ಮಂಗಳೂರು “ಸಿಟಿ ಗ್ಯಾಸ್‌’ಗೆ ಪ್ರಧಾನಿ ನಾಳೆ ಶಂಕುಸ್ಥಾಪನೆ


Team Udayavani, Nov 21, 2018, 11:49 AM IST

city-gas.png

ಮಂಗಳೂರು: ಮಂಗಳೂರು ನಗರದ ಪ್ರತಿ ಮನೆಗೆ ಅಡುಗೆ ಅನಿಲ ಸರಬರಾಜು ಮಾಡುವ ವಿನೂತನ ಯೋಜನೆ “ಸಿಟಿ ಗ್ಯಾಸ್‌’ಗೆ ಪ್ರಧಾನಿ ನರೇಂದ್ರ ಮೋದಿ ಅವರು ನ. 22ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

ಗೇಲ್‌ ಗ್ಯಾಸ್‌ ಲಿ. ವತಿಯಿಂದ ಮಂಗಳೂರು ಸಹಿತ ದೇಶದ 129 ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳಲಿರುವ “ಸಿಟಿ ಗ್ಯಾಸ್‌’ ಅಡುಗೆ ಅನಿಲ ಪೂರೈಕೆ ಯೋಜನೆಗೆ ಪ್ರಧಾನಿ ಮೋದಿ ಅವರು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ಗುರುವಾರ ಸಂಜೆ 4 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮ ಯೋಜನೆ ಕಾರ್ಯರೂಪಕ್ಕೆ ಬರುವ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿವೆ. ಜತೆಗೆ ದೇಶದ 123 ಜಿಲ್ಲೆಗಳಲ್ಲಿ ಸಿಟಿ ಗ್ಯಾಸ್‌ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ಬಿಡ್ಡಿಂಗ್‌ಗೆ ಚಾಲನೆ ನೀಡುವ ಕಾರ್ಯಕ್ರಮ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದ ಪುರಭವನದಲ್ಲಿ ಪ್ರತ್ಯೇಕ ಸಮಾರಂಭ ಆಯೋಜಿಸಲಾಗಿದೆ.

ನ.22ರಂದು ಮಧ್ಯಾಹ್ನ 2.30ಕ್ಕೆ ನಡೆಯುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸದಾನಂದಗೌಡ, ಸಂಸದ ನಳಿನ್‌, ಶಾಸಕರಾದ ವೇದವ್ಯಾಸ ಕಾಮತ್‌, ಡಾ|ವೈ. ಭರತ್‌ ಶೆಟ್ಟಿ, ಮಂಗಳೂರು ಮನಪಾ ಮೇಯರ್‌ ಭಾಸ್ಕರ್‌ ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸ್ಥಳೀಯ ಸಭಾ ಕಾರ್ಯಕ್ರಮ ನಡೆದ ಬಳಿಕ ಪ್ರಧಾನಿ ಶಂಕುಸ್ಥಾಪನ ಕಾರ್ಯಕ್ರಮದ ನೇರ ಪ್ರಸಾರಕ್ಕೂ ಪುರಭವನದಲ್ಲಿ ವ್ಯವಸ್ಥೆ ಮಾಡಲಾಗಿದೆ. 

ಮಂಗಳೂರಿನಲ್ಲಿ ಸಿಟಿ ಗ್ಯಾಸ್‌ 
ಭಾರತ ಸರಕಾರದ ಅಧೀನಕ್ಕೆ ಒಳಪಟ್ಟ ಗೇಲ್‌ (ಇಂಡಿಯಾ) ಲಿ. ವತಿಯಿಂದ ಕೊಚ್ಚಿಯಿಂದ ಮಂಗಳೂರು ವರೆಗೆ ಗ್ಯಾಸ್‌ ಪೈಪ್‌ಲೈನ್‌ ಅಳವಡಿಕೆ ಕಾರ್ಯ ಈಗಾಗಲೇ ಮುಗಿದಿದೆ. ಮಂಗಳೂರಿನ ಎಂಸಿಎಫ್‌ಗೆ ನೈಸರ್ಗಿಕ ಅನಿಲ ಪೂರೈಸಲು ಪೈಪ್‌ಲೈನ್‌ ಸಾಗಿ ಬರಲಿದ್ದು, ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ಸುಮಾರು 16 ಹಳ್ಳಿಗಳ ವ್ಯಾಪ್ತಿಯಲ್ಲಿ 35 ಕಿ.ಮೀ. ಉದ್ದದಲ್ಲಿ ಸಾಗಲಿದೆ. ಇದೇ ಅನಿಲವನ್ನು ಮಂಗಳೂರಿನ ಜನರಿಗೂ ಕೊಳವೆ ಮೂಲಕ ನೀಡಲು ಯೋಜನೆ ರೂಪಿಸಲಾಗುತ್ತಿದೆ. ಪೈಪ್‌ಲೈನ್‌ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. 

