ಕೇಳಿದ್ದು 200 ಕೋ.ರೂ.; ಕೊಟ್ಟದ್ದು 20 ಕೋ.ರೂ.


Team Udayavani, Dec 18, 2018, 10:25 AM IST

flood.jpg

ಮಂಗಳೂರು: ಈ ಬಾರಿಯ ಮುಂಗಾರು ಮಳೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಮೂಲಸೌಕರ್ಯಗಳಿಗೆ ಆಗಿರುವ ಹಾನಿಗೆ 213.67 ಕೋ.ರೂ.ಗಳ ಪರಿಹಾರ ನೀಡಬೇಕು ಎಂದು ಕೋರಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರಕಾರದ ಮಾನದಂಡದಂತೆ ಜಿಲ್ಲೆಗೆ ಬಿಡುಗಡೆ ಮಾಡಲಾಗಿರುವುದು ಕೇವಲ 20 ಕೋ.ರೂ. ಆಗಿರುವ ನಷ್ಟವನ್ನು ಅವಲೋಕಿಸಿದರೆ ಈ ಮೊತ್ತ ಹಸಿದ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಿದೆ. ಅಲ್ಪ ಅನುದಾನವನ್ನು ಪರಿಹಾರ ಕಾರ್ಯಗಳಿಗೆ ಹೊಂದಿಸಿ ಕೊಳ್ಳಲು ಇಲಾಖೆಗಳು ಪರದಾಡುತ್ತಿವೆ.

ಈ ವರ್ಷದ ಆಗಸ್ಟ್‌  ತಿಂಗಳಿನಲ್ಲಿ  ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮಘಟ್ಟ ವ್ಯಾಪ್ತಿಯ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಉಂಟಾಗಿತ್ತು. ಆಗ ಸಂಭವಿಸಿದ ಪ್ರವಾಹ ಹಾಗೂ ಭೂಕುಸಿತದಿಂದ ಅಪಾರ ಪ್ರಮಾಣದಲ್ಲಿ  ಮೂಲ ಸೌಕರ್ಯಗಳಿಗೆ ಹಾನಿಯಾಗಿತ್ತು. ದಕ್ಷಿಣ ಕನ್ನಡದಲ್ಲಿ ಆಗಿರುವ ಹಾನಿಯ ಸಮೀಕ್ಷೆ ನಡೆಸಿದ ಜಿಲ್ಲಾಡಳಿತವು ಒಟ್ಟು 213.67 ಕೋ.ರೂ. ಪರಿಹಾರ ನೀಡಬೇಕು ಎಂಬ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿತ್ತು. 

ಅಲ್ಪ ಮೊತ್ತ ಹಂಚಿಕೆ
ಜಿಲ್ಲಾಡಳಿತ ಸಲ್ಲಿಸಿರುವ ಮಳೆಹಾನಿ ಪರಿಹಾರ ಪ್ರಸ್ತಾವನೆಗೆ ಪ್ರತಿಯಾಗಿ ರಾಜ್ಯ ಸರಕಾರದ ಕಂದಾಯ ಇಲಾಖೆಯು ಅಕ್ಟೋಬರ್‌ ತಿಂಗಳಿನಲ್ಲಿ 20.88 ಕೋಟಿ ರೂ. ಬಿಡುಗಡೆ ಮಾಡಿ ಅದನ್ನು ಇಲಾಖಾವಾರು ಹಂಚಿಕೆ ಮಾಡಿದೆ. ಇದರಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಜಾಯತ್‌ ರಾಜ್‌ ಇಲಾಖೆಗೆ 5.40 ಕೋ.ರೂ., ಲೋಕೋಪಯೋಗಿ ಇಲಾಖೆಗೆ 10.46 ಕೋ.ರೂ., ಮೆಸ್ಕಾಂಗೆ (ಇಂಧನ) 1.17 ಕೋ.ರೂ., ನಗರಾಭಿವೃದ್ಧಿ ಇಲಾಖೆಗೆ 3.52 ಕೋ.ರೂ. ಹಾಗೂ ನೀರಾವರಿ ಇಲಾಖೆಗೆ 23 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಹಂಚಿಕೆಯಾದ ಮೊತ್ತಕ್ಕೆ ಸೀಮಿತ ಗೊಳಿಸಿ ಕಾಮಗಾರಿಗಳನ್ನು ಕೈಗೊಳ್ಳ ಬೇಕು. ಬಿಡುಗಡೆ ಮಾಡಿರುವ ಅನುದಾನವನ್ನು ಯಾವ ಉದ್ದೇಶಕ್ಕೆ ಬಿಡುಗಡೆ ಮಾಡಲಾಗಿದೆಯೋ  ಅದೇ ಉದ್ದೇಶಕ್ಕೆ ಮಾತ್ರ ಬಳಸಬೇಕು ಎಂದು ನಿರ್ದೇಶನವನ್ನು ನೀಡಲಾಗಿದೆ. ಪರಿಹಾರವಾಗಿ ಬಿಡುಗಡೆಯಾಗಿರುವ ಅಲ್ಪ ಮೊತ್ತದಿಂದ ದುರಸ್ತಿ ಮತ್ತಿತರ ಕಾಮಗಾರಿಗಳನ್ನು ನಡೆಸಲು ಇಲಾಖೆಗಳು ಪರದಾಡಬೇಕಾಗಿದೆ. ಮೂಲ ಸೌಕರ್ಯ ಅಲ್ಲದೆ ಎ.1ರಿಂದ ಆಗಸ್ಟ್‌ 14 ವರೆಗಿನ ಮೂರೂವರೆ ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಮಳೆಗೆ 12 ಮಂದಿ ಬಲಿ ಯಾಗಿದ್ದು, 1,163 ಮನೆಗಳಿಗೆ ಹಾನಿ ಸಂಭವಿಸಿತ್ತು. 

