಿ “ರನ್‌ ಫಾರ್‌ ಯುನಿಟಿ’ ನಡಿಗೆ ನಡೆದಿತ್ತು. 2014ರ ಜನವರಿಯಲ್ಲಿ ಉಕ್ಕು ಸಂಗ್ರಹ ಪೂರ್ಣವಾಗಿ ಫೆ.18ಕ್ಕೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆದ ಸಭೆಯಲ್ಲಿ  ಮೋದಿ ಅವರಿಗೆ ಲೋಹದ ಕಿಟ್‌ ಹಸ್ತಾಂತರಿಸಲಾಗಿತ್ತು.

ಸಂಭ್ರಮದ ಕ್ಷಣ
ಪಟೇಲ್‌ ಪ್ರತಿಮೆಗೆ ದ.ಕ. ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಎಲ್ಲ ಗ್ರಾಮಗಳಿಂದ ಉಕ್ಕು ಪಡೆದುಕೊಂಡು ನೀಡಿದ್ದೇವೆ. ವಿಶ್ವದ ಅತ್ಯಂತ ಎತ್ತರದ ಪ್ರತಿಮೆಯಲ್ಲಿ ಕರಾವಳಿಯ ಉಕ್ಕು ಕೂಡ ಸೇರಿರು ವುದು ನಮ್ಮೆಲ್ಲರಿಗೆ ಹೆಮ್ಮೆ.
-ನಳಿನ್‌ ಕುಮಾರ್‌ ಕಟೀಲು

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.