ಮಂಗಳೂರಿನಲ್ಲಿ ಮನೆ ಮನೆಗೆ ಗ್ಯಾಸ್‌ ವಿತರಣೆ ಗುರಿ ಇರಿಸಲಾಗಿದ್ದು, ಮನಪಾ ಒಪ್ಪಿಗೆಯಲ್ಲಿ ನೀರಿನ ಪೈಪ್‌ಲೈನ್‌, ಒಳಚರಂಡಿ ಲೈನ್‌ ಗಮನಿಸಿ, ಮೆಸ್ಕಾಂ, ಬಿಎಸ್‌ಎನ್‌ಎಲ್‌ ಅನುಮತಿ ಪಡೆದು ಗ್ಯಾಸ್‌ ಪೈಪ್‌ಲೈನ್‌ ಅಳವಡಿಕೆ ನಡೆಯಲಿದೆ. ಅಲ್ಲದೆ ನಗರದಲ್ಲಿ ಅಲ್ಲಲ್ಲಿ ಸಿಟಿ ಗ್ಯಾಸ್‌ ಪೂರೈಕೆ ಬಂಕ್‌ಗಳು ಕೂಡ ತಲೆಯೆತ್ತಲಿವೆ. 

ಮೊದಲ ಹಂತ; ಸುರತ್ಕಲ್‌ ಭಾಗದಲ್ಲಿ ಅನುಷ್ಠಾನ
ಪ್ರಾಯೋಗಿಕ ಯೋಜನೆ ಅನ್ವಯ 200ರಿಂದ 500ರಷ್ಟು ಮನೆ-ಉದ್ಯಮಕ್ಕೆ ನಳ್ಳಿ ಮೂಲಕ ಗ್ಯಾಸ್‌ ವಿತರಿಸುವ ಯೋಜನೆ ಇರಿಸಲಾಗಿದೆ. ಸುರತ್ಕಲ್‌ ಭಾಗದಲ್ಲಿರುವ ಎಂಸಿಎಫ್‌ ಅಥವಾ ಎಂಆರ್‌ಪಿಎಲ್‌ ಟೌನ್‌ಶಿಪ್‌ನ ವ್ಯಾಪ್ತಿಯಲ್ಲಿ ಪೈಪ್‌ಲೈನ್‌ ಅಳವಡಿಸಲು ಉದ್ದೇಶಿಸಲಾಗಿದೆ. ಕತಾರ್‌ನಿಂದ ಎಲ್‌ಎನ್‌ಜಿಯು ಹಡಗಿನ ಮೂಲಕ ಗೇಲ್‌ನ ಕೊಚ್ಚಿನ್‌ ಟರ್ಮಿನಲ್‌ಗೆ ಬರುತ್ತಿದೆ. ಇದನ್ನು “ಎಲ್‌ಪಿಜಿ ಬುಲೆಟ್‌’ ಇದ್ದ ಹಾಗೆ. “ಎಲ್‌ಎನ್‌ಜಿ ಬುಲೆಟ್‌’ ಮೂಲಕ ಹಡಗಿನಲ್ಲಿ ಮಂಗಳೂರಿಗೆ ತಂದರೆ ಸುಮಾರು 1,000 ಸಂಪರ್ಕಕ್ಕೆ ಒಂದು ತಿಂಗಳಿಗೆ ಬರಲಿದೆ. ಅಥವಾ ರಸ್ತೆಯ ಮೂಲಕ ಎಲ್‌ಪಿಜಿ ಟ್ಯಾಂಕರ್‌ನಂತೆ “ಕ್ರಯೋಜನಿಕ್‌ ಟ್ಯಾಂಕರ್‌’ನಲ್ಲಿ ಮಂಗಳೂರಿಗೆ ತರುವ ಸಾಧ್ಯತೆಯೂ ಇದೆ. ಹೀಗೆ ಮಂಗಳೂರಿಗೆ ಬರುವ ಎಲ್‌ಎನ್‌ಜಿಯನ್ನು ಗ್ಯಾಸ್‌ ಆಗಿ ಪರಿವರ್ತಿಸಲು ಕೊಚ್ಚಿ ಟರ್ಮಿನಲ್‌ ರೀತಿ ಪುಟ್ಟ ಟರ್ಮಿನಲ್‌ ಕೂಡ ಮಂಗಳೂರಿನಲ್ಲಿ ನಿರ್ಮಾಣವಾಗಲಿದೆ. ಅಲ್ಲಿಂದ ವಾಹನಗಳ ಪೂರೈಕೆ (ಸಿಎನ್‌ಜಿ), ಗೃಹ ಬಳಕೆ (ಪಿಎನ್‌ಜಿ) ವಾಣಿಜ್ಯ ಬಳಕೆ ಹಾಗೂ ಕೈಗಾರಿಕೆಗಳ ಬಳಕೆ ಎಂಬುದಾಗಿ ಬೇರ್ಪಡಿಸಿ ಗೇಲ್‌ ಸಂಸ್ಥೆಯು ಅನಿಲ ಪೂರೈಕೆ ಮಾಡಲಿದೆ.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.