ತೋಕೂರು: ಕಿಂಡಿ ಅಣೆಕಟ್ಟಿನಿಂದ ಹೆಚ್ಚಿದ ನೀರಿನ ಒರತೆ


Team Udayavani, Dec 19, 2018, 10:26 AM IST

19-december-2.gif

ತೋಕೂರು: ಕುಡಿಯುವ ನೀರಿಗಾಗಿ ಮುಂದಿನ ಬೇಸಗೆಯಲ್ಲಿ ಪರಿತಪಿಸುವುದನ್ನು ತಪ್ಪಿಸಲು ಪಡುಪಣಂಬೂರು ಗ್ರಾಮ ಪಂಚಾಯತ್‌ನ ಅವಿರತ ಪ್ರಯತ್ನದ ಫಲವಾಗಿ ಸುತ್ತಮುತ್ತಲಿನ ಸುಮಾರು 3 ಕಿ.ಮೀ. ವ್ಯಾಪ್ತಿಯಲ್ಲಿ ನೀರಿನ ಒರತೆ ಹೆಚ್ಚಾಗಿದೆ. ಗ್ರಾ.ಪಂ. ವತಿಯಿಂದ ನರೇಗಾ ಯೋಜನೆಯಲ್ಲಿ ನಿರ್ಮಿಸಿದ ಎರಡು ಕಿಂಡಿಅಣೆಕಟ್ಟಿಗೆ ಹಲಗೆ ಹಾಕಿರುವುದರಿಂದ ಒಂದೇ ವರ್ಷ ದಲ್ಲಿ ಅದರ ಅಗತ್ಯತೆಯ ಬಗ್ಗೆ ಗ್ರಾಮಸ್ಥರಲ್ಲಿ ವಿಶ್ವಾಸ ಮೂಡಿಸಲು ಪಂಚಾಯತ್‌ ಯಶಸ್ವಿಯಾಗಿದೆ.

ಕಿಂಡಿಅಣೆಕಟ್ಟು ನಿರ್ಮಿಸಿ, ಸೂಕ್ತ ಕಾಲದಲ್ಲಿ ಜಲಸಂರಕ್ಷಣೆ ಮಾಡಿಕೊಂಡಲ್ಲಿ ನೀರಿನ ಒರತೆಯು ಜೀವಜಲವಾಗಿ ಮಾರ್ಪಡುತ್ತದೆ ಎಂದು ಇಲ್ಲಿನ ತೋಕೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಾಣವಾದ ಎರಡು ಕಿಂಡಿ ಅಣೆಕಟ್ಟುಗಳು ಪ್ರತ್ಯಕ್ಷ ಸಾಕ್ಷಿಯಾಗಿವೆ.

ಪರಿಸರದ ಬಾವಿ, ಖಾಸಗಿ ಮತ್ತು ಪಂಚಾಯತ್‌ನ ಕೊಳವೆ ಬಾವಿಗಳಿಗೆ ಹಾಗೂ ಕೃಷಿ ಭೂಮಿಗೆ ವರದಾನವಾಗಿ ಪರಿಣಮಿಸಿದೆ. ಪ್ರಸ್ತುತ ನೀರಿನ ಮಟ್ಟವು ಸಹ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಕೃಷಿ ಭೂಮಿಗೆ ನಿರಾತಂಕವಾಗಿ ನೀರುಣಿಸುವ ತವಕದಲ್ಲಿ ಸ್ಥಳೀಯ ರೈತರು ಸಜ್ಜಾಗಿದ್ದಾರೆ. ಒಂದೇ ಫಸಲನ್ನು ಕಾಣುತ್ತಿದ್ದವರು ಈಗ ಎರಡು ಫಸಲಿನತ್ತ ಮನ ಮಾಡಿದ್ದಾರೆ.

