ತುಂಬೆ ಡ್ಯಾಂನಲ್ಲಿ ಡ್ರೆಜ್ಜಿಂಗ್ ಗೆ ಜಿಲ್ಲಾಡಳಿತ ನಿರ್ಧಾರ


Team Udayavani, Nov 12, 2018, 10:10 AM IST

12-november-1.gif

ಮಹಾನಗರ: ಇದೇ ಮೊದಲ ಬಾರಿಗೆ ನಗರಕ್ಕೆ ನೀರುಣಿಸುವ ತುಂಬೆ ವೆಂಟೆಡ್‌ ಡ್ಯಾಂನಲ್ಲಿ ಸಂಗ್ರಹವಾಗಿರುವ ಬೃಹತ್‌ ಪ್ರಮಾಣದ ಹೂಳು ಸಹಿತ ಮರಳನ್ನು ತೆಗೆಯಲು ಜಿಲ್ಲಾಡಳಿತ ಮುಂದಾಗಿದೆ. ಈ ಮೂಲಕ ತುಂಬೆ ಡ್ಯಾಂನಲ್ಲಿ ಹೆಚ್ಚು ನೀರು ಸಂಗ್ರಹಕ್ಕೆ ಎದುರಾಗಿದ್ದ ಅಡಚಣೆ ಯನ್ನು ನಿವಾರಿಸುವ ಪ್ರಯತ್ನ ನಡೆದಿದೆ.

ಡ್ಯಾಂನ ಆಳದಲ್ಲಿ ತುಂಬಿರುವ ಬೃಹತ್‌ ಪ್ರಮಾಣದ ಮರಳನ್ನು ತುರ್ತಾಗಿ ಡ್ರೆಜ್ಜಿಂಗ್‌ ಮೂಲಕ ವಿಲೇವಾರಿ ಮಾಡಲು ಕೇಂದ್ರ ಪರಿಸರ ಇಲಾಖೆ ಇತ್ತೀಚೆಗೆ ಜಿಲ್ಲಾಡಳಿತಕ್ಕೆ ಅನುಮತಿ ನೀಡಿತ್ತು. ಈ ಸಂಬಂಧ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಮನಪಾ ಅಧಿಕಾರಿಗಳನ್ನು ಒಳಗೊಂಡ ಮೇಲುಸ್ತುವಾರಿ ಸಮಿತಿಯೊಂದನ್ನು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ರಚನೆ ಮಾಡಿದ್ದಾರೆ. ಆ ಸಮಿತಿ ಮೂಲಕ ಟೆಂಡರ್‌ ಕರೆಯಲು ಅನುಮತಿ ನೀಡಲಾಗಿದೆ. ಟೆಂಡರ್‌ ಪ್ರಕ್ರಿಯೆ ಮುಗಿದ ಅನಂತರ ನಿಯಮಾವಳಿಗಳ ಪ್ರಕಾರ ಡ್ರೆಜ್ಜಿಂಗ್‌ ನಡೆಸಲು ಅನುಮತಿ ದೊರೆಯಲಿದೆ.

ತುಂಬೆ ಡ್ಯಾಂನ ಪಂಪಿಂಗ್‌ ಜಾಗದಲ್ಲಿ ಇರುವ ಬಾವಿಯಲ್ಲಿ ಯಥೇತ್ಛವಾಗಿ ಮರಳು ತುಂಬಿ ಪಂಪಿಂಗ್‌ ಸಮಸ್ಯೆ ಆದಾಗ, ಬಾವಿಯಲ್ಲಿ ತುಂಬಿರುವ ಮರಳನ್ನು ಈ ಹಿಂದೆ ತೆಗೆಯಲಾಗಿತ್ತು. 15 ದಿನದ ಹಿಂದೆ ಕೂಡ ಇದೇ ರೀತಿ ಬಾವಿಯ ಮರಳನ್ನು ತೆಗೆಯಲಾಗಿದ್ದು, ಅದಕ್ಕಾಗಿ ಒಂದು ದಿನ ನೀರು ಸರಬರಾಜು ಸ್ಥಗಿತಗೊಳಿಸಲಾಗಿತ್ತು. ಆದರೆ ಡ್ಯಾಂ ಪೂರ್ಣ ಸಂಗ್ರಹವಾಗಿರುವ ಮರಳನ್ನು ತೆಗೆದಿರಲಿಲ್ಲ. ಹೀಗಾಗಿ ಎಷ್ಟು ಪ್ರಮಾಣದ ಮರಳು ಇಲ್ಲಿ ಇದೆ ಎಂದು ಅಂದಾಜಿಸಲಾಗುತ್ತಿಲ್ಲ.

