ಹೈಟೆಕ್‌ ಸೌಂದರ್ಯ ತಾಣವಾಗಲಿದೆ ಕೊಟ್ಟಾರ ಚೌಕಿ ಫ್ಲೈಓವರ್‌!


Team Udayavani, Dec 7, 2018, 11:26 AM IST

7-december-3.gif

ಮಹಾನಗರ: ಮಂಗಳೂರು- ಉಡುಪಿ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರಚೌಕಿಯ ಫ್ಲೈಓವರ್‌ ಕೆಲವೇ ದಿನದಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ತಾಣವಾಗಿ ಬದಲಾವಣೆಗೊಂಡು ಸುಂದರಗೊಳ್ಳಲಿದೆ.

ಸ್ವಚ್ಛ ತೆಯ ಮೂಲಕ ನಗರ ವ್ಯಾಪ್ತಿಯಲ್ಲಿ ಮಹಾನ್‌ ಕಾರ್ಯ ನಡೆಸುತ್ತಿರುವ ಶ್ರೀ ರಾಮಕೃಷ್ಣ ಮಠದ ನೇತೃತ್ವದಲ್ಲಿ ದಾನಿಗಳ ನೆರವಿನೊಂದಿಗೆ ಕೊಟ್ಟಾರಚೌಕಿಯ ಪ್ಲೈಓವರ್‌ ಸುಂದರ ಸ್ವರೂಪಕ್ಕೆ ಬದಲಾವಣೆಯಾಗಲಿದೆ. ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅನುಮತಿ ಪಡೆಯುವ ಪ್ರಕ್ರಿಯೆ ಸದ್ಯ ಪ್ರಗತಿಯಲ್ಲಿದೆ.

ಕೊಟ್ಟಾರಚೌಕಿ ಪ್ಲೈಓವರ್‌ನ ಕೆಳಭಾಗದಲ್ಲಿ ಈಗ ವಾಹನಗಳು, ತಳ್ಳುಗಾಡಿಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಲಾಗುತ್ತಿದೆ. ಸ್ವಚ್ಚತೆಗೆ ಆದ್ಯತೆ ಇಲ್ಲಿ ಸಿಗುತ್ತಿಲ್ಲ. ಹೀಗಾಗಿ ಮೇಲ್ಸೇತುವೆಯ ಕೆಳಭಾಗದ ನಿರ್ವಹಣೆ ಇಲ್ಲದೆ ಅವ್ಯವಸ್ಥೆ ಉಂಟಾಗಿತ್ತು. ಇದಕ್ಕೆ ಮುಕ್ತಿ ನೀಡಲು ಹಾಗೂ ಬೇರೆ ಬೇರೆ ಭಾಗದ ಪ್ರಯಾಣಿಕರು ಕೊಟ್ಟಾರಚೌಕಿ ಫ್ಲೈ ಓವರ್‌ ಕೆಳಭಾಗದ ರಸ್ತೆಯಲ್ಲಿ ಸಂಚರಿಸುವ ಹಿನ್ನೆಲೆಯಲ್ಲಿ ಪ್ಲೈಓವರ್‌ ಗೆ ಹೊಸ ರೂಪ ನೀಡಲು ರಾಮಕೃಷ್ಣ ಮಿಷನ್‌ ನಿರ್ಧರಿಸಿದೆ. ಈಗಾಗಲೇ ನಗರದ ವಿವಿಧೆಡೆ ಇಂತಹ ಹಲವು ರೀತಿಯ ಸುಂದರೀಕರಣ ಕೆಲಸ ಮಾಡಿರುವ ಮಿಷನ್‌ ಕೊಟ್ಟಾರಚೌಕಿ ಫ್ಲೈಓವರ್‌ ಕೆಳಭಾಗವನ್ನು ಕೂಡ ಆಕರ್ಷಣೀಯವಾಗಿಸಲು ಉದ್ದೇಶಿಸಿದೆ.

ಗಾರ್ಡನ್‌ ರೂಪ
ಇಲ್ಲಿನ ಪ್ಲೈಓವರ್‌ನ ತಳಭಾಗದ ಸುಮಾರು 500-600 ಮೀಟರ್‌ ವ್ಯಾಪ್ತಿಯಲ್ಲಿ ಇಂಟರ್‌ಲಾಕ್‌ ಅಳವಡಿಸಲಾಗುತ್ತದೆ. ನಿಗದಿತ ಜಾಗದಲ್ಲಿ ಹೂವಿನ ಗಿಡಗಳೊಂದಿಗೆ ಅಲಂಕಾರ ಹಾಗೂ ಗಾರ್ಡನ್‌ ರೂಪದಲ್ಲಿ ಸುಂದರೀಕರಣಕ್ಕೆ ಒತ್ತು ನೀಡಲಾಗುತ್ತದೆ. ಕುಳಿತುಕೊಳ್ಳಲು ಅನುವಾಗುವಂತೆ ಮನ ಸೆಳೆಯುವ ಶೈಲಿಯ ಬೆಂಚುಗಳನ್ನು ಇಡಲಾಗುತ್ತದೆ. ಎಲ್ಲೆಂದರಲ್ಲಿ ಕಾರು, ರಿಕ್ಷಾ, ಬೈಕ್‌ ಪಾರ್ಕ್‌ಗೆ ಮುಂದೆ ಅವಕಾಶವಿರುವುದಿಲ್ಲ.  

