12 ಮರಳು ದಿಣ್ಣೆಗಳಿಂದ ಮರಳುಗಾರಿಕೆ


Team Udayavani, Nov 8, 2018, 11:30 AM IST

sand.png

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್‌ಝಡ್‌ ವ್ಯಾಪ್ತಿಯ 16 ಮರಳು ದಿಣ್ಣೆಗಳ ಪೈಕಿ 12ರಿಂದ ಮರಳು ತೆಗೆಯಲು ಒಟ್ಟು 76 ಮಂದಿಗೆ ಅನುಮೋದನೆ ನೀಡಲಾಗಿದೆ. ಈ ಪೈಕಿ ಮರಳು ದಕ್ಕೆಗಳ ಪರಿಶೀಲನೆ ಕೂಡ ನಡೆಸಲಾಗಿದ್ದು, ಕೆಲವೇ ದಿನಗಳಲ್ಲಿ ಮರಳು ತೆಗೆಯಲು ಪೂರ್ಣ ಅನುಮೋದನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ತಿಳಿಸಿದ್ದಾರೆ.

ತನ್ನ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನ್‌ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಒತ್ತು ನೀಡಲಾಗಿದೆ. 22 ಬ್ಲಾಕ್‌ಗಳನ್ನು ಗುರುತಿಸಲಾಗಿದ್ದು, ಇದರಲ್ಲಿ ಇಬ್ಬರಿಗೆ ಟೆಂಡರ್‌ ಆಗಿದೆ. ಉಳಿದವರು ಟೆಂಡರ್‌ನಲ್ಲಿ ಪಾಲ್ಗೊಳ್ಳಬಹುದು. ಇದಕ್ಕಾಗಿ ನಿಯಮಾವಳಿ ಯಲ್ಲಿಯೂ ಸ್ವಲ್ಪ ಸಡಿಲಿಕೆ ಮಾಡಲಾಗಿದೆ ಎಂದರು.

ನಿಯಮ ಸಡಿಲಿಕೆ
ಒಂದು ವರ್ಷ ಇದ್ದ ಲೀಸ್‌ ಅನ್ನು 5 ವರ್ಷಕ್ಕೆ ವಿಸ್ತರಿಸಲಾಗಿದೆ. ವಾರ್ಷಿಕ 25 ಲಕ್ಷ ರೂ. ವಹಿವಾಟು ನಡೆಸಿದವರಿಗೆ ಅನುಮತಿ ಎನ್ನುವ ಬದಲು 5 ಲಕ್ಷ ರೂ. ವಾರ್ಷಿಕ ವಹಿವಾಟು ನಡೆಸುವವರಿಗೆ ಅನು ಮತಿ ಕಲ್ಪಿಸಲಾಗುತ್ತದೆ. ಅದೇ ಗ್ರಾಮದವರೇ ಆಗ ಬೇಕು ಎನ್ನುವುದನ್ನು ತಾಲೂಕಿಗೆ ವಿಸ್ತರಣೆ ಮಾಡಲಾಗಿದೆ. ಹಾಗಾಗಿ ಮುಂದಿನ ಟೆಂಡರ್‌ನಲ್ಲಿ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ನಾನ್‌ ಸಿಆರ್‌ಝಡ್‌ ಮರಳು ಹೆಚ್ಚಾಗಿ ಬಳಕೆಯಾಗಬೇಕಿದೆ ಎಂದರು. ಮರಳು ದರ ನಿಗದಿಗೆ ಈಗಾಗಲೇ ನಿರ್ಧರಿಸಲಾಗಿದ್ದು, 3,000 ರೂ. ಮಾಡಬೇಕು ಎಂಬ ಬಗ್ಗೆ ಜಿಲ್ಲಾಡಳಿತ ಯೋಚಿಸಿದೆ. ಈ ಬಗ್ಗೆ ಅಂತಿಮ ತೀರ್ಮಾನವನ್ನು ಮುಂದಿನ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು. ಇದಕ್ಕಾಗಿ ಪ್ರತ್ಯೇಕವಾಗಿ ಕಂಟ್ರೋಲ್‌ ರೂಂ ತೆರೆಯಲಾಗುವುದು ಎಂದವರು ಹೇಳಿದರು.

