ಕಲಾ ಪ್ರದರ್ಶನದಲ್ಲಿ ಕಲಾಕೃತಿ ರಂಗು


Team Udayavani, Nov 4, 2018, 11:53 AM IST

4-november-9.gif

ಕೊಡಿಯಾಲಬೈಲ್‌ : ಕರಾವಳಿಯ ಪಾರಂಪರಿಕ ಮೀನುಗಾರಿಕೆ ಕಸುಬನ್ನು ಕಟ್ಟಿಕೊಡುವ ದೋಣಿಯ ಚಿತ್ರಣ, ಭತ್ತದ ತುಪ್ಪೆಯ ಅನಾವರಣ ಒಂದೆಡೆ. ಅರ್ಧ ತಾಸಿನಲ್ಲೇ ಮಣ್ಣಿನ ಕಲಾಕೃತಿ ರಚಿಸಿ ನಿಬ್ಬೆರಗಾಗಿಸುವ ಕಲಾವಿದರ ತಂಡ ಇನ್ನೊಂದೆಡೆ. ಪುಸ್ತಕ ಪ್ರದರ್ಶನ, ಕ್ಲೇ ಮಾಡೆಲಿಂಗ್‌..

ಇದು ಮಂಗಳೂರು ಲಿಟ್‌ ಫೆಸ್ಟ್‌ ನಡೆಯುತ್ತಿರುವ ಟಿಎಂಎ ಪೈ ಸಭಾಂಗಣದ ಮುಂಭಾಗದಲ್ಲಿ ಶನಿವಾರ ಕಂಡು ಬಂದ ದೃಶ್ಯ. ಮಂಗಳೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರ ಮಟ್ಟದ ಮೊದಲ ಸಾಹಿತ್ಯ ಜಾತ್ರೆಯಾದ್ದರಿಂದ ಸಭಾಂಗಣದ ಮುಂಭಾಗದಲ್ಲಿ ತುಳುನಾಡಿನ ಆಹಾರ ಪದ್ಧತಿ, ಪಾರಂಪರಿಕ ಕಲೆಯನ್ನು ಬಿಂಬಿಸುವ ಚಿತ್ರಣಗಳನ್ನು ಪ್ರದರ್ಶಿಸಲಾಗಿತ್ತು. ಇಡೀ ಸಾಹಿತ್ಯ ಜಾತ್ರೆಗೆ ಸೌಂದರ್ಯ ನೀಡುವಲ್ಲಿ ಈ ಪ್ರದರ್ಶನಗಳು ಸಾಕ್ಷಿಯಾಗಿದ್ದವು. ಸಭಾಂಗಣದ ಆವರಣದ ಒಳ ಹೋಗುತ್ತಿದ್ದಂತೆ ಮಹಾಲಸ ಸಂಸ್ಥೆಯ ವಿದ್ಯಾರ್ಥಿಗಳು ರಚಿಸಿದ ಪೈಂಟಿಂಗ್‌ ಗಳು ಗಮನ ಸೆಳೆಯುತ್ತಿದ್ದವು. ಮಧುಬನಿ, ಖನ್ನಾಳ, ಕಲಂಕಾರಿ ವಿವಿಧ ವಿಶುವಲ್‌ ಕಲಾಕೃತಿಗಳನ್ನು ವಿದ್ಯಾರ್ಥಿಗಳೇ ರಚಿಸಿ ಪ್ರದರ್ಶನ ಮತ್ತು ಮಾರಾಟಕ್ಕಿಟ್ಟಿದ್ದರು.

ಮಣ್ಣಿನ ಕಲಾಕೃತಿ
ಗೋಕರ್ಣದ ಕಲಾವಿದ ರವಿ ಗುನಗ ಅವರ ಮುಂದಾಳತ್ವದಲ್ಲಿ ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳು ರಚಿಸಿದ ಕ್ಲೇ ಮಾಡೆಲಿಂಗ್‌, ಜೇಡಿ ಮಣ್ಣಿನ ಕಲಾಕೃತಿಗಳೂ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಪ್ರಾಣಿ ಮತ್ತು ಮನುಷ್ಯನ ಕಲಾಕೃತಿಗಳನ್ನು ಅರ್ಧ ಗಂಟೆಯಲ್ಲೇ ವಿದ್ಯಾರ್ಥಿಗಳು ಪೂರ್ಣಗೊಳಿಸುತ್ತಿದ್ದುದು ಕಲಾವಿದರ ಕೈಚಳಕವನ್ನು ಹೇಳುವಂತಿತ್ತು.

ಕರಾವಳಿ ಕಸುಬು
ಸಭಾಂಗಣದ ಮುಂಭಾಗದ ಆವರಣದಲ್ಲಿ ಕರಾವಳಿಯ ಸಾಂಪ್ರದಾಯಿಕ ಮೀನುಗಾರಿಕೆಯನ್ನು ಬಿಂಬಿಸುವ ದೋಣಿ ಹಾಗೂ ಮೀನುಗಾರ ಬಲೆ ಬೀಸಿ ಮೀನು ಹಿಡಿಯುವಂತೆ ಮಾಡಿದ ಚಿತ್ರ ಆಕರ್ಷಿತವಾಗಿತ್ತು. ಇಲ್ಲಿನ ಮುಖ್ಯ ಕಸುಬಾದ ಗದ್ದೆ ಬೇಸಾಯವನ್ನು ಅನಾವರಣಗೊಳಿಸುವ ಸಲುವಾಗಿ ಭತ್ತದ ತುಪ್ಪೆಯ ಮಾದರಿಯನ್ನು ಪ್ರದರ್ಶನಕ್ಕಿಡಲಾಗಿತ್ತು.

ಪುಸ್ತಕ ಪ್ರದರ್ಶನ
ಕನ್ನಡ, ಇಂಗ್ಲಿಷ್‌, ಹಿಂದಿ ಸಹಿತ ವಿವಿಧ ಭಾಷೆಗಳಲ್ಲಿ ಬರೆಯಲಾಗಿರುವ ಪುಸ್ತಕಗಳನ್ನು ಪ್ರದರ್ಶನಕ್ಕಿಡಲಾಗಿತ್ತು. 15ಕ್ಕೂ ಹೆಚ್ಚು ಪುಸ್ತಕ ಮಳಿಗೆಗಳು ಭಾಗವಹಿಸಿದ್ದವು.

ಅದ್ಭುತ ಕಾರ್ಯಕ್ರಮ
ಮಂಗಳೂರು ಲಿಟ್‌ ಫೆಸ್ಟ್‌ ಒಂದು ಅದ್ಭುತ ಕಾರ್ಯಕ್ರಮ. ಇಲ್ಲಿ ಕಲಾ ಪ್ರದರ್ಶನಕ್ಕೆ ಅವಕಾಶ ನೀಡಿದ ಕಾರ್ಯಕ್ರಮ ಆಯೋಜಕರಿಗೆ ಆಭಾರಿಯಾಗಿದ್ದೇನೆ. ನಮ್ಮ ಕಲಾ ಪ್ರದರ್ಶನದೊಂದಿಗೆ ಮಂಗಳೂರು ಭಾಗದ ವಿದ್ಯಾರ್ಥಿಗಳೂ ಕ್ಲೇ ಮಾಡೆಲಿಂಗ್‌ ಕಲಿಯುವ ಅವಕಾಶ ದೊರೆಯಿತು.
– ರವಿ ಗುನಗ, ಕಲಾವಿದ 

ಟಾಪ್ ನ್ಯೂಸ್

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.