ಕದ್ರಿ ಪಾರ್ಕ್‌ನಲ್ಲಿ  ಉಚಿತ ಓಪನ್‌ ಜಿಮ್‌


Team Udayavani, Dec 16, 2018, 10:15 AM IST

16-december-1gif2.gif

ಮಹಾನಗರ : ಆಕರ್ಷಕ ಮೈಕಟ್ಟು ಹೊಂದುವುದಕ್ಕಾಗಿ ಸಾವಿರಾರು ರೂ. ಖರ್ಚು ಮಾಡಿ ಜಿಮ್‌ಗೆ ಹೋಗಬೇಕಾದ ಅಗತ್ಯವಿಲ್ಲ. ಇನ್ನು ಮುಂದೆ ಹಸುರಿನ ನಡುವೆ ದೇಹ ಮತ್ತು ಮನಸ್ಸಿಗೆ ವ್ಯಾಯಾಮ ಸಿಗಲಿದೆ. ಏಕೆಂದರೆ, ನಗರದ ಕದ್ರಿಪಾರ್ಕ್‌ನಲ್ಲಿ ಉಚಿತವಾಗಿ ಜಿಮ್‌ ಸೌಲಭ್ಯ ಲಭ್ಯವಾಗಲಿದೆ.

ಈ ತಿಂಗಳಾಂತ್ಯಕ್ಕೇ ಉಚಿತ ಜಿಮ್‌ ಸೌಲಭ್ಯ ಕದ್ರಿ ಪಾರ್ಕ್‌ನಲ್ಲಿ ದೊರೆ ಯಲಿದೆ. ಪಾರ್ಕ್‌ಗೆ ವಾಕಿಂಗ್‌ಗೆ ಆಗಮಿಸುವ ಮಂದಿಗೆ ವಾಕಿಂಗ್‌ ಜತೆಗೆ ವ್ಯಾಯಾಮವನ್ನೂ ಒದಗಿಸಿಕೊಡುವುದು ಇದರ ಉದ್ದೇಶ. ಮಂಗಳೂರಿನ ಅತಿ ದೊಡ್ಡ ಮತ್ತು ಪ್ರವಾಸಿತಾಣವಾಗಿ ಮುಂಚೂಣಿಯಲ್ಲಿರುವ ಕದ್ರಿ ಪಾರ್ಕ್‌ ನಲ್ಲಿ ಬೆಳಗ್ಗೆ ಮತ್ತು ಸಂಜೆಯ ಹೊತ್ತಿನಲ್ಲಿ ನೂರಾರು ಮಂದಿ ವಾಕಿಂಗ್‌ಗಾಗಿ ಆಗಮಿಸುತ್ತಾರೆ.

ಹೀಗೆ ಆಗಮಿಸುವ ಸಾರ್ವಜನಿಕರಿಗೆ ಪಾರ್ಕ್‌ನಲ್ಲಿ ಜಿಮ್‌ ಸೌಲಭ್ಯ ಕಲ್ಪಿಸಿಕೊಡಬೇಕೆನ್ನುವ ನಿಟ್ಟಿನಲ್ಲಿ ಪಾಲಿಕೆ ಕ್ರಿಯಾಯೋಜನೆ ರೂಪಿಸಿದ್ದು, ಜಿಮ್‌ ನಿರ್ಮಾಣದ ಕೆಲಸಗಳೂ ಈಗಾಗಲೇ ಆರಂಭವಾಗಿದೆ. ಸ್ಥಳದಲ್ಲಿ ಮೇಲ್ಛಾವಣಿ ಶೀಟ್‌, ಸಿಮೆಂಟ್‌ ಅಳವಡಿಸುವ ಕಾರ್ಯ ಈಗಾಗಲೇ ಮುಕ್ತಾಯಗೊಂಡಿದೆ.

ಈ ಜಿಮ್‌ನ ಬಳಕೆದಾರರಿಗೆ ಯಾವುದೇ ಶುಲ್ಕ ತೆಗೆದುಕೊಳ್ಳಲಾಗುವುದಿಲ್ಲ. ಅಲ್ಲದೇ, ತರಬೇತುದಾರರೂ ಇರುವುದಿಲ್ಲ. ವಾಕಿಂಗ್‌ಗೆ ಆಗಮಿಸಿದ ಅಥವಾ ಪಾರ್ಕ್‌ಗೆ ಭೇಟಿ ನೀಡಿದ ಯಾರೇ ಆದರೂ, ಈ ಜಿಮ್‌ನ್ನು ಬಳಸಿಕೊಳ್ಳಬಹುದು. ಯಾವುದೇ ಕಟ್ಟಡ, ಹೊರ ಆವರಣಗಳಿಲ್ಲದೆ, ಓಪನ್‌ ಜಿಮ್‌ ಆಗಿ ಇದು ಕಾರ್ಯ ನಿರ್ವಹಿಸಲಿದೆ. ಸುಮಾರು 15 ಸಲಕರಣೆಗಳನ್ನು ಜಿಮ್‌ ಒಳಗೊಂಡಿರುತ್ತದೆ. ಇದರಲ್ಲಿ ಸೈಕ್ಲಿಂಗ್‌, ವಾಕಿಂಗ್‌, ಡ್ರೈವಿಂಗ್‌, ಟಂಬ್ಲಿಂಗ್‌ ಸೇರಿದಂತೆ ವಿವಿಧ ರೀತಿಯ ಜಿಮ್‌ ಸೌಲಭ್ಯಗಳಿರುತ್ತವೆ. 85 ಮೀಟರ್‌ ಉದ್ದದ ಜಾಗದಲ್ಲಿ ಈ ಎಲ್ಲ ಸಲಕರಣೆಗಳನ್ನು ಅಳವಡಿಸಲಾಗುತ್ತದೆ. ಜಿಮ್‌ ಗಾಗಿ ಯಾವುದೇ ಕಟ್ಟಡದ ವ್ಯವಸ್ಥೆ ಇರುವುದಿಲ್ಲ. ಮೇಲ್ಭಾಗದಲ್ಲಿ ಶೀಟ್‌ ಅಳವಡಿಸಿ, ಮಳೆ ನೀರು, ಬಿಸಿಲು ತಾಗದಂತೆ ವ್ಯವಸ್ಥೆ ಮಾಡಿ ಕೊಡಲಾಗುತ್ತದೆ ಎಂದು ಸಹಾಯಕ ಕಾರ್ಯಕಾರಿ ಅಭಿಯಂತರ ರವಿ ಶಂಕರ್‌ ತಿಳಿಸಿದ್ದಾರೆ.

