‘ದೀಪಾವಳಿ ನಾಡಹಬ್ಬವಾಗಿ ಆಚರಿಸುವಂತಾಗಲಿ’


Team Udayavani, Nov 8, 2018, 10:56 AM IST

8-november-4.gif

ಮಹಾನಗರ: ದೀಪಾವಳಿ ಸರ್ವಧರ್ಮಗಳ ಹಬ್ಬವಾಗಿದೆ ಇದನ್ನು ನಾಡಹಬ್ಬವಾಗಿ ಆಚರಿಸುವಂತಾಗಬೇಕು ಸರ್ವಧರ್ಮಗಳೇ ನಮ್ಮ ಜೀವನದ ಪದ್ಧತಿ ಎಂದು ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ಕೆ. ಅನಂತ ಪದ್ಮನಾಭ ಆಸ್ರಣ್ಣ ಅವರು ಹೇಳಿದರು. ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಅವರ ನೇತೃತ್ವದಲ್ಲಿ ಮಂಗಳವಾರ ಭಾವೈಕ್ಯತೆಯ ಸರ್ವ ಧರ್ಮಗಳ ಸಂಗಮ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ವಧರ್ಮಗಳ ಒಗ್ಗೂಡುವಿಕೆಯೇ ನಮ್ಮ ಒಗ್ಗಟ್ಟು ದೀಪಾವಳಿ ಯನ್ನು ಆಚರಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿಯ ಬೇಕು. ಮೂರು ವರ್ಷಗಳಿಂದ ಈ ಸಂಭ್ರಮಾಚರಣೆಯಲ್ಲಿ ಭಾಗವಹಿಸುತ್ತಿರುವುದು ನನಗೆ ಸಂತಸ ತಂದಿದ್ದು, ಇದೊಂದು ಸಮಾಜಕ್ಕೆ ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.

ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ದೀಪಾವಳಿ ಔಚಿತ್ಯತೆ ಮತ್ತು ನಮ್ಮ ಸಂಸ್ಕೃತಿಯು ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯಲು ಸಹಕಾರಿಯಾಗುವುದು. ಸಮಾಜದಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದರೂ ಸಮಾಜದ ಒಳಿತಿಗಾಗಿ ನಡೆಯ ಬೇಕೇ ಹೊರತು ಅದರಿಂದ ಕೆಡುಕು ಆಗಬಾರದು ಎಂದು ನುಡಿದರು.

ಮುಸ್ಲಿಂ ಸೆಂಟ್ರಲ್‌ ಕಮಿಟಿ ಅಧ್ಯಕ್ಷ ಕೆ.ಎಸ್‌. ಮಹಮ್ಮದ್‌ ಮಸೂದ್‌ ಮಾತನಾಡಿ, ಸರ್ವಧರ್ಮಗಳ ಸಂಗಮ ಸರ್ವಧರ್ಮಗಳ ಒಗ್ಗೂಡುವಿಕೆ, ಹಬ್ಬಗಳ ಆಚರಣೆಯಿಂದ ಎಲ್ಲರ ಒಟ್ಟುಗೂಡಿಸುವಲ್ಲಿ ಸಹಕಾರಿಯಾಗುತ್ತದೆ. ದೀಪಾವಳಿ ಹಬ್ಬವು ಎಲ್ಲ ಧರ್ಮಗಳನ್ನು ಒಗ್ಗೂಡಿಸಿ ಶಾಸಕರು ಒಗ್ಗಟ್ಟನ್ನು ಮೆರೆದಿದ್ದಾರೆ ಎಂದು ಶ್ಲಾಘಿಸಿದರು. ಪಾಲಿಕೆ ಮೇಯರ್‌ ಭಾಸ್ಕರ್‌ ಕೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಸ್ಪರ್ಧೆಗೆಳಿಗೆ ಚಾಲನೆ
ಚಿತ್ರಕಲಾ ಸರ್ಧೆಗೆ ಸುನಿಲ್‌ ಆಚಾರ್‌ ಚಾಲನೆ ನೀಡಿದರು. ಇದೇ ವೇಳೆ ಗೂಡುದೀಪ ಸ್ಪರ್ಧೆ, ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಗಳು ನಡೆದವು. ಸಮಾರಂಭದಲ್ಲಿ ಸುಮಾರು 1,000 ಮಂದಿಗೆ ಅಕ್ಕಿ ವಿತರಣೆ ಮಾಡಲಾಯಿತು. ಮಾಜಿ ಶಾಸಕ ಬಿ.ಎ. ಮೊಯಿದಿನ್‌ ಬಾವ, ಮಾಜಿ ಸಚಿವ ಬಿ. ರಮಾನಾಥ ರೈ, ಕೋಡಿಜಾಲ್‌ ಇಬ್ರಾಹಿಂ, ಉದ್ಯಮಿಗಳಾದ ಸುನಿಲ್‌ ಪಾಯಸ್‌, ಮೋಹನ್‌ ಪಿ., ಕೆ.ಜೆ. ಸಿರಾಜ್‌ ಮನಪಾ ಮುಖ್ಯ ಸಚೇತಕರಾದ ಎಂ. ಶಶಿಧರ್‌ ಹೆಗ್ಡೆ, ಹೇಮನಾಥ ಶೆಟ್ಟಿ ಪುತ್ತೂರು, ಮನಪಾ ಸ್ಥಾಯೀ ಸಮಿತಿ ಅಧ್ಯಕ್ಷರಾದ ನವೀನ್‌ ಡಿ’ಸೋಜಾ, ಕವಿತಾ, ವಾಸು, ಕೇಶವ ಮರೋಳಿ, ಲತಾ ಸಾಲ್ಯಾನ್‌ ಜಯರಾಮ್‌ ಶೇಖಾ, ಎಲ್ಲ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರು ಸ್ಥಳೀಯ ನಾಯಕರು, ಅಧಿಕಾರಿಗಳು ಮನಪಾ ಸದಸ್ಯರು, ವಿವಿಧ ಉದ್ಯಮಿಗಳು, ಧಾರ್ಮಿಕ ನಾಯಕರು ಭಾಗವಹಿಸಿದ್ದರು. ಅರ್ಪಿತಾ ಶೆಟ್ಟಿ ನಿರೂಪಿಸಿದರು. ಜೆ. ನಾಗೇಂದ್ರ ಕುಮಾರ್‌ ವಂದಿಸಿದರು. ಈ ವೇಳೆ ಡಾ| ಮಚ್ಚೇಂದ್ರನಾಥ್‌ ಮಂಗಳಾದೇವಿ ಅವರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.