ಕರಾವಳಿ ಅಪರಾಧ ಸುದ್ದಿಗಳು 


Team Udayavani, Feb 9, 2019, 12:11 AM IST

crime.jpg

ಬಾರೆಬೈಲ್‌: ವಿವಾಹಿತೆ ನಾಪತ್ತೆ

ಮಂಗಳೂರು: ನಗರದ ಬಾರೆಬೈಲಿನ ವಿವಾಹಿತ ಮಹಿಳೆ ರಾಧಿಕಾ ಯಾನೆ ಅಕ್ಷತಾ (21) ಅವರು ಫೆ. 6ರಂದು ನಾಪತ್ತೆಯಾಗಿದ್ದಾರೆ.

ಗಂಡ ಕೂಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ರಾಧಿಕಾ ಮನೆಯಲ್ಲಿದ್ದು, 11.30ರ ವೇಳೆಗೆ ಮಾವ ನಲ್ಲಿ (ಗಂಡನ ತಂದೆ) ಇಸ್ತ್ರಿ ಅಂಗಡಿಗೆಂದು ಹೇಳಿ ಹೋಗಿದ್ದು, ವಾಪಸ್‌ ಬಂದಿಲ್ಲ. ಮರಾಠಿ ಮತ್ತು ಕನ್ನಡ ಮಾತನಾಡುವ ಈಕೆಯ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಕದ್ರಿ ಪೊಲೀಸರಿಗೆ ತಿಳಿಸಲು ಕೋರಲಾಗಿದೆ.

ಉಡುಪಿ: ಬಸ್ಸಿನಿಂದ ಬಿದ್ದು ಮಹಿಳೆ ಗಂಭೀರ
ಉಡುಪಿ:
ಪ್ರಯಾಣಿಕರು ಇಳಿಯುವ ಮೊದಲೇ ಚಾಲಕ ಬಸ್ಸನ್ನು ಮುಂದಕ್ಕೆ ಚಲಾಯಿಸಿದ ಪರಿಣಾಮ ಮಹಿಳೆಯೊಬ್ಬರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಫೆ.7ರಂದು ಉಡುಪಿ ಎಂಜಿಎಂ ಕಾಲೇಜಿನ ಲೇಡಿಸ್‌ ಹಾಸ್ಟೆಲ್‌ ಬಳಿ ಸಂಭವಿಸಿದೆ.

ಮಣಿಪಾಲದಿಂದ ಉಡುಪಿ ಮಾರ್ಗವಾಗಿ ಚಲಿಸುತ್ತಿದ್ದ ಬಸ್ಸಿನಲ್ಲಿ ಘಟನೆ ಸಂಭವಿಸಿದ್ದು, ತಲೆಗೆ ಗಾಯವಾಗಿರುವ ತಾರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಸಂತೋಷನ ವಿರುದ್ಧ ಪ್ರಕರಣ ದಾಖಲಾಗಿದೆ.

ವೇಶ್ಯಾವಾಟಿಕೆ: ಸೆರೆ
ಮಂಗಳೂರು:
ನಗರದ ಓಲ್ಡ್ ಕೆಂಟ್ ರಸ್ತೆಯ ಲಾಡ್ಜ್ ನಲ್ಲಿ ವೇಶ್ಯವಾಟಿಕೆ ಆರೋಪ ದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಹೊಸಬಾಳೆ ಗ್ರಾಮದ ಗುರುನಾಥ (39)ನನ್ನು ಸಿಸಿಬಿ ಮತ್ತು ಪಾಂಡೇ ಶ್ವರ ಪೊಲೀಸರು ಬಂಧಿಸಿದ್ದಾರೆ. ವಸತಿ ಗೃಹದ ವ್ಯವಹಾರ ನೋಡಿಕೊಳ್ಳುತ್ತಿದ್ದ ಜಗನ್ನಾಥ ಪರಾರಿಯಾಗಿದ್ದಾನೆ.

ಬೈಕ್‌ ಪಲ್ಟಿ: ಸಾವು
ಕುಂದಾಪುರ:
ಕರ್ಕುಂಜೆ ಗ್ರಾಮದ ಹಿಲ್ಕೂಡಿನಲ್ಲಿ ನಾಯಿ ಅಡ್ಡ ಬಂದ ಕಾರಣದಿಂದ ಬೈಕಿನಿಂದ ಬಿದ್ದು ಗಾಯಗೊಂಡಿದ್ದ ಹರಿಶ್ಚಂದ್ರ ಶೆಟ್ಟಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅವರು ಜ.14ರಂದು ಅಪಘಾತ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಹರಿಶ್ಚಂದ್ರ ಶೆಟ್ಟಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮಣಿಪಾಲದ ಆಸ್ಪತ್ರೆಯಲ್ಲಿ ಫೆ.7ರಂದು ಮೃತ ಪಟ್ಟಿದ್ದಾರೆ.

ಬೈಕ್‌ ಸ್ಕಿಡ್‌: ಯುವಕ ಸಾವು
ಕುಂದಾಪುರ:
ಕೋಟೇಶ್ವರ ಗ್ರಾಮದ ಅರಳುಗುಡ್ಡೆ ರಸ್ತೆಯ ಶ್ರೀ ಹೈಗುಳಿ ಬೊಬ್ಬರ್ಯ ದೈವಸ್ಥಾನದ ತಿರುವಿನಲ್ಲಿ ಗುರುವಾರ ಬೈಕ್‌ ಸ್ಕಿಡ್‌ ಆಗಿ ಸಾಲಿಗ್ರಾಮ ಸಮೀಪದ ಕಾರ್ಕಡ ಗ್ರಾಮದ ಕಾಳ ಪೂಜಾರಿ ಅವರ ಪುತ್ರ ಸತೀಶ್‌ (36)ಮೃತಪಟ್ಟಿದ್ದಾರೆ.

ಅವರು ಬೈಕಿನಲ್ಲಿ ಕೋಟೇಶ್ವರ ಕಡೆಯಿಂದ ಹಳೆ ಅಳಿವೆ ಕಡೆಗೆ ಹೋಗುತ್ತಿದ್ದಾಗ ಸ್ಕಿಡ್‌ ಆಗಿ ರಸ್ತೆಗೆ ಬಿದ್ದರು. ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿದ್ದ ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷಿಸಿದ ವೈದ್ಯರು ಸತೀಶ್‌ ಮೃತಪಟ್ಟಿರುವುದಾಗಿ ಘೋಷಿಸಿದರು.

ಗಾರೆ ಕಾರ್ಮಿಕರಾಗಿದ್ದ ಇವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಪ್ರಯಾಣದ ವೇಳೆ ಸ್ಕಿಡ್‌ ಆಗಲು ಕಾರಣ ಎಂದು ಹೇಳಲಾಗುತ್ತಿದೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಹಲವರಿಗೆ ಹುಚ್ಚು ನಾಯಿ ಕಡಿತ
ಕಾರ್ಕಳ
: ನಗರದ ಅನಂತಶಯನ ವಠಾರದಲ್ಲಿ ಫೆ. 7ರಂದು ಹುಚ್ಚು ನಾಯಿಯೊಂದು ಮಗು ಸಹಿತ 8 ಮಂದಿಗೆ ಕಚ್ಚಿ ಗಾಯಗೊಳಿಸಿದೆ. ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.