ಕೇಂದ್ರ, ರಾಜ್ಯ, ಮನಪಾದಿಂದ ಅನುದಾನ
ಅಮೃತ್‌ ಯೋಜನೆಯಡಿ ಬಿಡುಗಡೆಗೊಂಡಿರುವ 116 ಲಕ್ಷ ರೂ. ಅನುದಾನದ ಹಣವನ್ನು ಬಳಸಿಕೊಂಡು ಕದ್ರಿ ಪಾರ್ಕ್‌ನಲ್ಲಿ ಜಿಮ್‌ ಸೌಲಭ್ಯ ಕಲ್ಪಿಸಲಾಗುತ್ತದೆ. ಇದರಲ್ಲಿ ಕೇಂದ್ರ ಸರಕಾರದ ಶೇ. 50, ರಾಜ್ಯ ಸರಕಾರದ ಶೇ. 20 ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಶೇ. 30ರಷ್ಟು ಅನುದಾನವಿರುತ್ತದೆ. ಸದ್ಯ ಪಾರ್ಕ್‌ನಲ್ಲಿ ನಿರ್ಮಾಣವಾಗುತ್ತಿರುವ ಜಿಮ್‌ನ ಅಂದಾಜು ವೆಚ್ಚ ಸುಮಾರು 25 ಲಕ್ಷ ರೂ.ಗಳಾಗಿವೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಯೋಜನೆಯ ಅನುದಾನದಲ್ಲಿ ಪಾರ್ಕ್‌ನಲ್ಲಿ ವಿವಿಧ ಕಾಮಗಾರಿಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಈಗಾಗಲೇ ವಾಕಿಂಗ್‌ ಟ್ರ್ಯಾಕ್  ಮಾಡಲಾಗಿದೆ. ವಿಶೇಷ ಸಾಮರ್ಥ್ಯದ ಮಕ್ಕಳ ಆಟದ ತಾಣವೂ ನಿರ್ಮಾಣ ಹಂತದಲ್ಲಿದ್ದು, ಸಲಕರಣೆಗಳನ್ನು ಇನ್ನಷ್ಟೇ ತರಿಸಬೇಕಿದೆ.

ತೋಟಗಾರಿಕಾ ಇಲಾಖೆಗೆ ಹಸ್ತಾಂತರ
ಅಮೃತ್‌ ಯೋಜನೆಯಡಿ ಕದ್ರಿ ಪಾರ್ಕ್‌ನಲ್ಲಿ ಜಿಮ್‌ ನಿರ್ಮಾಣವಾಗುತ್ತಿದೆ. ಕಾಮಗಾರಿ ಮುಗಿದ ಅನಂತರ ಪಾಲಿಕೆಯಿಂದ ತೋಟಗಾರಿಕಾ ಇಲಾಖೆಗೆ ಜಿಮ್‌ ನಿರ್ವಹಣೆಯ ಹೊಣೆಯನ್ನು ಹಸ್ತಾಂತರಿಸಲಾಗುವುದು. ಡಿಸೆಂಬರ್‌ ತಿಂಗಳಾಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ. ಜ. 10ರ ಒಳಗಾಗಿ ಎಲ್ಲ ಪ್ರಕ್ರಿಯೆ ಮುಗಿಯಲಿದೆ.
 - ಮಹಮ್ಮದ್‌ ನಝೀರ್‌, ಪಾಲಿಕೆ ಆಯುಕ್ತರು

ಡಿಸೆಂಬರ್‌ ಅಂತ್ಯಕ್ಕೆ ಪೂರ್ಣ
ಕದ್ರಿ ಪಾರ್ಕ್‌ನಲ್ಲಿ ನಿರ್ಮಾಣವಾಗುತ್ತಿರುವ ಜಿಮ್‌ ಓಪನ್‌ ಜಿಮ್‌ ಆಗಿದ್ದು, ಸಾರ್ವಜನಿಕರು ಬಳಕೆ ಮಾಡಿಕೊಳ್ಳಬಹುದು. ಡಿಸೆಂಬರ್‌ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ.
 - ರವಿಶಂಕರ್‌, ಸಹಾಯಕ
    ಕಾರ್ಯಕಾರಿ ಅಭಿಯಂತರ 

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.