ಬಟ್ಟಗುಡ್ಡದಲ್ಲಿ ಬಲ ತಿರುವು ನಿಷೇಧ; ಸವಾರರಿಗೆ ಸಮಸ್ಯೆ 


Team Udayavani, Nov 8, 2018, 11:59 AM IST

8-november-7.gif

ಮಹಾನಗರ: ಬಿಜೈ ಮಾರುಕಟ್ಟೆ ರಸ್ತೆಯ ಮೂಲಕ ಸರ್ಕಿಟ್ ಹೌಸ್‌ ಭಾಗಕ್ಕೆ ತೆರಳುವ ರಸ್ತೆಯ ಬಟ್ಟಗುಡ್ಡದಿಂದ ಕದ್ರಿಗೆ ತೆರಳುವ ಜಾಗದಲ್ಲಿ ಪ್ರಾಯೋಗಿಕವಾಗಿ ಬಲ ತಿರುವನ್ನು ನಗರ ಪೊಲೀಸರು ನಿಷೇಧಿಸಿರುವುದು ವಾಹನ ಸವಾರರಿಗೆ ಸಮಸ್ಯೆ ಸೃಷ್ಟಿಸಿದೆ.

ಇಲ್ಲಿ ಬಲ ತಿರುವಿಗೆ ನಿಷೇಧ ವಿಧಿಸಿರುವ ಹಿನ್ನೆಲೆಯಲ್ಲಿ ಬಿಜೈ ಮಾರುಕಟ್ಟೆ ಭಾಗದಿಂದ ಕದ್ರಿ ಭಾಗಕ್ಕೆ ತೆರಳುವವರು ಅನಾಯಸವಾಗಿ ಸರ್ಕಿಟ್ ಹೌಸ್‌ ಮುಂಭಾಗದವರೆಗೆ ಬಂದು ಅಲ್ಲಿ ಬಲಕ್ಕೆ ತಿರುಗಿ ವಾಪಾಸ್‌ ತೆರಳುವ ಪ್ರಮೇಯ ಎದುರಾಗಿದೆ. ನಿಧಾನವಾಗಿ ವಾಹನ ತಿರುಗಿಸಲು ಸಾಧ್ಯವಿರುವ ರಸ್ತೆಯಲ್ಲಿ ಅಸಮರ್ಪಕ ರೀತಿಯಲ್ಲಿ ಒಂದು ಭಾಗಕ್ಕೆ ತಿರುವನ್ನು ನಿಷೇಧ ಮಾಡಿರುವ ಕ್ರಮಕ್ಕೆ ಪ್ರಯಾಣಿಕರು ಅಪಸ್ವರ ವ್ಯಕ್ತಪಡಿಸಿದ್ದಾರೆ. 

ಕೆಪಿಟಿ ಭಾಗದಿಂದ ಬಿಜೈ ಮಾರುಕಟ್ಟೆ ಭಾಗಕ್ಕೆ ಬರುವ ವಾಹನಗಳಿಗೆ ಸಮಸ್ಯೆ ಆಗುತ್ತಿದೆ ಹಾಗೂ ಅಪಘಾತ ನಡೆಯುವ ಸಾಧ್ಯತೆಯಿರುವ ಕಾರಣದಿಂದ ಬಲಭಾಗದ ತಿರುವನ್ನು ನಿಷೇಧಿಸಲಾಗಿದೆ. ಸದ್ಯ ಕದ್ರಿ ಭಾಗದ ಒಳರಸ್ತೆಯಿಂದ ಬಂದು ಸರ್ಕಿಟ್ ಹೌಸ್‌ ಕಡೆಗೆ ತೆರಳುವವರು ಇದೇ ಬಟ್ಟಗುಡ್ಡದಲ್ಲಿ ಬಲಕ್ಕೆ ತಿರುಗಲು ಅವಕಾಶ ನೀಡಿದ್ದಾರೆ. ಆದರೆ, ಕದ್ರಿ ಭಾಗಕ್ಕೆ ಮಾತ್ರ ತಿರುಗಲು ಪ್ರಾಯೋಗಿಕ ನಿಷೇಧ ಹೇರಲಾಗಿರುವುದು ಯಾವ ನ್ಯಾಯ ? ವಾಹನಗಳ ಒತ್ತಡ ಅಥವಾ ಅಪಘಾತ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮವಾದರೂ ಒಂದು ಭಾಗದಿಂದ ಹೋಗುವವರಿಗೆ ಮಾತ್ರ ಅವಕಾಶ ನೀಡಿ, ಮತ್ತೊಂದು  ಭಾಗದಿಂದ ಹೋಗುವವರಿಗೆ ಅವಕಾಶ ನೀಡದಿರುವುದು ಸಮಂಜಸವೇ? ಎಂಬುದು ಪ್ರಯಾಣಿಕರ ಪ್ರಶ್ನೆ.

ಪ್ರಾಯೋಗಿಕ ಕ್ರಮ ಜಾರಿ
ಈ ಮಧ್ಯೆ ಮಂಗಳವಾರದಿಂದ ಪ್ರಾಯೋಗಿಕವಾಗಿ ಈ ಕ್ರಮ ಜಾರಿಯಲ್ಲಿದೆ. ಬ್ಯಾರಿಕೇಡ್‌ನ‌ಲ್ಲಿ ಸಣ್ಣದಾಗಿ ಈ ಬಗ್ಗೆ ಪೋಸ್ಟರ್‌ ಅಂಟಿಸಲಾಗಿದೆ. ಆದರೆ, ವಾಹನ ಸವಾರರಿಗೆ ಇದು ಗಮನಕ್ಕೆ ಬಾರದೆ ಬಹುತೇಕ ವಾಹನದವರು ಇಲ್ಲಿ ಎಂದಿನಂತೆಯೇ ಬಲಭಾಗಕ್ಕೆ ತಿರುಗಿ ಕದ್ರಿ ಕಡೆಗೆ ತೆರಳುತ್ತಿದ್ದಾರೆ. ಟ್ರಾಫಿಕ್‌ ಪೊಲೀ ಸರು ಇಲ್ಲಿ ಇಲ್ಲದಿರುವುದರಿಂದ, ಸ್ಪಷ್ಟ ಸೂಚನೆ ಇಲ್ಲಿ ಗೊತ್ತಾಗದ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರಿಗೆ ಮಾಹಿತಿ ಇಲ್ಲದ ಕಾರಣದಿಂದ ಟ್ರಾಫಿಕ್‌ ಪೊಲೀಸರ ಪ್ರಾಯೋಗಿಕ ಈ ನಿಯಮವು ಪೂರ್ಣ ಮಟ್ಟದಲ್ಲಿ ಜಾರಿಯೂ ಆಗಿಲ್ಲ.

ಈ ಬಗ್ಗೆ ಟ್ರಾಫಿಕ್‌ ಪೊಲೀಸ್‌ ಅಧಿಕಾರಿಗಳನ್ನು ವಿಚಾರಿಸಿದಾಗ, ‘ಬಟ್ಟಗುಡ್ಡ ಭಾಗದಲ್ಲಿ ವಾಹನಗಳ ಒತ್ತಡ ಜಾಸ್ತಿ ಇರುವ ಕಾರಣದಿಂದ ಪ್ರಾಯೋಗಿಕವಾಗಿ ಈ ನಿಯಮ ಜಾರಿಗೊಳಿಸಲಾಗಿದೆ. ಮುಂದೆ ಅಂತಿಮ ತೀರ್ಮಾನಗಳನ್ನು ಕೈಗೊಳ್ಳಲಾಗುವುದು’ ಎನ್ನುತ್ತಾರೆ. 

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.