“ಮಂಗಳೂರು ನಗರಕ್ಕೆ ನೀರಿನ ಸಮಸ್ಯೆಯಾಗದು’


Team Udayavani, Jan 10, 2019, 5:04 AM IST

tumbe.jpg

ಮಂಗಳೂರು: ತುಂಬೆಯ ಕಿಂಡಿ ಅಣೆಕಟ್ಟಿನಲ್ಲಿ ಪ್ರಸ್ತುತ 6 ಮೀ. ಎತ್ತರಕ್ಕೆ ಹಾಗೂ ಎಎಂಆರ್‌ ಡ್ಯಾಮ್‌ನಲ್ಲಿ 14.25 ದಶಲಕ್ಷ ಕ್ಯೂಬಿಕ್‌ ಮೀ. ನೀರು ಸಂಗ್ರಹವಿದ್ದು, ಮುಂದಿನ 150 ದಿನಗಳ ವರೆಗೆ ಉಪಯೋಗಿಸಬಹುದಾಗಿದೆ. ಹೀಗಾಗಿ ಈ ಬಾರಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿಲ್ಲ ಎಂದು ಮೇಯರ್‌ ಭಾಸ್ಕರ್‌ ಕೆ. ಹೇಳಿದ್ದಾರೆ. ತುಂಬೆಯ ಕಿಂಡಿ ಅಣೆಕಟ್ಟಿನ ಬಳಿ ಜನಪ್ರತಿನಿಧಿಗಳು, ಅಧಿಕಾರಿಗಳ ಜತೆ ಬುಧವಾರ ಗಂಗಾ ಪೂಜೆ ನೆರವೇರಿಸಿ ಹಾಗೂ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

ತುಂಬೆಯಲ್ಲಿ 50 ದಿನಗಳಿಗೆ (6 ಮೀ.) ಹಾಗೂ ಎಎಂಆರ್‌ ಡ್ಯಾಮ್‌ನಲ್ಲಿ 100 ದಿನಗಳ ಪೂರೈಕೆಗೆ (14.25 ಎಂಸಿಎಂ) ನೀರು ಸಂಗ್ರಹಗೊಂಡಿದೆ. ಎಎಂಆರ್‌ ಅಣೆಕಟ್ಟಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ಸಂಗ್ರಹಣೆ ಮಾಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಪ್ರಸ್ತುತ ನೇತ್ರಾವತಿ ನದಿಯಲ್ಲಿ ಸುಮಾರು 20 ಕ್ಯೂಮೆಕ್‌ (1 ಕ್ಯೂಮೆಕ್‌=1 ಸೆಕೆಂಡ್‌ಗೆ 1 ಕ್ಯೂಬಿಕ್‌ ಮೀ. ಹರಿವು) ನಷ್ಟು ನೀರಿನ ಒಳಹರಿವು ಇದ್ದು, ಬೇಸಗೆಯಲ್ಲಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಬರುವುದಿಲ್ಲ. ಸಾರ್ವ ಜನಿಕರು ನೀರು ಪೋಲು ಮಾಡದೆ ಮಿತವಾಗಿ ಬಳಸಬೇಕು ಎಂದು ಅವರು ಹೇಳಿದರು.

ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಪ್ರಸ್ತುತ ಅಣೆಕಟ್ಟಿನಲ್ಲಿ ಒಳಹರಿವು ಹೆಚ್ಚಾಗಿದೆ. ಇನ್ನೂ ಒಂದು ಮೀ.ನಷ್ಟು ನೀರು ಸಂಗ್ರಹಿಸುವ ಅವಕಾಶವೂ ಇದೆ. ಈ ಬಾರಿ ಕಳ್ಳಿಗೆ ಗ್ರಾಮಕ್ಕೂ ನೀರು ಒದಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು. ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಮಾತನಾಡಿ, ಉಪ್ಪು ನೀರು ಶುದ್ಧೀಕರಣ ಘಟಕ ಆರಂಭಿಸುವ ಬದಲಾಗಿ ತುಂಬೆ ಅಣೆಕಟ್ಟಿನಲ್ಲಿ ಮೂಲ ಸೌಲಭ್ಯ ಹೆಚ್ಚಿಸಿ ಇಲ್ಲಿಯೇ ಹೆಚ್ಚಿನ ನೀರು ಸಂಗ್ರಹಿಸುವ ವ್ಯವಸ್ಥೆ ಮಾಡಬಹುದು ಎಂದರು. ಮುಖ್ಯ ಸಚೇತಕ ಶಶಿಧರ ಹೆಗ್ಡೆ,ವಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಆಯುಕ್ತ ಮೊಹಮ್ಮದ್‌ ನಝೀರ್‌, ಸ್ಥಾಯೀ ಸಮಿತಿ ಅಧ್ಯಕ್ಷರಾದ ನವೀನ್‌ ಡಿ’ಸೋಜಾ, ಪ್ರವೀಣ್‌ಚಂದ್ರ ಆಳ್ವ, ಪ್ರಕಾಶ್‌ಚಂದ್ರ ಶೆಟ್ಟಿ, ಲತಾ ಸಾಲ್ಯಾನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.