ಕಿಂಡಿಅಣೆಕಟ್ಟಿನ ಹಲಗೆಯನ್ನು ಹಾಕಲು ಪಂಚಾಯತ್‌ನ ಅಧ್ಯಕ್ಷರ ಸಹಿತ ಅಧಿಕಾರಿಗಳು ಹಾಗೂ ಸಿಬಂದಿ ಸಾಥ್‌ ನೀಡಿದ್ದು, ಇದರ ಫಲಾನುಭವಿಗಳೊಂದಿಗೆ ಸೇರಿಕೊಂಡು ವ್ಯವಸ್ಥಿತವಾಗಿ ನಿರ್ವಹಣೆ ನಡೆಸಿದ್ದಾರೆ. ಇದಕ್ಕೆ ಸ್ಥಳೀಯ ಯುವಕ ಸಂಘ ಮತ್ತು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್  ಕ್ಲಬ್‌ನ ಸದಸ್ಯರು ಸಹಕರಿಸಿದ್ದಾರೆ.

ಹತ್ತೇ ದಿನದಲ್ಲಿ ತುಂಬಿ ಹರಿದ ನೀರು
ಪಡುಪಣಂಬೂರು ಗ್ರಾ.ಪಂ. ನ ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಕೋರ್ದಬ್ಬು ದೈವಸ್ಥಾನದ ಬಳಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ(ನರೇಗಾ)ಯಲ್ಲಿ ತಲಾ 4.90 ಲಕ್ಷ ರೂ. ವೆಚ್ಚದಲ್ಲಿ 20:80 ಅನುಪಾತದಲ್ಲಿ ಗ್ರಾಮದ ಸಾಮಾನ್ಯ ತೋಡಿನಲ್ಲಿ ಹರಿಯುತ್ತಿರುವ ನೀರು ವ್ಯರ್ಥವಾಗಿ ಸಮುದ್ರ ಸೇರುವುದನ್ನು ಹಿಡಿದಿಟ್ಟುಕೊಂಡು ಈ ಕಿಂಡಿಅಣೆಕಟ್ಟನ್ನು ನಿರ್ಮಿಸಿದರು.

5 ಮೀ. ಉದ್ದ, 3 ಮೀ. ಅಗಲದಲ್ಲಿ ನಿರ್ಮಿಸಿದ ಅನಂತರ ಇದಕ್ಕೆ 9 ಅಡಿ ಆಳದಲ್ಲಿ ಹಲಗೆಯನ್ನು ಹಾಕಿದ ಹತ್ತೇ ದಿನದಲ್ಲಿ ಕಿಂಡಿ ಅಣೆಕಟ್ಟು ತುಂಬಿ ತುಳುಕಿ ನೀರು ಮೇಲ್ಮಟ್ಟದಲ್ಲಿ ಹರಿಯುವಂತಾಗಿದೆ. ಇದರಿಂದ ಸುಮಾರು 3 ಕಿ.ಮೀ. ವ್ಯಾಪ್ತಿಯಲ್ಲಿನ ಪ್ರದೇಶದಲ್ಲಿ ಅಂತರ್ಜಲ ಮಟ್ಟ ಸುಧಾರಣೆಯಾಗಿ ಕೃಷಿ ತೋಟಗಳಲ್ಲಿ ನೀರಿನ ಒರತೆ ಮೇಲ್ಮಟ್ಟದಲ್ಲಿ ಹರಿದಿದೆ. ಎರಡೂ ಕಡೆಗಳಲ್ಲಿ ಸುಮಾರು 50 ಮನೆಗಳು ಆಸುಪಾಸಿನಲ್ಲಿದೆ. ಇದರೊಂದಿಗೆ ದೇವಸ್ಥಾನದ ಕೆರೆಗೂ ನೀರಿನ ಒರತೆ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಕಂಬಳಬೆಟ್ಟುವಿನಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಗ್ರಾ.ಪಂ. ರೂಪಿಸಿದೆ. 

