500 ಹಣತೆ ಬೆಳಗಿ ಸೌಹಾರ್ದ ದೀಪಾವಳಿ
Team Udayavani, Nov 13, 2018, 3:10 AM IST
ಮಹಾನಗರ : ತಿರುವೈಲು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಚಿಣ್ಣರ ಅಂಗಳ ಉದ್ಯಾನವನದಲ್ಲಿ ಸೌಹಾರ್ದ ದೀಪಾವಳಿಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ತಿರುವೈಲು ವಾರ್ಡ್ನ ಕಾರ್ಪೊರೇಟರ್ ಹೇಮಲತಾ ರಘು ಸಾಲ್ಯಾನ್, ಮಕ್ಕಳ ಪೋಷಕ ಹಸನಬ್ಬ ಅಮೃತನಗರ ಮತ್ತು ಹಳೆ ವಿದ್ಯಾರ್ಥಿ ಹಾಗೂ ಉದ್ಯಮಿ ಸ್ಟ್ಯಾನಿ ಕುಟಿನ್ಹೊ ಅವರು ಹಣತೆಯನ್ನು ಬೆಳಗಿಸುವುದರ ಮೂಲಕ ದೀಪಾವಳಿ ಆಚರಣೆಗೆ ಚಾಲನೆ ನೀಡಿದರು. ಭಾಗವಹಿಸಿದ್ದ ಎಲ್ಲರೂ ಸೇರಿ ಒಟ್ಟು ಸುಮಾರು 500 ಹಣತೆಗಳನ್ನು ಬೆಳಗಿಸಿ ಬೆಳಕಿನ ಹಬ್ಬದ ಸಂತೋಷದಲ್ಲಿ ಸಂಭ್ರಮಿಸಿದರು.
ಶಾಲೆಯ ಮುಖ್ಯೋಪಾಧ್ಯಾಯ ಶಂಕರ್ ಎ., ಎಸ್ಡಿಎಂಸಿ ಅಧ್ಯಕ್ಷ ಜನಾರ್ದನ ಸುವರ್ಣ, ವಿದ್ಯಾಬೋಧಿನಿ ಟ್ರಸ್ಟ್ನ ಅಧ್ಯಕ್ಷ ರಘು ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ರಾಜೀವ ಎಸ್. ಕೊಳಕೆಬೈಲು ಮೊದಲಾದವರು ಉಪಸ್ಥಿತರಿದ್ದರು. ಆಕರ್ಷಕ ಸುಡುಮದ್ದು ಪ್ರದರ್ಶನ ನಡೆಯಿತು. ಶಾಲಾ ಮಕ್ಕಳು ಹಾಗೂ ವಿವಿಧ ಧರ್ಮಗಳ ನೂರಾರು ಜನರು ಭಾಗವಹಿಸಿ ಪರಸ್ಪರ ದೀಪಾವಳಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