ಬದಲಾಗಿ, ಒಂದು ಸ್ಲ್ಯಾಬ್ ನ ಅಡಿಯಲ್ಲಿ ಬೈಕ್‌, ಇನ್ನೊಂದರಲ್ಲಿ ಕಾರು ಹಾಗೂ ಮತ್ತೊಂದರಲ್ಲಿ ರಿಕ್ಷಾ ಪಾರ್ಕಿಂಗ್‌ ಗೆ ಅವಕಾಶವಿರುತ್ತದೆ. ಪ್ರತೀ  ಸ್ಲ್ಯಾಬ್ ನ ಗೋಡೆಗಳಲ್ಲಿ ದೇಶದ ಸಂಸ್ಕೃತಿ ಸಾರು ಚಿತ್ರಗಳನ್ನು ಬರೆಯಲಾಗುತ್ತದೆ. ಇದು ವಾಹನದಲ್ಲಿ ತೆರಳುವ ಪ್ರಯಾಣಿಕರಿಗೆ ಸ್ಪಷ್ಟವಾಗಿ ಕಾಣುವ ರೀತಿಯಲ್ಲಿರುತ್ತದೆ. ಇನ್ನು ಬೆಳಕಿನ ವ್ಯವಸ್ಥೆಯನ್ನು ಕೂಡ ಆಕರ್ಷಕವಾಗಿ ಇಲ್ಲಿಗೆ ಮಾಡಲಾಗುತ್ತದೆ. ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ನಡೆಸುವ ಬಗ್ಗೆ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.

ಸುರತ್ಕಲ್‌/ಕೂಳೂರು ಫ್ಲೈ ಓವರ್‌ ಬ್ಯೂಟಿಫುಲ್‌!
ಕಳೆದ ವರ್ಷ ವಿವಿಧ ಸಮಾಜಮುಖಿ ಸಂಘಟನೆಗಳ ನೆರವಿನೊಂದಿಗೆ ಸುರತ್ಕಲ್‌ ಮೇಲ್ಸೇತುವೆಯ ಕೆಳಭಾಗವನ್ನು ಸುದರಿಕರಣಗೊಳಿಸಲಾಗಿದೆ.
ಇಲ್ಲಿನ 6 ಸ್ಲ್ಯಾಬ್ ಗಳ ವ್ಯಾಪ್ತಿಯನ್ನು ಆಕರ್ಷಣೀಯಗೊಳಿಸಲಾಗಿದೆ. ಟೆಂಪೋ, ರಿಕ್ಷಾ, ದ್ವಿಚಕ್ರ ವಾಹನ ನಿಲುಗಡೆಗೆ ಪೂರಕ ಸೌಕರ್ಯ ಇಲ್ಲಿ ಕಲ್ಪಿಸಲಾಗಿದೆ. ಕರಾವಳಿಯ ಹೆಮ್ಮೆಯ ಕ್ರೀಡಾಪಟುಗಳಾದ ಕೆ.ಎಲ್‌. ರಾಹುಲ್‌, ಪೂವಮ್ಮ ಅವರ ಚಿತ್ರವನ್ನು ಬರೆಯಲಾಗಿದ್ದು, ಗಮನಸೆಳೆಯುತ್ತಿವೆ. ಇದೇ ರೀತಿ 2 ವರ್ಷಗಳ ಹಿಂದೆ ಕೂಳೂರು ಮೇಲ್ಸೇತುವೆ ಕೆಳಭಾಗವನ್ನು ಸ್ಥಳೀಯರು ಸುಂದರೀಕರಣಗೊಳಿಸಿದ್ದಾರೆ. ಕರಾವಳಿಯ ಸಂಸ್ಕೃತಿ ಬಿಂಬಿಸುವ ಚಿತ್ರ, ಸ್ವಚ್ಚತೆಯ ಜಾಗೃತಿ ಬರೆಹಗಳು ಅಲ್ಲಿ ಇವೆ. ಇದು ಪ್ರಯಾಣಿಕರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

‘ಜನವರಿಯಲ್ಲಿ ಆರಂಭ’
ಕೊಟ್ಟಾರಚೌಕಿ ಪ್ಲೈಓವರ್‌ನ ಕೆಳಭಾಗವನ್ನು ಅತ್ಯಾಕರ್ಷಕ ರೀತಿಯಲ್ಲಿ ಸುಂದರೀಕರಣಗೊಳಿಸುವ ಸಂಬಂಧ  ರಾಮಕೃಷ್ಣ ಮಿಷನ್‌ ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಪ್ರಸ್ತಾವನೆಯೊಂದನ್ನು ಸಿದ್ಧಗೊಳಿಸಲಾಗಿದೆ. ರಾ.ಹೆ.ಪ್ರಾಧಿಕಾರದಿಂದ ಅನುಮತಿ ಪಡೆದುಕೊಂಡು, ಜನವರಿ ವೇಳೆಯಲ್ಲಿ ಪ್ಲೈಓವರ್‌ ಸುಂದರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.
ಸ್ವಾಮಿ ಏಕಗಮ್ಯಾನಂದಜಿ,
  ಸಂಚಾಲಕರು, ರಾಮಕೃಷ್ಣ ಮಿಷನ್‌-ಸ್ವಚ್ಚತಾ ಅಭಿಯಾನ 

ವಿಶೇಷ ವರದಿ

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.