ಡ್ರೆಜ್ಜಿಂಗ್‌ ಯಾಕಾಗಿ?
ಈಗ ತುಂಬೆ ಡ್ಯಾಂನಲ್ಲಿ ನೀರಿನ ಸಂಗ್ರಹ 5 ಮೀಟರ್‌ನಷ್ಟಿದೆ. ಆದರೆ ನದಿಯಲ್ಲಿ ನೀರಿನ ಜತೆಗೆ ಮರಳು ಕೂಡ ಬಂದು ಡ್ಯಾಂ ಭಾಗದ ತಳಮಟ್ಟದಲ್ಲಿ ಸಂಗ್ರಹವಾಗಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಜತೆಗೆ ಈ ಹಿಂದಿನ ಹಳೆ ಡ್ಯಾಂನಲ್ಲಿ ಮಳೆಗಾಲದ ಸಂದರ್ಭ ಎಲ್ಲ ಗೇಟುಗಳನ್ನು ತೆರೆಯುತ್ತಿದ್ದ ಕಾರಣ ಮರಳು ಡ್ಯಾಂನಿಂದ ಹೊರಭಾಗಕ್ಕೆ ಹೋಗುತ್ತಿತ್ತು. ಹೊಸ ಡ್ಯಾಂ ಆದ ಬಳಿಕ ಇಲ್ಲಿ ಕೆಲವು ಗೇಟ್‌ಗಳನ್ನು ಬಂದ್‌ ಮಾಡಿದ್ದರಿಂದ ಅಲ್ಲಿ ಮರಳು ಸಂಗ್ರಹ ಯಥೇತ್ಛವಾಗಿದೆ. ಭಾರೀ ಪ್ರಮಾಣದಲ್ಲಿ ಹೂಳು/ಮರಳು ತುಂಬಿದರೆ, ನೀರು ಹತ್ತಿರದ ಪ್ರದೇಶಗಳಿಗೆ ನುಗ್ಗುವ ಅಪಾಯ ವಿದೆ. ಹೀಗಾಗಿ ಡ್ರೆಜ್ಜಿಂಗ್‌ ಮಾಡಲು ತೀರ್ಮಾನಿಸಲಾಗಿದೆ.

ತುಂಬೆ ವೆಂಟೆಡ್‌ಡ್ಯಾಂ ಅನ್ನು ನಗರದ ಮುಂದಿನ 20ರಿಂದ 25 ವರ್ಷಗಳವರೆಗಿನ ನೀರಿನ ಆವಶ್ಯಕತೆಯನ್ನು ಮನಗಂಡು 2009ರಲ್ಲಿ ರೂಪಿಸಲಾಗಿತ್ತು. ಡ್ಯಾಂನ ಎತ್ತರ 12 ಮೀಟರ್‌ ಆಗಿದ್ದು ಗರಿಷ್ಠ 7 ಮೀ. ನೀರು ನಿಲ್ಲಿಸಬಹುದು. ಆದರೆ 7 ಮೀ.ನೀರು ಸಂಗ್ರಹಿಸಿದರೆ ನದಿಯ ಎರಡೂ ಕಡೆಗಳಲ್ಲಿ ಕೃಷಿ ಭೂಮಿ ಸಹಿತ ಬಹಳಷ್ಟು ಪ್ರದೇಶ ಜಲಾವೃತಗೊಳ್ಳುವುದರಿಂದ ಆರಂಭ ದಲ್ಲಿ ಇಲ್ಲಿ 5 ಮೀ. ಎತ್ತರಕ್ಕೆ ನೀರು ಸಂಗ್ರಹಿಸಲಾಗುತ್ತಿದೆ. ನಗರಕ್ಕೆ ದಿನಂಪ್ರತಿ 160 ಎಂಎಲ್‌ಡಿ ನೀರು ಸರಬರಾಜಾಗುತ್ತಿದೆ. 

