ಯುವಕನನ್ನು ಅಪಹರಿಸಿ ಮರಣಾಂತಿಕ ಹಲ್ಲೆ; ಹಣ ಲೂಟಿ
Team Udayavani, Dec 7, 2018, 11:18 AM IST
ಮಂಗಳೂರು: ಐವರ ಗುಂಪೊಂದು ಫಳ್ನೀರ್ ನಿವಾಸಿ ಶಿಮಾಕ್ ಹಸನ್(22) ಅವರನ್ನು ಅಪಹರಿಸಿ, ಸಸಿಹಿತ್ಲು ಸಮೀಪ ಮರಣಾಂತಿಕ ಹಲ್ಲೆ ನಡೆಸಿ, ಹಣ ಲೂಟಿ ಮಾಡಿದ ಘಟನೆ ಡಿ. 5ರಂದು ಸಂಭವಿಸಿದೆ.
ಗೌತಮ್, ಲಾಯ್ ವೇಗಸ್, ಗೌತಮ್, ಅಂಕಿತ್, ಆದಿತ್ಯ ವಾಲ್ಕೆ ಹಲ್ಲೆ ಆರೋಪಿಗಳೆನ್ನಲಾಗಿದೆ. ಶಿಮಾಕ್ ನಗರದ ಕಾಲೇಜೊಂದರಲ್ಲಿ ಬಿಬಿಎಂ ಮಾಡುತ್ತಿದ್ದರು. ಡಿ.5ರಂದು ಸಂಜೆ 5 ಗಂಟೆಗೆ ಅತ್ತಾವರದ ಮಳಿಗೆಯೊಂದರಲ್ಲಿ ಸ್ನೇಹಿತರಾದ ನೌಶಾದ್, ಸೌರವ್ ಜತೆ ಕಾಫಿ ಕುಡಿಯುತ್ತಿದ್ದರು. ಆಗ ಬೈಕಿನಲ್ಲಿ ಬಂದ ಶಿಮಾಕ್ನ ಕ್ಲಾಸ್ಮೇಟ್ ಎನ್ನಲಾದ ಅಂಕಿತ್, ಸ್ವಲ್ಪ ಕೆಲಸವಿದೆ ಬಾ ಎಂದು ಕರೆದೊಯ್ದಿದ್ದ. ಅರ್ಧ ಗಂಟೆ ಕಳೆದರೂ ಶಿಮಾಕ್ ವಾಪಸಾಗದ ಕಾರಣ ಸ್ನೇಹಿತರು ಮೊಬೈಲ್ನಲ್ಲಿ ಸಂಪರ್ಕಿಸಿದ್ದರು. ಮೊದಲು ಕರೆಯನ್ನು ಸ್ವೀಕರಿಸಿರ ಲಿಲ್ಲ. ಬಳಿಕ ಮತ್ತೂಂದು ಮೊಬೈಲ್ನಿಂದ ಪ್ರಯತ್ನಿಸಿದಾಗ ಕರೆ ಸ್ವೀಕರಿಸಿ, “ಶಿಮಾಕ್ನನ್ನು ಮೂಡುಬಿದಿರೆಗೆ ಕರೆದೊಯ್ಯುತ್ತಿದ್ದೇವೆ’ ಎಂದರು.
ಬಳಿಕ ರಾತ್ರಿ ವೇಳೆ ಕರೆ ಮಾಡಿ, “ನಮಗೆ 50,000 ರೂ. ಕೊಡಬೇಕು. ಇಲ್ಲದಿದ್ದರೆ ಶಿಮಾಕ್ನನ್ನು ಬಿಡುವುದಿಲ್ಲ’ ಎಂದಿದ್ದರು. ಕೆಲವು ಗಂಟೆಗಳ ಬಳಿಕ ಕರೆ ಮಾಡಿ ಆತನನ್ನು ಕೊಲ್ಲುವುದಾಗಿ ಬೆದರಿಸಿದ್ದರು. ಬಳಿಕ ನಗರದ ಕೆಪಿಟಿ ಬಳಿ ದುಷ್ಕರ್ಮಿಗಳಿಗೆ ಹಣ ತಲುಪಿಸಿದ ಕೂಡಲೇ ಶಿಮಾಕ್ನನ್ನು ಸ್ವಿಫ್ಟ್ ಕಾರಿನಿಂದ ತಳ್ಳಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳು ಶಿಮಾಕ್ನಿಗೆ ಕಬ್ಬಿಣದ ರಾಡ್ನಿಂದ ತಲೆ, ಮುಖ ಮತ್ತು ಬೆನ್ನಿಗೆ ಹಲ್ಲೆ ನಡೆಸಿದ್ದಾರೆ ಹಾಗೂ ಸಿಗರೇಟ್ನಿಂದ ದೇಹದ ಮೇಲೆ ಅಲ್ಲಲ್ಲಿ ಸುಟ್ಟಿದ್ದಾರೆ. ಅವರ ಬೆನ್ನಿನ ಭಾಗ ಜರ್ಝರಿತಗೊಂಡಿದೆ. ಗಾಯಾಳನ್ನು ವೆನ್ಲ್ಯಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಪಾಂಡೇಶ್ವರ ಪೊಲೀಸರು ಬಲೆ ಬೀಸಿದ್ದಾರೆ. ಅಪಹರಣಕ್ಕೆ ಬಳಸಿದ ಸ್ವಿಫ್ಟ್ ಕಾರು ಹಾಗೂ ಅದರಲ್ಲಿದ್ದ ಕಬ್ಬಿಣದ ರಾಡ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