ಸಾರ್ವಜನಿಕರ ಸಹಕಾರಕ್ಕೆ ಸಮಿತಿ ಮನವಿ


Team Udayavani, Jan 17, 2019, 1:05 AM IST

n-rajendra-kumar.jpg

ಮಂಗಳೂರು: ದ.ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ನಿರಂತರ 25 ವರ್ಷಗಳ ಸಾರ್ಥಕ ಅಧ್ಯಕ್ಷತೆ ವಹಿಸಿಕೊಂಡಿರುವ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌ ಅವರ ರಜತ ಸಂಭ್ರಮ, ನವೋದಯ ಸ್ವಸಹಾಯಸಂಘಗಳ ವಿಂಶತಿ ಸಮಾವೇಶ ಜ. 19 ರಂದು ಜರಗಲಿದ್ದು, ನಗರದ ನಾಗರಿಕರು ಸಹಕಾರ ಸಂಭ್ರಮಕ್ಕೆ ಸಹಕರಿಸುವಂತೆ ಅಭಿನಂದನಾ ಸಮಿತಿ ಅಧ್ಯಕ್ಷ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಮನವಿ ಮಾಡಿಕೊಂಡಿದ್ದಾರೆ. 

ದೇಶದ ಇತಿಹಾಸದಲ್ಲಿಯೇ ಮೊತ್ತ ಮೊದಲ ಬಾರಿಗೆ ಸಹಕಾರಿಗಳೆಲ್ಲ ಒಂದು ಕಡೆ ಸೇರಿ ತಮ್ಮ ಏಕತೆ ಮತ್ತು ಬದ್ಧತೆ
ಯನ್ನು ಎತ್ತಿ ಹಿಡಿಯುವ ಸಹಕಾರಿ ಸಮಾವೇಶ ಇದಾಗ ಲಿದ್ದು, 2 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಈ ಸಂದರ್ಭ ಸಾರ್ವಜನಿಕರಿಗೆ ವಾಹನ ಮಾರ್ಗದಲ್ಲಾಗುವ ಬದಲಾವಣೆ ಮತ್ತು ಸಂಘಟನೆಗೆ ಜನತೆಯ ಸಹಕಾರ ಕೋರಿದ್ದಾರೆ. 

ಜ. 18ಕ್ಕೆ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಿಂದ 10 ಸಾವಿರ ಜನ ನಗರಕ್ಕೆ ಬರುವವರಿದ್ದು, ಸಮಿತಿ ಇವರ ಅತಿಥಿ ಸತ್ಕಾರಕ್ಕಾಗಿ 21 ಛತ್ರಗಳನ್ನು ಕಾಯ್ದಿರಿಸಿದೆ. ಜ. 19ರಂದು ಕುಂದಾಪುರ, ಕಾರ್ಕಳ, ಉಡುಪಿ ಕಡೆಯಿಂದ ಆಗಮಿಸುವವರಿಗೆ ಸುರತ್ಕಲ್‌ ಕುಲಾಲ ಭವನದ ಬಳಿ ಪ್ಯಾಕಿಂಗ್‌ ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿಂದ ಕೊಟ್ಟಾರಚೌಕಿಯಾಗಿ ಪಿ.ವಿ.ಎಸ್‌. ಸರ್ಕಲ್‌ -ನವಭಾರತ ಸರ್ಕಲ್‌ನಲ್ಲಿ ಸಹಕಾರಿಗಳನ್ನು ಇಳಿಸಿ ಬಸ್ಸುಗಳು ಕೂಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ನಿಲುಗಡೆಗೊಳ್ಳಲಿವೆ. 

ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳದಿಂದ ಆಗಮಿಸುವವರಿಗೆ ಅಡ್ಯಾರ್‌ ಗಾರ್ಡನ್‌ ಬಳಿ ಉಪಾಹಾರ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿಂದ ಪಂಪ್‌ವೆಲ್‌ ಸರ್ಕಲ್‌ ಆಗಿ ಕಂಕನಾಡಿ, ಜ್ಯೋತಿ ಸರ್ಕಲ್‌ ಮೂಲಕ ಎ.ಬಿ. ಶೆಟ್ಟಿ ಸರ್ಕಲ್‌ ಬಳಿ ಕಾರ್ಪೊರೇಶನ್‌ ಬ್ಯಾಂಕ್‌ ಹತ್ತಿರ ಸಹಕಾರಿಗಳನ್ನು ಇಳಿಸಿ, ಮಂಗಳಾದೇವಿಯಾಗಿ ಗೋಲ್ಡ್‌ ಪಿಂಚ್‌ ಮೈದಾನದಲ್ಲಿ ಬಸ್ಸುಗಳ ನಿಲುಗಡೆ. ಕಾರ್ಕಳ, ಮೂಡುಬಿದಿರೆ, ಬಜ್ಪೆ, ಗುರುಪುರಗಳಿಂದ ಆಗಮಿಸುವವರಿಗೆ ಗುರುಪುರ ಕೈಗಾರಿಕಾ ಪ್ರದೇಶದ ಬಳಿ ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿಂದ ನಂತೂರು ಮೂಲಕ ಜ್ಯೋತಿ ಸರ್ಕಲ್‌ನಿಂದ ಎ. ಬಿ. ಶೆಟ್ಟಿ ಸರ್ಕಲ್‌ ಇಳಿಸಿ ಗೋಲ್ಡ್‌ ಪಿಂಚ್‌ ಮೈದಾನದಲ್ಲಿ ಬಸ್ಸುಗಳ ನಿಲುಗಡೆ. 

ಅತಿಥಿಗಳಿಗೆ ಟೌನ್‌ ಹಾಲ್‌ ಮತ್ತು ಸರಕಾರಿ ಕಾಲೇಜು ಮೈದಾನ, ಉಭಯ ಜಿಲ್ಲೆಗಳ ಸಹಕಾರಿ ಸಂಸ್ಥೆಗಳ ಅಧ್ಯಕ್ಷರ ವಾಹನ ನಿಲುಗಡೆಗೆ ಅಲೋಶಿಯಸ್‌ ಮೈದಾನ, ವಿವಿಧ ಜಿಲ್ಲೆಗಳ ಸಹಕಾರಿ ಮತ್ತು ಆಮಂತ್ರಿತರ ವಾಹನ ನಿಲುಗಡೆಗೆ ಬಂಟ್ಸ್‌ ಹಾಸ್ಟೆಲ್‌ ಮೈದಾನ, ಶಾಂತಿ ನಿಲಯ ಮೈದಾನ ಮತ್ತು ಎಮ್ಮೆಕೆರೆ ಮೈದಾನ ಹಾಗೂ ಕದ್ರಿ ಮೈದಾನದಲ್ಲಿ ಅವಕಾಶ ಕಲ್ಪಿಸಲಾಗುವುದೆಂದು ಅವರು ತಿಳಿಸಿದ್ದಾರೆ. 

ಸಮಾವೇಶವನ್ನು ಶಿಸ್ತುಬದ್ಧವಾಗಿ ನಡೆಸಲು ಕೇಂದ್ರೀಯ ಅಭಿನಂದನಾ ಸಮಿತಿಯೊಂದಿಗೆ 16 ಉಪ ಸಮಿತಿ ರಚಿಸಿ ಕೊಂಡು ಜವಾಬ್ದಾರಿ ಹಂಚಿಕೊಳ್ಳಲಾಗಿದೆ. ಜ. 19ರಂದು ಬೆಳಗ್ಗೆ 9.30ಕ್ಕೆ ಎಸ್‌ಸಿಡಿಸಿಸಿ ಬ್ಯಾಂಕಿನಿಂದ ಮೆರವಣಿಗೆ ನಡೆ ಯಲಿದೆ.  ಮೆರವಣಿಗೆ ಉದ್ದಕ್ಕೂ ಸ್ವಚ್ಚತಾ ತಂಡದೊಂದಿಗೆ ವಾಹನವಿದ್ದು, ರಸ್ತೆಯಲ್ಲಿ ಯಾವುದೇ ರೀತಿಯಲ್ಲಿ ಸ್ವಚ್ಚತೆಗೆ ತೊಡಕಾಗದ ರೀತಿ ಕಾರ್ಯ ನಿರ್ವಹಿಸುತ್ತದೆ ಎಂದರು. 

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.