ಮೀನುಗಾರಿಕಾ ಬಂದರ್‌ನ ರೀತಿಯಲ್ಲಿ ಡ್ರೆಜ್ಜಿಂಗ್‌
ನಗರದ ಮೀನುಗಾರಿಕಾ ಬಂದರ್‌ ನಲ್ಲಿ ಮೀನುಗಾರಿಕಾ ದೋಣಿಗಳ ಸಾಗಾಟಕ್ಕೆ ಅನುಕೂಲ ಕಲ್ಪಿಸಲು ಮಾಡಲಾಗುತ್ತಿರುವ ಡ್ರೆಜ್ಜಿಂಗ್‌ಗೆ ಬಳಕೆ ಮಾಡುವ ರೀತಿಯ ಬೃಹತ್‌ ಗಾತ್ರದ ಯಂತ್ರವನ್ನೇ ತುಂಬೆ ಡ್ಯಾಂನಲ್ಲೂ ಬಳಕೆ ಮಾಡುವ ಸಾಧ್ಯತೆ ಇದೆ. ಡ್ಯಾಂನ ಪೂರ್ಣ ಮರಳನ್ನು ತೆಗೆದು ಅದನ್ನು ಸರಕಾರಿ ಕಾಮಗಾರಿಗಳಿಗೆ ಬಳಕೆ ಮಾಡುವ ಬಗ್ಗೆ ಈಗಾಗಲೇ ಜಿಲ್ಲಾಡಳಿತ ಪ್ರಾಥಮಿಕವಾಗಿ ನಿರ್ಧರಿಸಿದೆ. ಆದರೆ ಡ್ಯಾಂನಿಂದ ತೆಗೆದ ಮರಳನ್ನು ಎಲ್ಲಿ ಸಂಗ್ರಹಿಸುವುದು ಹಾಗೂ ಅವುಗಳ ವಿಲೇವಾರಿ ಹೇಗೆ? ಇತ್ಯಾದಿ ಸಂಗತಿಗಳ ಬಗ್ಗೆ ಜಿಲ್ಲಾಧಿಕಾರಿಯವರು ನೇಮಿಸಿದ್ದ ಸಮಿತಿಯು ಮುಂದಿನ ತೀರ್ಮಾನ ಕೈಗೊಳ್ಳಲಿದೆ.

ಒಳಹರಿವು ಕಡಿಮೆಯಾದರೆ 6 ಮೀಟರ್‌
ಕಳೆದ ಬಾರಿ ತುಂಬೆ ಡ್ಯಾಂನಲ್ಲಿ ನೀರಿನ ಒಳಹರಿವು ಕಡಿಮೆ ಆಗುತ್ತಿದ್ದಂತೆ ನವೆಂಬರ್‌ ಅಂತ್ಯದ ವೇಳೆಗೆ 6 ಮೀಟರ್‌ ನೀರು ನಿಲ್ಲಿಸಲಾಗಿತ್ತು. ಈಗ 5 ಮೀಟರ್‌ ನಷ್ಟು ನೀರು ಸಂಗ್ರಹಿಸಲಾಗುತ್ತಿದೆ. ಈ ಬಾರಿಯೂ ಒಳಹರಿವು ಕಡಿಮೆಯಾಗುವ ಸಂದರ್ಭ ಗೇಟಿನ ಮಟ್ಟವನ್ನು ಸ್ವಲ್ಪ ಏರಿಸಿ 6 ಮೀಟರ್‌ ನೀರು ನಿಲುಗಡೆ ಮಾಡಲು ಪಾಲಿಕೆ ನಿರ್ಧರಿಸಿದೆ.

ಡ್ರೆಜ್ಜಿಂಗ್‌ಗೆ ಅನುಮತಿ
ತುಂಬೆ ಡ್ಯಾಂನಲ್ಲಿ ತುಂಬಿರುವ ಹೂಳು/ಮರಳನ್ನು ಡ್ರೆಜ್ಜಿಂಗ್‌ ಮಾಡಲು ಜಿಲ್ಲಾಡಳಿತ ಅನುಮತಿ ನೀಡಿದೆ. ಇದಕ್ಕಾಗಿ  ಮಿತಿಯೊಂದನ್ನು ರಚಿಸಲಾಗಿದೆ. ಅದರ ಮೂಲಕ ಟೆಂಡರ್‌ ಹಾಗೂ ಇತರ ನಿಯಮಾವಳಿಗಳ ಜಾರಿಗೆ ಸಿದ್ಧತೆ ನಡೆದಿದೆ. ಕೆಲವೇ ದಿನದಲ್ಲಿ ಡ್ರೆಜ್ಜಿಂಗ್‌ ಪ್ರಕ್ರಿಯೆ ಆರಂಭವಾಗಲಿದೆ.
– ಮಹಮ್ಮದ್‌ ನಝೀರ್‌, ಆಯುಕ್ತರು, ಮನಪಾ

 ದಿನೇಶ್‌ ಇರಾ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.