ಬಾವಿಯಲ್ಲಿ ತೈಲ: ಪೆಟ್ರೋಲ್ ಬಂಕ್ ಸೋರಿಕೆಯಲ್ಲ
Team Udayavani, Nov 10, 2018, 10:09 AM IST
ಉಳ್ಳಾಲ: ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇರಳಕಟ್ಟೆ ಕಾನಕೆರೆ ಬಾವಿಯಲ್ಲಿ ತೈಲದ ಅಂಶ ಪತ್ತೆ ಹಿನ್ನೆಲೆಯಲ್ಲಿ ಪಕ್ಕದ ಪೆಟ್ರೋಲ್ ಬಂಕನ್ನು ಇಲಾಖೆಯ ಅಧಿಕಾರಿಗಳು ಸಮಗ್ರ ತಪಾಸಣೆ ಮಾಡಿದ್ದು ಬಂಕ್ನಿಂದ ಯಾವುದೇ ಸೋರಿಕೆ ಇಲ್ಲ ಎಂದು ದೃಢಪಡಿಸಿದ್ದಾರೆ. ಪರಿಸರ ಇಲಾಖೆ ಅಧಿಕಾರಿ ಜಯಪ್ರಕಾಶ್ ನಾಯಕ್ ನೇತೃತ್ವದ ತಂಡವು ಬಾವಿಯಲ್ಲಿರುವ ತೈಲದ ಮೂಲ ಪತ್ತೆಗಾಗಿ ನೀರನ್ನು ಕೊಂಡೊಯ್ದಿದ್ದಾರೆ. ನೀರನ್ನು ಎಂಆರ್ಪಿಎಲ್ ಲ್ಯಾಬ್ಗ ಕಳುಹಿಸಲಾಗಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾನಕೆರೆಯ ಬಾವಿಗಳಲ್ಲಿ ತೈಲದ ಅಂಶ ಕಂಡುಬರುತ್ತಿದೆ. ಸ್ಥಳೀಯ ಪೆಟ್ರೋಲ್ ಬಂಕ್ನಿಂದ ಸೋರಿಕೆಯಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ವಾದಿಸಿದ್ದರು. ಈ ನಿಟ್ಟಿನಲ್ಲಿ ಐಒಸಿಎಲ್ ಅಧಿಕಾರಿಗಳು, ಪರಿಸರ ಇಲಾಖೆಯ ತಜ್ಞರು ಸ್ಥಳೀಯ ಗ್ರಾ.ಪಂ. ಅಧಿಕಾರಿಗಳ ಸಮ್ಮುಖದಲ್ಲಿ ಗುರುವಾರ ಬಂಕ್ನ ವ್ಯವಹಾರ ಸ್ಥಗಿತಗೊಳಿಸಿ ಪರಿಶೀಲನೆ ನಡೆಸಿದರು.
ತ್ಯಾಜ್ಯ ನೀರಿನ ಸಮಸ್ಯೆ
ದೇರಳಕಟ್ಟೆ ಪರಿಸರದಲ್ಲಿ ಬಹುಮಹಡಿ ಕಟ್ಟಡಗಳು ಸೇರಿಂದಂತೆ ಮೊರಾರ್ಜಿ ದೇಸಾಯಿ ಶಾಲೆ ಖಾಸಗಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಇದರಿಂದ ಬರುವ ಮಲಿನ ನೀರಿನಿಂದ ಕಾನಕೆರೆ ಪರಿಸರದಲ್ಲಿ ತೈಲ ಅಂಶ ಉತ್ಪತ್ತಿಯಾಗಿರಬಹುದು ಎಂದೂ ಸ್ಥಳೀಯರು ವಾದಿಸುತ್ತಿದ್ದು, ಸ್ಥಳೀಯಾಡಳಿತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