ಫಲ್ಗುಣಿ ನದಿಯಲ್ಲಿ ಹಬ್ಬದ ಕಳೆ; ಜಲಕ್ರೀಡೆ, ಸಾಂಸ್ಕೃತಿಕ ವೈಭವದ ಸೆಲೆ


Team Udayavani, Jan 13, 2019, 4:59 AM IST

13-january-3.jpg

ಮಹಾನಗರ : ನಳನಳಿಸುವ ಜಲರಾಶಿಯಲ್ಲಿ ಬೋಟುಗಳ ಕಲರವ; ನದಿಯ ಇಕ್ಕೆಲಗಳ ವಿಹಂಗಮ ನೋಟ ವನ್ನು ಆಸ್ವಾದಿಸುತ್ತಾ ತೇಲುವ ಆಹಾರ ಮಳಿಗೆಯಲ್ಲಿ ತಮ್ಮ ನೆಚ್ಚಿನ ಆಹಾರವನ್ನು ಸವಿಯುವ ಅವಕಾಶ; ದೋಣಿಗಳಲ್ಲಿ ಜಲವಿಹಾರ, ಜಲಕ್ರೀಡೆಯ ಪುಳಕ… ಸುಂದರ ಪ್ರಕೃತಿ ಸೊಬಗಿನ ಹಿನ್ನೆಲೆಯೊಂದಿಗೆ ಗಾನ, ನೃತ್ಯ, ಸಂಗೀತದ ಪುಳಕ… ಒಟ್ಟಾರೆಯಾಗಿ ಕೂಳೂರಿನ ಫಲ್ಗುಣಿ ನದಿಯಲ್ಲಿ ಹಬ್ಬದ ಕಳೆ; ತಣ್ಣನೆ ಹರಿಯುವ ನದಿಗೆ ಆಕರ್ಷಣೆಯ ಸೆಲೆ.

ರಾಜ್ಯದ ಪಾಲಿಗೆ ವಿನೂತನ ಮತ್ತುಪ್ರಥಮ ಎನ್ನಬಹುದಾದ ನದಿ ಉತ್ಸವ (ರಿವರ್‌ ಫೆಸ್ಟಿವಲ್‌) ಶನಿವಾರ ಆರಂಭ ಗೊಂಡಿದ್ದು ರವಿವಾರವೂ ನಡೆಯಲಿದೆ. ಫಲ್ಗುಣಿ ನದಿಯಲ್ಲಿ ಕೂಳೂರು ಸೇತುವೆಯ ಬಳಿಯಿಂದ ಸುಲ್ತಾನ್‌ ಬತ್ತೇರಿಯವರೆಗೆ ಸುಮಾರು 23 ಕಿ.ಮೀ. ವರೆಗೆ ನದಿ ಮತ್ತು ನದಿಪಾತ್ರದಲ್ಲಿ ನಡೆಯುವ ಉತ್ಸವದಲ್ಲಿ ಎರಡು ದಿನಗಳ ಕಾಲ ವೈವಿಧ್ಯಮಯ ಮನೋರಂಜನೆ ಹಾಗೂ ಜಲಸಂಬಂಧಿತ ಕ್ರೀಡೆಗಳು ನಡೆಯುತ್ತಿವೆ. ಕೂಳೂರಿನಿಂದ ಬಂಗ್ರ ಕೂಳೂರುವರೆಗೆ ಸುಮಾರು ಎರಡುವರೆ ಕಿ.ಮೀ. ದೂರು ನದಿ ಬದಿಯಲ್ಲಿ ನಡೆಯುತ್ತಾ ಪ್ರಕೃತಿ ಸೌಂದರ್ಯ ಆಸ್ವಾದಿಸಬಹುದು.

ಬೋಟು ವಿಹಾರ
ನಿಗದಿತ ಶುಲ್ಕ ತೆತ್ತು ನದಿಯಲ್ಲಿ ವಿಹರಿಸಲು ವ್ಯವಸ್ಥೆ ಮಾಡಲಾಗಿದ್ದು, ಜನರು ಜಲವಿಹಾರದ ಆನಂದವನ್ನು ಅನುಭವಿಸಿದರು. ಉತ್ಸವ ತಾಣಗಳಲ್ಲದೆ ನದಿ ತೀರದಲ್ಲಿರುವ ಇತರ ಜೆಟ್ಟಿಗಳಿಗೆ ಪ್ರವಾಸ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಸುಮಾರು 13 ದೋಣಿಗಳು ಕಾರ್ಯಾಚರಿಸುತ್ತಿವೆ. ನದಿ ಮಧ್ಯದಲ್ಲಿ ಆಕರ್ಷಕ ತೇಲುವ ರೆಸ್ಟೋರೆಂಟ್‌ಗಳಲ್ಲಿ ಕುಳಿತು ನೀರಿನ ಅಲೆಗಳ ಹಿತವಾದ ಜೋಕಾಲಿಯ ನಡುವೆ, ವಿಶಾಲ ಜಲರಾಶಿ ಮತ್ತು ನದಿಯ ಎರಡೂ ಬದಿಗಳಲ್ಲೂ ಇರುವ ಹಸಿರು ಸಿರಿಯ ರಮಣೀಯ ದೃಶ್ಯವನ್ನು ಆನಂದಿಸುತ್ತಾ, ಸ್ವಾದಿಷ್ಟಭರಿತ ತಿಂಡಿತಿನಸುಗಳ ಸವಿದರು.

