ವಿಶೇಷ ಕಾರ್ಯಾಚರಣೆ: 20 ವಾಹನಗಳಿಂದ ಟಿಂಟ್ ತೆರವು
Team Udayavani, Nov 14, 2018, 11:17 AM IST
ಮಂಗಳೂರು: ನಗರ ಸಂಚಾರ ಎಸಿಪಿ ಮತ್ತು ಅಧಿಕಾರಿಗಳ ನೇತೃತ್ವದ ತಂಡ ವಿಶೇಷ ಕಾರ್ಯಾಚರಣೆ ನಡೆಸಿ ಸನ್ ಫಿಲ್ಮ್ (ಟಿಂಟ್ ಗ್ಲಾಸ್) ಅಳವಡಿಸಿ ಚಲಾಯಿಸುತ್ತಿದ್ದ ಇಪ್ಪತ್ತು ವಾಹನಗಳಿಂದ ಟಿಂಟ್ ಪೇಪರ್ ತೆರವುಗೊಳಿಸಿದ್ದಾರೆ.
ವಾಹನಗಳ ಗಾಜುಗಳಿಗೆ ಅಳವಡಿಸಿದ್ದ ಟಿಂಟ್ ಪೇಪರ್ ತೆಗೆದು ಹಾಕುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬಳಿಕ ಟಿಂಟ್ ಪೇಪರ್ ಅಳವಡಿಸುವ ಕ್ರಮ ಕಡಿಮೆಯಾಗಿತ್ತು. ಆದರೆ ಕೋರ್ಟ್ ಆದೇಶವಾಗಿ ವರ್ಷ ಕಳೆದ ಬಳಿಕ ಮತ್ತೆ ವಾಹನಗಳಿಗೆ ಟಿಂಟ್ ಅಳವಡಿಸುವುದು ಹೆಚ್ಚುತ್ತಿದೆ. ಇದನ್ನರಿತ ಸಂಚಾರ ಎಸಿಪಿ, ಅಧಿಕಾರಿಗಳು ಹಾಗೂ ಸಿಬಂದಿ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಇಪ್ಪತ್ತು ಕಾರುಗಳಿಗೆ ಅಳವಡಿಸಿದ್ದ ಟಿಂಟ್ನ್ನು ತೆರವು ಮಾಡಿದ್ದಾರೆ.
ಬಿಸಿಲಿನಿಂದ ರಕ್ಷಿಸಿಕೊಳ್ಳಲು ವಾಹನ ಸವಾರರು ಗಾಜುಗಳಿಗೆ ಕಪ್ಪು ಟಿಂಟ್ ಪೇಪರ್ ಹಾಕುತ್ತಾರೆ. ಆದರೆ ಕೆಲವು ದುಷ್ಕರ್ಮಿಗಳು ಅಪಹರಣ, ಅತ್ಯಾಚಾರ, ದರೋಡೆ ಸಹಿತ ಹಲವು ಅಪರಾಧ ಚಟುವಟಿಕೆಗಳಿಗೆ ಪೂರಕವಾಗಿ ಈ ರೀತಿಯ ಗಾಜನ್ನು ಬಳಕೆ ಮಾಡುತ್ತಾರೆ. ಈ ನಿಟ್ಟಿನಲ್ಲಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂಕೋರ್ಟ್ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದರ ಹಿನ್ನೆಲೆಯಲ್ಲಿ ವಾಹನಗಳ ಗ್ಲಾಸ್ಗಳಿಗೆ ಟಿಂಟ್ ಬಳಸದಂತೆ 2012ರ ಎಪ್ರಿಲ್ 27ರಂದು ಆದೇಶ ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್