ಮಂಗಳೂರು ತಾಲೂಕಿನಲ್ಲಿ ಅತಿಹೆಚ್ಚು ಹಾನಿ
ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹ ಮತ್ತು ಭೂಕುಸಿತದಿಂದ ಮಂಗಳೂರು ತಾಲೂಕಿನಲ್ಲಿ ಮೂಲಸೌಕರ್ಯಗಳಿಗೆ ಗರಿಷ್ಠ ಪ್ರಮಾಣದ 91.14 ಕೋ.ರೂ. ಹಾನಿಯಾಗಿತ್ತು ಪುತ್ತೂರಿನಲ್ಲಿ 37.04 ಕೋ.ರೂ., ಸುಳ್ಯದಲ್ಲಿ 25.85 ಕೋ.ರೂ., ಬಂಟ್ವಾಳದಲ್ಲಿ 12.68 ಕೋ.ರೂ., ಬೆಳ್ತಂಗಡಿಯಲ್ಲಿ 16.04 ಕೋ.ರೂ., ಕಡಬದಲ್ಲಿ 25.85 ಕೋ.ರೂ. ಹಾಗೂ ಮೂಡುಬಿದಿರೆಯಲ್ಲಿ 18.98 ಕೋ.ರೂ. ಮೊತ್ತದ ಮೂಲಸೌಕರ್ಯಗಳಿಗೆ ಹಾನಿಯುಂಟಾಗಿದೆ ಎಂದು ಎಂದು ಸಮೀಕ್ಷೆಯಲ್ಲಿ ಅಂದಾಜಿಸಿ ವರದಿ ನೀಡಲಾಗಿತ್ತು.  

ಹೆಚ್ಚಿನ ಅನುದಾನದ  ಮಾಹಿತಿ ಸದ್ಯ ಇಲ್ಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈ ಬಾರಿಯ ಮುಂಗಾರಿನಲ್ಲಿ ಭಾರೀ ಮಳೆಯಿಂದ ಮೂಲ ಸೌಕರ್ಯಗಳಿಗೆ ಆಗಿರುವ ಹಾನಿಗೆ 20 ಕೋ.ರೂ. ಬಿಡುಗಡೆಯಾಗಿದೆ. ಅದನ್ನು ಪರಿಹಾರ ಕಾಮಗಾರಿಗಳಿಗಾಗಿ ವಿನಿಯೋಗಿಸಲಾಗುತ್ತಿದೆ. ಹೆಚ್ಚಿನ ಅನುದಾನ ಕುರಿತು ಸದ್ಯ ಯಾವುದೇ ಮಾಹಿತಿ ಬಂದಿಲ್ಲ.
ಶಶಿಕಾಂತ ಸೆಂಥಿಲ್‌, ದ.ಕ. ಜಿಲ್ಲಾಧಿಕಾರಿ  

ಕೇಶವ ಕುಂದರ್‌

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.