ಜಲಕ್ರೀಡೆಗಳ ಪುಳಕ
ನದಿ ಉತ್ಸವಕ್ಕೆ ಆಗಮಿಸುವ ಸಾರ್ವ ಜನಿಕರಿಗೆ ಜಲಕ್ರೀಡೆಗಳು ಮನಸ್ಸಿಗೆ ಉಲ್ಲಾಸ ನೀಡುತ್ತಿವೆೆ. ರೋಯಿಂಗ್‌, ಕಯಾಕ್‌, ಸ್ಟ್ಯಾಂಡ್‌ ಆಫ್‌ ಫೆಡಲಿಂಗ್‌, ವಿಂಡ್‌ ಸರ್ಫಿಂಗ್‌ ಜೆಟ್ಸೆಕಿ, ಸ್ಪೀಡ್‌ಬೋಟು ಸಹಿತ ವಿವಿಧ ಜಲಕ್ರೀಡೆಗಳು ಪ್ರದರ್ಶಿತ ಗೊಳ್ಳುತ್ತಿವೆ. ಇದರಲ್ಲಿ ಭಾಗವಹಿಸುವ ಅವಕಾಶವನ್ನು ಜಿಲ್ಲಾಡಳಿತ ಕಲ್ಪಿಸಿದ್ದು ಸಾರ್ವಜನಿಕರು ಇದರಲ್ಲಿ ಪಾಲ್ಗೊಂಡು ಆನಂದಿಸಿದರು. ಜಲಕ್ರೀಡೆ ಪ್ರವೀಣರು, ತರಬೇತುದಾರರು ಆಸಕ್ತ ಸಾರ್ವಜನಿಕರ ಜತೆ ಇದ್ದು ಮಾರ್ಗದರ್ಶನ ನೀಡುತ್ತಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು
ವಿಶೇಷವಾಗಿ ಆಯೋಜಿಸಿರುವ ವೈವಿಧ್ಯ ಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನದಿ ಉತ್ಸವಕ್ಕೆ ಮೆರುಗು ನೀಡುತ್ತಿವೆ. ಬಂಗ್ರಕೂಳೂರು ಮತ್ತು ಸುಲ್ತಾನ್‌ ಬತ್ತೇರಿಯಲ್ಲಿ ಅಳವಡಿಸಿರುವ ವೇದಿಕೆಗಳಲ್ಲಿ ಯುವ ಹಾಗೂ ವೃತ್ತಿಪರ ಕಲಾವಿದರಿಂದ ಗಾನ, ನೃತ್ಯ, ಸಂಗೀತ ಕಾರ್ಯಕ್ರಮಗಳು ನದಿ ಉತ್ಸವದಲ್ಲಿ ಆಗಮಿಸುವ ಸಾರ್ವಜನಿಕರ ಮನಸ್ಸುಗಳಿಗೆ ಮುದ ನೀಡುತ್ತಿವೆ. ಬಂಗ್ರಕೂಳೂರಿನಲ್ಲಿ ಆಯೋಜಿಸಲಾದ ಚಿತ್ರಕಲಾ ಪ್ರದರ್ಶನ ಜನರನ್ನು ಆಕರ್ಷಿಸುತ್ತಿದ್ದು, ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು ಖರೀದಿಯ ಮಜಾ ನೀಡುತ್ತಿವೆ.

ವಿಶಿಷ್ಟ ಉದ್ಘಾಟನೆ 
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅವರು ಕೂಳೂರು ಸೇತುವೆಯ ಬಳಿಯ ಫಲ್ಗುಣಿ ನದಿ ತೀರದ ಜೆಟ್ಟಿಯ ಪಕ್ಕ ಗಿಡಗಳನ್ನು ನೆಡುವ ಮೂಲಕ ನದಿ ಉತ್ಸವಕ್ಕೆ ಚಾಲನೆ ನೀಡಿದರು. ಬಾಲಕಿಯೋರ್ವಳು ಇದಕ್ಕೆ ನೀರೆರೆದಳು. ಮೇಯರ್‌ ಭಾಸ್ಕರ್‌ ಕೆ., ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಅಪರ ಜಿಲ್ಲಾಧಿಕಾರಿ ಕುಮಾರ್‌, ಮಂಗಳೂರು ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌ ಅವರಿಗೆ ಸಾಥ್‌ ನೀಡಿದರು. ಬಳಿಕ ನದಿಗೆ ಹೂವು ಅರ್ಪಿಸಲಾಯಿತು. ವೇದಿಕೆಯಲ್ಲಿ ಸಚಿವರು ಡೊಳ್ಳು ಬಾರಿಸಿದರು. ಸ್ಪೀಡ್‌ಬೋಟ್‌ನಲ್ಲಿ ನದಿಯಲ್ಲಿ ಸಂಚರಿಸಿ ಜಲಕ್ರೀಡೆಯನ್ನು ಉದ್ಘಾಟಿಸಿದರು. ಡೊಳ್ಳು ಕುಣಿತ, ಡೋಲುವಾದನ, ಕೊಂಬು, ಕಹಳೆ, ಚೆಂಡೆವಾದನ ಉದ್ಘಾಟನೆಗೆ ಮೆರುಗು ನೀಡಿದವು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.