ಬಾವಿಯಲ್ಲಿ ತೈಲ: ಪೆಟ್ರೋಲ್ ಬಂಕ್ ಸೋರಿಕೆಯಲ್ಲ
Team Udayavani, Nov 10, 2018, 10:09 AM IST
ಉಳ್ಳಾಲ: ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇರಳಕಟ್ಟೆ ಕಾನಕೆರೆ ಬಾವಿಯಲ್ಲಿ ತೈಲದ ಅಂಶ ಪತ್ತೆ ಹಿನ್ನೆಲೆಯಲ್ಲಿ ಪಕ್ಕದ ಪೆಟ್ರೋಲ್ ಬಂಕನ್ನು ಇಲಾಖೆಯ ಅಧಿಕಾರಿಗಳು ಸಮಗ್ರ ತಪಾಸಣೆ ಮಾಡಿದ್ದು ಬಂಕ್ನಿಂದ ಯಾವುದೇ ಸೋರಿಕೆ ಇಲ್ಲ ಎಂದು ದೃಢಪಡಿಸಿದ್ದಾರೆ. ಪರಿಸರ ಇಲಾಖೆ ಅಧಿಕಾರಿ ಜಯಪ್ರಕಾಶ್ ನಾಯಕ್ ನೇತೃತ್ವದ ತಂಡವು ಬಾವಿಯಲ್ಲಿರುವ ತೈಲದ ಮೂಲ ಪತ್ತೆಗಾಗಿ ನೀರನ್ನು ಕೊಂಡೊಯ್ದಿದ್ದಾರೆ. ನೀರನ್ನು ಎಂಆರ್ಪಿಎಲ್ ಲ್ಯಾಬ್ಗ ಕಳುಹಿಸಲಾಗಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾನಕೆರೆಯ ಬಾವಿಗಳಲ್ಲಿ ತೈಲದ ಅಂಶ ಕಂಡುಬರುತ್ತಿದೆ. ಸ್ಥಳೀಯ ಪೆಟ್ರೋಲ್ ಬಂಕ್ನಿಂದ ಸೋರಿಕೆಯಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ವಾದಿಸಿದ್ದರು. ಈ ನಿಟ್ಟಿನಲ್ಲಿ ಐಒಸಿಎಲ್ ಅಧಿಕಾರಿಗಳು, ಪರಿಸರ ಇಲಾಖೆಯ ತಜ್ಞರು ಸ್ಥಳೀಯ ಗ್ರಾ.ಪಂ. ಅಧಿಕಾರಿಗಳ ಸಮ್ಮುಖದಲ್ಲಿ ಗುರುವಾರ ಬಂಕ್ನ ವ್ಯವಹಾರ ಸ್ಥಗಿತಗೊಳಿಸಿ ಪರಿಶೀಲನೆ ನಡೆಸಿದರು.
ತ್ಯಾಜ್ಯ ನೀರಿನ ಸಮಸ್ಯೆ
ದೇರಳಕಟ್ಟೆ ಪರಿಸರದಲ್ಲಿ ಬಹುಮಹಡಿ ಕಟ್ಟಡಗಳು ಸೇರಿಂದಂತೆ ಮೊರಾರ್ಜಿ ದೇಸಾಯಿ ಶಾಲೆ ಖಾಸಗಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಇದರಿಂದ ಬರುವ ಮಲಿನ ನೀರಿನಿಂದ ಕಾನಕೆರೆ ಪರಿಸರದಲ್ಲಿ ತೈಲ ಅಂಶ ಉತ್ಪತ್ತಿಯಾಗಿರಬಹುದು ಎಂದೂ ಸ್ಥಳೀಯರು ವಾದಿಸುತ್ತಿದ್ದು, ಸ್ಥಳೀಯಾಡಳಿತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