ನರೇಗಾ ಅನುದಾನದ ಸದ್ಬಳಕೆ
ಪಂಚಾಯತ್‌ಗೆ ಆರ್ಥಿಕ ಸಂಪನ್ಮೂಲದ ಕೊರತೆ ಒಂದು ಕಡೆ, ಇತರ ಜನಪ್ರತಿನಿಧಿಗಳ ಅನುದಾನ ಸಿಗುವುದು ಸಹ ಒಂದೆರಡು ಸೀಮಿತ ಯೋಜನೆಗಳಿಗೆ ಮಾತ್ರ. ಆದರೆ ನರೇಗಾ ಯೋಜನೆಯಿಂದ ಸಾಕಷ್ಟು ಉಪಯೋಗವಾಗಿದೆ. ಇದನ್ನೇ ಮುಖ್ಯವಾಗಿ ಬಳಸಿಕೊಂಡು ಯೋಜನೆ ರೂಪಿಸಲಾಯಿತು. ಭವಿಷ್ಯದಲ್ಲಿ ನೀರಿನ ಸಮಸ್ಯೆಗಳು ಬಾರದಂತೆ ವರ್ಷದ ಹಿಂದೆಯೇ ಜಾರಿಗೆ ತಂದ ಯೋಜನೆ ಹಂತ ಹಂತವಾಗಿ ಯಶಸ್ಸು ಕಾಣುವಂತಾಗಿದೆ. ಇದು ಇನ್ನಷ್ಟು ಮುಂದುವರಿದು ಕುಡಿಯುವ ನೀರಿನ ಬವಣೆ ಶಾಶ್ವತವಾಗಿ ನಿವಾರಿಸಬೇಕು.
– ಮೋಹನ್‌ದಾಸ್‌, ಅಧ್ಯಕ್ಷರು,
ಪಡುಪಣಂಬೂರು ಗ್ರಾ.ಪಂ.

ಗ್ರಾಮಸ್ಥರಿಂದಲೇ ಗ್ರಾಮಕ್ಕಾಗಿ
ಗ್ರಾಮಸ್ಥರು ಮುಕ್ತವಾಗಿ ನರೇಗಾ ಯೋಜನೆಯನ್ನು ಗ್ರಾಮದ ನೆರವಿಗೆ ಬಳಸಿಕೊಂಡಿರುವುದರಿಂದ ಇಂದು ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಒಳ ಹರಿವು ಹೆಚ್ಚಲು ಕಾರಣವಾಗಿದೆ. ಪಂಚಾಯತ್‌ ಮಾತ್ರ ಪರಸ್ಪರ ಕೊಂಡಿಯಾಗಿ ಕೆಲಸ ಮಾಡುತ್ತಿದೆ. ಇದು ಇನ್ನಷ್ಟು ಗ್ರಾಮಕ್ಕೆ ಮಾದರಿಯಾಗಬೇಕು.
– ಲೋಕನಾಥ ಭಂಡಾರಿ,
ಕಾರ್ಯದರ್ಶಿ , ಪಡುಪಣಂಬೂರು ಗ್ರಾ.ಪಂ.

ಬಾವಿಯಲ್ಲಿ ನೀರು ಹೆಚ್ಚಾಯಿತು
ಎಪ್ರಿಲ್‌- ಮೇ ತಿಂಗಳಿನಲ್ಲಿಯೇ ಬಾವಿಯಲ್ಲಿ ನೀರು ಬತ್ತಿಹೋಗುತ್ತಿತ್ತು. ಈ ಬಾರಿ ಮಳೆಗಾಲದವರೆಗೂ ನೀರು ಸಿಕ್ಕಿದೆ. ಈ ವರ್ಷದಲ್ಲಿಯೂ ಬಾವಿಯಲ್ಲಿ ಈಗಲೇ ನೀರು ಹೆಚ್ಚಾಗಿರುವುದು ಪರೋಕ್ಷವಾಗಿ ಕಿಂಡಿ ಅಣೆಕಟ್ಟೇ ಮೂಲ ಕಾರಣವಾಗಿದೆ.
-ಗೋಪಾಲ ಮೂಲ್ಯ, ಗ್ರಾಮಸ್ಥರು.

ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.