ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ: 10 ವರ್ಷ ಕಠಿನ ಶಿಕ್ಷೆ
Team Udayavani, Dec 16, 2018, 11:19 AM IST
ಮಂಗಳೂರು: ನಾಲ್ಕು ವರ್ಷದ ಬಾಲಕಿ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದ ಕಂಕನಾಡಿಯ ಚಂದ್ರಶೇಖರ್ ಯಾನೆ ರಾಜೇಶ(49)ನಿಗೆ 10 ವರ್ಷಗಳ ಕಠಿನ ಸಜೆ ಮತ್ತು 10 ಸಾ. ರೂ. ದಂಡ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಪೋಕೊÕà ವಿಶೇಷ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. ನ್ಯಾಯಾಧೀಶರಾದ ಬಿ.ಆರ್.ಪಲ್ಲವಿ ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.
ದಂಡ ತೆರಲು ತಪ್ಪಿದರೆ ಮತ್ತೆ 6 ತಿಂಗಳ ಕಠಿನ ಶಿಕ್ಷೆ ಅನುಭವಿಸಬೇಕು. ದಂಡದ ಮೊತ್ತದಲ್ಲಿ 7,500 ರೂ.ಗಳನ್ನು ಬಾಲಕಿಗೆ ಪರಿಹಾರವಾಗಿ ಪಾವತಿಸಬೇಕು ಎಂದು ತಿಳಿಸಲಾಗಿದೆ. ಚಂದ್ರಶೇಖರ್ ಪೈಂಟಿಂಗ್ ಕೆಲಸ ಮಾಡುತ್ತಿದ್ದು, ಈ ಹಿಂದೆ ಅಸೈಗೋಳಿಯ ಕಕ್ಕೆಮಜಲಿನಲ್ಲಿ ವಾಸವಾಗಿದ್ದ ಸಂದರ್ಭ 2016ರ ಆ.23ರಂದು ಟಿ.ವಿ. ನೋಡಲು ಮನೆಗೆ ಬಂದಿದ್ದ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಅಶೋಕ್ ಆರೋಪ ಪಟ್ಟಿ ಸಲ್ಲಿಸಿದ್ದರು. ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ.ವೆಂಕಟರಮಣ ಸ್ವಾಮಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರು. 15 ಸಾಕ್ಷ್ಯಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…