ಮೀನುಗಾರಿಕೆ ದೋಣಿ ಮುಳುಗಡೆ: 8 ಮಂದಿ ಮೀನುಗಾರರು ಪಾರು
Team Udayavani, Dec 11, 2018, 10:21 AM IST
ಮಂಗಳೂರು: ಇಲ್ಲಿನ ಹಳೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ಬೋಟೊಂದು ಸೋಮವಾರ ಅರಬಿ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಎಲ್ಲ ಎಂಟು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
“ಮದರ್ ಇಂಡಿಯಾ’ ಟ್ರಾಲ್ಬೋಟ್ ಎಂಟು ಮಂದಿ ಮೀನುಗಾರರ ಸಹಿತ ನಾಲ್ಕು ದಿನಗಳ ಹಿಂದೆ ಹಳೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಸೋಮವಾರ ಬೆಳಗ್ಗೆ ಮಂಗಳೂರಿನಿಂದ ಸುಮಾರು 50- 60 ಕಿ.ಮೀ. ದೂರ ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ಅಕ್ಕಪಕ್ಕದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಟ್ರಾಲ್ ಬೋಟ್ಗಳ ಸಹಾಯ ಯಾಚಿಸಿದಾಗ 3- 4 ಬೋಟ್ಗಳು ರಕ್ಷಣೆಗೆ ಬಂದಿದ್ದವು. “ಸಹಾರಾ’ ಹೆಸರಿನ ಬೋಟ್ನಲ್ಲಿದ್ದವರು ಈ ಬೋಟ್ನಲ್ಲಿದ್ದ ಎಲ್ಲ 8 ಮಂದಿಯನ್ನು ರಕ್ಷಿಸಿದರು.
ಬಳಿಕ ಎಂಜಿನ್ ಕೆಟ್ಟುಹೋದ “ಮದರ್ ಇಂಡಿಯಾ’ ಬೋಟನ್ನು ಎಳೆದು ದಡಕ್ಕೆ ತರಲು ಉಳಿದ ಎಲ್ಲಾ ಬೋಟ್ನವರು ಪ್ರಯತ್ನಿಸಿದ್ದರೂ ಪ್ರಯೋಜನವಾಗದೆ ಅದು ಮುಳುಗಡೆಯಾಯಿತು. ಅಪಾಯದಿಂದ ಪಾರಾದ ಮೀನುಗಾರರು ತಮಿಳುನಾಡು ಮೂಲದವರಾಗಿದ್ದು, ಅವರನ್ನು ಸೋಮವಾರ ಸಂಜೆ ಹಳೆ ಬಂದರು ಧಕ್ಕೆಗೆ ಕರೆ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