ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ಅಮಿತ್‌ ಶಾ


Team Udayavani, Nov 15, 2018, 9:00 AM IST

w-31.jpg

ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಬುಧವಾರ ರಾತ್ರಿ ಮಂಗಳೂರಿಗೆ ಆಗಮಿಸಿದ್ದು ಮಣ್ಣಗುಡ್ಡದ ಸಂಘನಿಕೇತನದಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್‌ನ ದಕ್ಷಿಣ ಭಾರತದ ಬೈಠಕ್‌ನಲ್ಲಿ ಭಾಗವಹಿಸಿದರು. ಸಂಜೆ 5.45ಕ್ಕೆ ಆಗಮಿಸಬೇಕಿದ್ದ ವಿಶೇಷ ವಿಮಾನ 8.30ಕ್ಕೆ ಮಂಗಳೂರು ತಲುಪಿದ್ದು, ಸಂಸದ ನಳಿನ್‌ ಕುಮಾರ್‌ ಕಟೀಲು, ಬಿಜೆಪಿ ಶಾಸಕರು ಹಾಗೂ ಪ್ರಮುಖರು ಸ್ವಾಗತಿಸಿದರು. ಅಲ್ಲಿಂದ ನೇರವಾಗಿ ಸಂಘನಿಕೇತನಕ್ಕೆ ಆಗಮಿಸಿದ ಶಾ ಅವರು ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ಪಾಲ್ಗೊಂಡರು. ಬಿಜೆಪಿಯ ರಾಷ್ಟ್ರೀಯ ನಾಯಕರು ಜತೆಗಿದ್ದರು.

ಪೊಲಿಟಿಕಲ್‌ ಪ್ಲ್ಯಾನಿಂಗ್‌
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ರಾಜಕೀಯ ಲೆಕ್ಕಾಚಾರ ಆರಂಭವಾಗಿರುವಾಗಲೇ, ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷರು ಪಾಲ್ಗೊಂಡು ರಾಜಕೀಯ ಮಾರ್ಗದರ್ಶನ ಪಡೆದುಕೊಂಡರು. ಯಾವ ವಿಚಾರ ಧಾರೆಯ ಮೂಲಕ ಮುಂದಿನ ಚುನಾ ವಣೆ ಎದುರಿಸಬೇಕು ಎಂಬ ಬಗ್ಗೆ ಹಾಗೂ ಬಿಜೆಪಿಯ ರಾಜಕೀಯದ ಮುಂದಿನ ಕಾರ್ಯತಂತ್ರಗಳು ಹೇಗಿರಬೇಕು ಎಂಬ ಕುರಿತು ಬೈಠಕ್‌ನಲ್ಲಿ ಅಮಿತ್‌ ಶಾಗೆ ಆರ್‌ಎಸ್‌ಎಸ್‌ ಪ್ರಮುಖರು ಮಾರ್ಗದರ್ಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಸಮಾರೋಪ
ಆರ್‌ಎಸ್‌ಎಸ್‌ ಸಂಘಟನೆ ಕಾರ್ಯಯೋಜನೆಗಳ ಬಗ್ಗೆ ಚರ್ಚೆಗೆ ಪ್ರಮುಖವಾಗಿರುವ ದಕ್ಷಿಣ ಭಾರತದ ಬೈಠಕ್‌ ನ. 10ರಿಂದ ಆರಂಭಗೊಂಡಿದ್ದು, ಗುರುವಾರ ಸಮಾರೋಪಗೊಳ್ಳಲಿದೆ. ಆರ್‌ಎಸ್‌ಎಸ್‌ ಕಾರ್ಯವಾಹ ಭಯ್ನಾಜಿ (ಸುರೇಶ್‌ ಜೋಶಿ) ಮುಂತಾದ ಪ್ರಮುಖ ನಾಯಕರು ಇಲ್ಲಿ ಪಾಲ್ಗೊಂಡಿದ್ದಾರೆ. ಉತ್ತರ ಭಾರತದ ಬೈಠಕ್‌ ವಾರಾಣಸಿಯಲ್ಲಿ ಆಯೋಜನೆಗೊಂಡಿದೆ.

