ಮಾರುಕಟ್ಟೆಯಲ್ಲಿ ರಾರಾಜಿಸುತ್ತಿವೆ ವೈವಿಧ್ಯಮಯ ಗೂಡುದೀಪ, ಹಣತೆ


Team Udayavani, Nov 5, 2018, 12:00 PM IST

5-november-7.gif

ಮಹಾನಗರ: ದೀಪಗಳ ಹಬ್ಬ ದೀಪಾವಳಿ ಆಚರಣೆಗೆ ಮಾರುಕಟ್ಟೆಯಲ್ಲಿ ಸಿದ್ಧತೆಗಳು ಆರಂಭವಾಗಿವೆ. ಹಣತೆ ಮತ್ತು ಗೂಡು ದೀಪಗಳು ದೀಪಾವಳಿಯ ಪ್ರಮುಖ ಆಕರ್ಷಣೆಯಾಗಿದ್ದು, ವಿವಿಧ ಮಾದರಿಯ ಹಣತೆ ಮತ್ತು ಗೂಡು ದೀಪಗಳ ಸಂಗ್ರಹ ಅಂಗಡಿ ಮಳಿಗೆಗಳಲ್ಲಿ ರಾರಾಜಿಸುತ್ತಿವೆ. ಆವೆ ಮಣ್ಣಿನಿಂದ ತಯಾರಿಸಿದ ಮತ್ತು ಪಿಂಗಾಣಿ ಹಣತೆಗಳು ಎಂಬ ಎರಡು ವಿಧದ ಹಣತೆಗಳು ಲಭ್ಯವಿವೆ. ಮಣ್ಣಿನ ಹಣತೆಗಳು ಸಾಂಪ್ರದಾಯಿಕವಾಗಿದ್ದು, ಪಿಂಗಾಣಿ ಹಣತೆಗಳು ಇತ್ತೀಚಿನ ಆವಿಷ್ಕಾರವಾಗಿದೆ. ಆವೆ ಮಣ್ಣಿನ ಹಣತೆಗಳ ಬೆಲೆ ಕಡಿಮೆ. ಪಿಂಗಾಣಿ ಹಣತೆಗಳು ತುಸು ದುಬಾರಿ.

ಮಂಗಳೂರಿನಲ್ಲಿ ಒಂದು ಕಾಲದಲ್ಲಿ ಕೆಲವೇ ಅಂಗಡಿಗಳಲ್ಲಿ ಹಣತೆಗಳು ಲಭ್ಯವಾಗುತ್ತಿದ್ದವು. ಇತ್ತೀಚಿನ ವರ್ಷಗಳಿಂದ ತಮಿಳುನಾಡಿನಿಂದಲೂ ಹಣತೆ ಗಳು ಸರಬರಾಜು ಆಗುತ್ತಿದ್ದು, ಹಾಗಾಗಿ ರಸ್ತೆ ಬದಿಗಳಲ್ಲಿ ಮತ್ತು ತಳ್ಳು ಗಾಡಿಗಳಲ್ಲಿ ಅವುಗಳ ಮಾರಾಟ ನಡೆಯುತ್ತಿದೆ. ಆವೆ ಮಣ್ಣಿನಿಂದ ತಯಾರಿಸಿದ ಒಂದು ಹಣತೆಗೆ 1 ರೂ. ನಿಂದ 5 ರೂ. ತನಕ ಇದೆ. ಪಿಂಗಾಣಿಯಿಂದ ತಯಾರಿಸಿದ ಹಣತೆಯ ಬೆಲೆ 2.50 ರಿಂದ 15 ರೂ. ತನಕ ಇದೆ. ಹಣತೆಗಳನ್ನು ಅಂದವಾಗಿ ಜೋಡಿಸಿದ ಸೇಟ್‌ಗಳು ಲಭ್ಯವಿದ್ದು, ಸೆಟ್‌ ಒಂದರ ಬೆಲೆ 130 ರೂ. ಗಳಿಂದ 200 ರೂ. ತನಕ ಇದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಇದು ತನಕ ವ್ಯಾಪಾರ ಕಡಿಮೆ. ಜನರ ಕೈಯಲ್ಲಿ ಹಣ ಕಡಿಮೆಯಾಗಿರುವುದು ಇದಕ್ಕೆ ಕಾರಣ ಆಗಿರಬಹುದೆಂದು ಭಾವಿಸಲಾಗಿದೆ. ಮುಂದಿನ ಒಂದೆರಡು ದಿನಗಳಲ್ಲಿ ವ್ಯವಹಾರ ಕುದುರಬಹುದೆಂಬ ನಿರೀಕ್ಷೆ ಇದೆ ಎನ್ನುತ್ತಾರೆ ಆವೆ ಮಣ್ಣಿನ ಉತ್ಪನಗಳ ಮಾರಾಟಕ್ಕೆ ಸಂಬಂಧಿಸಿದ ಮಂಗಳೂರಿನ ಮೊದಲ ಸಂಸ್ಥೆ, 65 ವರ್ಷಗಳ ಹಿಂದೆ ಸ್ಥಾಪನೆಯಾದ ಪುರಭವನ ಬಳಿ ಇರುವ ಭಾರತ್‌ ಸಪ್ಲಾಯೀಸ್‌ನ ಮಾಲಕ ರವೀಂದ್ರ ಪ್ರಭು.

ಪಟಾಕಿಗಳು ದೀಪಾವಳಿಯ ಪ್ರಮುಖ ಆಕರ್ಷಣೆ ಅವಿಭಾಜ್ಯ ಅಂಗವೂ ಆಗಿದೆ. ಪಟಾಕಿಗಳ ಮಾರಾಟಕ್ಕೆ ಅಂಗಡಿಗಳು ಸಿದ್ಧವಾಗಿವೆ. ವಿವಿಧ ಮಾದರಿಯ ಆಕರ್ಷಕ ಗೂಡು ದೀಪಗಳು ಅಂಗಡಿಗಳಲ್ಲಿ ರಾರಾಜಿಸುತ್ತಿವೆ. ಅಂಗಡಿ ಮಳಿಗೆಗಳನ್ನು ಶೃಂಗರಿಸಲು ಬೇಕಾಗಿರುವ ಹೂವುಗಳ ಮಾರುಕಟ್ಟೆಗೆ ಬರಲಾರಂಭಿಸಿವೆ. 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.