ಸಾರಿಗೆ ಕ್ಷೇತ್ರಕ್ಕೆ  3.5 ಕೋಟಿ ರೂ.ಗೂ ಹೆಚ್ಚು ನಷ್ಟ! 


Team Udayavani, Jan 10, 2019, 5:14 AM IST

bus.jpg

ಮಂಗಳೂರು: ಭಾರತ ಬಂದ್‌ ಜನಜೀವನದ ಮೇಲೆ ಹೆಚ್ಚು ಪರಿಣಾಮ ಬೀರದಿದ್ದರೂ ಕರಾವಳಿಯ ಎರಡು ಜಿಲ್ಲೆಗಳ ಸಾರಿಗೆ ವಲಯವನ್ನು ಬಲವಾಗಿ ಬಾಧಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಖಾಸಗಿ ಮತ್ತು ಸರಕಾರಿ ಬಸ್‌ ಸಂಚಾರ ಸ್ಥಗಿತಗೊಂಡು 3.5 ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ.

ಎರಡೂ  ಜಿಲ್ಲೆಗಳ ಪ್ರಮುಖ ನಗರ, ಪಟ್ಟಣ; ಇನ್ನಿತರ ಪ್ರದೇಶಗಳಿಗೆ ದಿನಕ್ಕೆ 3,600ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಸಂಚರಿಸುತ್ತವೆ. ಎರಡು ದಿನಗಳಲ್ಲಿ 3,000ಕ್ಕೂ ಹೆಚ್ಚು ಖಾಸಗಿ ಬಸ್‌ ಸಂಚಾರ ರದ್ದಾಗಿದ್ದು ಖಾಸಗಿ ಕ್ಷೇತ್ರಕ್ಕೆ 2 ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ. ಮಂಗಳೂರಿನಲ್ಲಿ 360ಕ್ಕೂ ಹೆಚ್ಚಿನ ಸಿಟಿ ಬಸ್‌ಗಳಿದ್ದು, ಮಂಗಳವಾರ ಜನಸಂಚಾರ ಕಡಿಮೆ ಇದ್ದ ಕಾರಣ ಹೆಚ್ಚಿನ ಬಸ್‌ ಟ್ರಿಪ್‌ ಕಡಿತಗೊಂಡಿದ್ದವು. ಹೀಗಾಗಿ ಸಿಟಿ ಬಸ್‌ ವಲಯ ಸುಮಾರು 50 ಲಕ್ಷ ರೂ. ನಷ್ಟ ಅನುಭವಿಸಿದೆ.

ಕೆಎಸ್ಸಾರ್ಟಿಸಿಗೆ 1.20 ಕೋಟಿ ನಷ್ಟ
ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ಪ್ರತಿ ದಿನ 350ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ. ಪುತ್ತೂರು ವಿಭಾಗದಿಂದ ಸುಮಾರು 560 ಬಸ್‌ಗಳು ಸಂಚರಿಸುತ್ತವೆ. ಬಂದ್‌ನಿಂದ ಎರಡೂ ಡಿಪೋಗಳಲ್ಲಿ ಸುಮಾರು 1 ಕೋಟಿ ರೂ.ಗೂ ಹೆಚ್ಚಿನ ನಷ್ಟವಾಗಿದೆ. ಮೊದಲ ದಿನ ಮಂಗಳೂರು ವಿಭಾಗ ದಿಂದ 255 ಬಸ್‌ಗಳ ಪೈಕಿ 158 ಮಾತ್ರಸಂಚರಿಸಿವೆ. ಪುತ್ತೂರು ವಿಭಾಗದ 288 ಬಸ್‌ಗಳ ಪೈಕಿ 184 ಮಾತ್ರ ಸಂಚರಿಸಿದ್ದವು. ಎರಡನೇ ದಿನ ಮಂಗಳೂರು ವಿಭಾಗದಿಂದ 251 ಬಸ್‌ಗಳ ಪೈಕಿ 205 ಮತ್ತು ಪುತ್ತೂರು ವಿಭಾಗದಿಂದ 283ರ ಪೈಕಿ 244 ಮಾತ್ರ ಸಂಚರಿಸಿದ್ದವು.