ಶಬರಿಮಲೆ ವಿಚಾರ ಚರ್ಚೆ
ಬುಧವಾರ ಬೆಳಗ್ಗೆ 6ರಿಂದ ಬೈಠಕ್‌ ಆರಂಭಗೊಂಡಿದ್ದು, ರಾತ್ರಿಯವರೆಗೂ ಮುಂದುವರಿದಿತ್ತು. ಶಬರಿಮಲೆ ಅಯ್ಯಪ್ಪ ಕ್ಷೇತ್ರಕ್ಕೆ ಎಲ್ಲ ವಯೋಮಾನದ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಬೈಠಕ್‌ನಲ್ಲಿ ವಿಶೇಷ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮೊದಲು ನಡೆದ ಬೈಠಕ್‌ನಲ್ಲಿ ಡಾ| ಪ್ರಭಾಕರ ಭಟ್‌ ಕಲ್ಲಡ್ಕ, ನಳಿನ್‌ ಕುಮಾರ್‌ ಕಟೀಲು, ಶಾಸಕ ಸಿ.ಟಿ. ರವಿ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಪ್ರಮುಖರಾದ ಅರುಣ್‌ ಕುಮಾರ್‌ ಮೊದಲಾದವರು ಭಾಗವಹಿಸಿದ್ದರು.

19 ಪ್ರಾಂತದ 300 ಸಂಘ ಪ್ರಮುಖರು
ನ. 10ರಿಂದ ಮಂಗಳೂರಿನ ಸಂಘನಿಕೇತನದಲ್ಲಿ ಆಯೋಜನೆಗೊಂಡಿರುವ ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ದಕ್ಷಿಣ ಭಾರತದ 19 ಪ್ರಾಂತದ ಸುಮಾರು 300 ಸಂಘ ಪ್ರಮುಖರು ಪಾಲ್ಗೊಂಡಿದ್ದರು. ವಿವಿಧ ವಿಷಯಾಧಾರಿತ ವಾಗಿ ಇಲ್ಲಿ ಸಭೆ ನಡೆಯುತ್ತಿದ್ದು, ಸಂಘದ ಪ್ರಮುಖರನ್ನು ಹೊರತುಪಡಿಸಿ ಉಳಿದವರಿಗೆ ಪ್ರವೇಶವಿಲ್ಲ. ಬೆಳಗ್ಗೆ 6 ಗಂಟೆಗೆ ಆರಂಭವಾಗುವ ಬೈಠಕ್‌ ರಾತ್ರಿ 10ರ ವರೆಗೆ ನಡೆಯಿತು. ರಾಜಸ್ಥಾನ, ಮಹಾರಾಷ್ಟ್ರ, ಗುಜರಾತ್‌, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಮಧ್ಯಪ್ರದೇಶ ಸೇರಿದಂತೆ ದಕ್ಷಿಣ ಭಾರತದ ಆರ್‌ಎಸ್‌ಎಸ್‌ ಪ್ರಮುಖ ನೇತಾರರು ಬೈಠಕ್‌ನಲ್ಲಿ ಪಾಲ್ಗೊಂಡಿದ್ದಾರೆ.

ಮಂಗಳೂರಿನಲ್ಲಿ ವಾಸ್ತವ್ಯ
ಸಂಘನಿಕೇತನದಲ್ಲಿ ನಡೆದ ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ಬುಧವಾರ ರಾತ್ರಿ ಭಾಗವಹಿಸಿದ ಅಮಿತ್‌ ಶಾ ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದರು. ಬಿಜೆಪಿ ಪ್ರಮುಖರು ಈ ವೇಳೆ ಉಪಸ್ಥಿತರಿದ್ದು, ಕರಾವಳಿ ಭಾಗದಲ್ಲಿ ಪಕ್ಷ ಬಲವರ್ಧನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ಗುರುವಾರ ಬೆಳಗ್ಗೆ 10ಕ್ಕೆ ಅವರು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ. ಈ ಹಿಂದೆ ಫೆ. 19ರಂದು ದ.ಕ. ಜಿಲ್ಲೆಗೆ ಆಗಮಿಸಿದ ಅಮಿತ್‌ ಶಾ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದರು.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.