ಗುಂಡ್ಯ ಹೆದ್ದಾರಿ ಸಮಸ್ಯೆ ಶೀಘ್ರ ಪರಿಹಾರ
ಗುಂಡ್ಯ-ಬಿ.ಸಿ.ರೋಡ್‌ ಕಾಂಕ್ರೀಟ್‌ ಕಾಮಗಾರಿ ಮಳೆಯ ಬಳಿಕ ಸ್ವಲ್ಪ ನಿಧಾನವಾಗಿದೆ. ಈ ಬಗ್ಗೆ ಎನ್‌ಎಚ್‌ಎಐ ಅವರಲ್ಲಿ ಮಾಹಿತಿ ಪಡೆಯಲಾಗಿದೆ. ಗುತ್ತಿಗೆದಾರರು  - ಪ್ರಾಧಿಕಾರದ ಮಧ್ಯೆ ಅಭಿಪ್ರಾಯ ಭೇದ ಸೇರಿದಂತೆ ಎಲ್ಲ ವಿಚಾರಗಳನ್ನು ವಾರದೊಳಗೆ ಸರಿಪಡಿಸುವಂತೆ ಸೂಚಿಸಲಾಗಿದೆ ಎಂದರು.

ಕೂಳೂರು ಹಳೆಯ ಸೇತುವೆ ಬಂದ್‌ ಮಾಡುವ ಕುರಿತು ಪೂರ್ಣ ಸಾಧ್ಯತಾ ವರದಿ ನೀಡುವಂತೆ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಟ್ರಾಫಿಕ್‌ ಎಸಿಪಿ ಉಪಸ್ಥಿತಿಯ ಸಮಿತಿ ರಚಿಸಲಾಗಿದೆ. ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಹುದೇ? ಪೂರ್ಣ ಮುಚ್ಚಬೇಕೇ? ಪರ್ಯಾಯ ಮಾರ್ಗಗಳು ಯಾವುದು ಸಹಿತ ಹಲವು ವಿಚಾರಗಳ ಬಗ್ಗೆ ಪೂರ್ಣ ವರದಿಯನ್ನು ಅವರು ನೀಡಲಿದ್ದಾರೆ. ಆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಕುಮಾರ್‌ ಉಪಸ್ಥಿತರಿದ್ದರು.

ಶಿರಾಡಿ: ದೀಪಾವಳಿ ಬಳಿಕ ಘನ ವಾಹನ ಸಂಚಾರ
ಶಿರಾಡಿ ಘಾಟಿಯಲ್ಲಿ ದಕ್ಷಿಣ ಕನ್ನಡ ಭಾಗ ಘನ ವಾಹನಗಳ ಓಡಾಟಕ್ಕೆ ಸೂಕ್ತವಾಗಿದ್ದು, ನಮ್ಮ ಅನುಮತಿ ಇದೆ. ಆದರೆ ಹಾಸನ ಜಿಲ್ಲಾಡಳಿತದಿಂದ ಇನ್ನೂ ಅನುಮತಿ ದೊರೆತಿಲ್ಲ. ದೀಪಾವಳಿ ಬಳಿಕ ಹಾಸನ ಜಿಲ್ಲಾಡಳಿತದ ಮಾಹಿತಿ ಪಡೆದುಕೊಂಡು ಘನ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಹೆದ್ದಾರಿ ಪ್ರಾಧಿಕಾರದವರು ಈಗಾಗಲೇ ಶಿರಾಡಿ ಘಾಟಿ ಹೆದ್ದಾರಿಯಲ್ಲಿ ಕುಸಿತ ಸಂಭವಿಸಿದ ಕಡೆಗಳಲ್ಲಿ ದುರಸ್ತಿ ಕೆಲಸ ಆರಂಭಿಸಿದ್ದಾರೆ. ಶಿರಾಡಿಯಲ್ಲಿ ಘನ ವಾಹನ ಸಂಚಾರ ಪ್ರಾರಂಭಗೊಂಡ ಬಳಿಕ ಹದಗೆಟ್ಟ ಚಾರ್ಮಾಡಿ ಘಾಟಿ ರಸ್ತೆ ದುರಸ್ತಿ ಕೆಲಸ ಕೈಗೆತ್ತಿಕೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.