ಎಂದಿನಂತೆ ಸಂಚಾರ
ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಕಾಸರಗೋಡಿಗೆ ಸಾಮಾನ್ಯ ದಿನಗಳಲ್ಲಿ ಸುಮಾರು 3 ನಿಮಿಷಕ್ಕೊಂದರಂತೆ 42 ಬಸ್‌ ಸಂಚರಿಸುತ್ತವೆ. ಬಂದ್‌ನ ಎರಡೂ ದಿನಗಳಲ್ಲಿ ಒಂದೂ ಬಸ್‌ ಸಂಚರಿಸಲಿಲ್ಲ. ಗುರುವಾರದಿಂದ ಸಂಚಾರ ಎಂದಿನಂತೆ ಇರಲಿದೆ. ರಾಜ್ಯ ಕೆಎಸ್ಸಾರ್ಟಿಸಿಗೆ  7.82 ಕೋಟಿ ರೂ. ನಷ್ಟ ಭಾರತ ಬಂದ್‌ ಪರಿಣಾಮದಿಂದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮೊದಲ ದಿನ 5.40 ಕೋಟಿ ರೂ., ಎರಡನೇ ದಿನ 2.42 ಕೋಟಿ ರೂ. ನಷ್ಟವಾಗಿದೆ. ಒಟ್ಟಾರೆ ಎರಡು ದಿನಗಳಲ್ಲಿ 7.82 ಕೋಟಿ ರೂ. ನಷ್ಟವಾಗಿದೆ. 

ನಷ್ಟದಲ್ಲಿ  ಬಸ್‌ಗಳು
ಕೆನರಾ ಬಸ್‌ ಮಾಲಕರ ಸಂಘದ ಅಧ್ಯಕ್ಷ ಕೆ. ರತ್ನವರ್ಮ ಬಲ್ಲಾಳ್‌ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಎರಡು ದಿನಗಳ ಕಾಲ ಹೆಚ್ಚಿನ ಖಾಸಗಿ ಬಸ್‌ಗಳು ಓಡಾಡಲಿಲ್ಲ. ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ಕೆಲವು ಬಸ್‌ ಓಡಿಸಿದ್ದೆವು. ಬೆರಳೆಣಿಕೆಯಷ್ಟು ಪ್ರಯಾಣಿಕರಿದ್ದ ಕಾರಣ ಅಪಾರ ನಷ್ಟ ಉಂಟಾಗಿದೆ. ಕೆಲವು ಬಸ್‌ ಮಾಲಕರು ನಿರ್ವಾಹಕರಿಗೆ ನಷ್ಟದಲ್ಲಿಯೇ ಹಣ ಪಾವತಿ ಮಾಡಿದ್ದಾರೆ ಎಂದಿದ್ದಾರೆ. 

72 ಲಕ್ಷ ರೂ. ನಷ್ಟ
ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗಕ್ಕೆ ಎರಡು ದಿನಗಳಲ್ಲಿ ಸುಮಾರು 72 ಲಕ್ಷ ರೂ. ನಷ್ಟ ಉಂಟಾಗಿದೆ. ಮೊದಲ ದಿನ  1.50 ಲಕ್ಷ ಕಿ.ಮೀ., ಎರಡನೇ ದಿನ 64 ಸಾವಿರ ಕಿ.ಮೀ. ಬಸ್‌ ಸಂಚಾರ ರದ್ದಾಗಿತ್ತು.
ದೀಪಕ್‌ ಕುಮಾರ್‌, ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗಾಧಿಕಾರಿ

50 ಲಕ್ಷ ರೂ. ನಷ್ಟ
ಬಂದ್‌ನಿಂದ ಮಂಗಳೂರಿನಲ್ಲಿ ಸಿಟಿ ಬಸ್‌ ಸಂಚಾರ ರದ್ದುಗೊಂಡು ಎರಡು ದಿನಗಳಲ್ಲಿ ಸುಮಾರು 50 ಲಕ್ಷ ರೂ.ಗೂ ಹೆಚ್ಚಿನ ನಷ್ಟ ಉಂಟಾಗಿದೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದ ಕಾರಣ ಹೆಚ್ಚಿನ ಟ್ರಿಪ್‌ ರದ್ದಾಗಿತ್ತು.
ದಿಲ್‌ರಾಜ್‌ ಆಳ್ವ,  ಖಾಸಗಿ ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.