ಬಂಗಾರಪ್ರಿಯರಿಗೆ ಆಘಾತ; ಶೇ. 50ರಷ್ಟು ವ್ಯಾಪಾರ ಕುಸಿತ


Team Udayavani, Jan 22, 2019, 12:30 AM IST

gold.jpg

ಮಂಗಳೂರು: ಕಳೆದೊಂದು ತಿಂಗಳಿಂದ ಬಂಗಾರ ಪ್ರಿಯರಿಗೆ ಮೇಲಿಂದ ಮೇಲೆ ಆಘಾತ ಉಂಟಾಗುತ್ತಿದೆ. ಕಾರಣ ದಿನೇದಿನೇ ದಾಖಲೆ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆ. ಗ್ರಾಂವೊಂದಕ್ಕೆ 3 ಸಾವಿರ ರೂ. ಗಡಿ ದಾಟಿರುವುದು ಚಿನ್ನಪ್ರಿಯರ ನಿದ್ದೆಗೆಡಿಸಿದ್ದರೆ, ಖರೀದಿಗಾರರಿಲ್ಲದೆ ಶೇ. 50ರಷ್ಟು ವ್ಯಾಪಾರ ಕುಸಿತ ಕಂಡು ವ್ಯಾಪಾರಿಗಳೂ ಕಂಗಾಲಾಗಿದ್ದಾರೆ.

ಜಾಗತಿಕ ಮಟ್ಟದಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗಿರುವುದು ಹಾಗೂ ರೂಪಾಯಿ ಸಹಿತ ವಿವಿಧ ದೇಶಗಳ ಕರೆನ್ಸಿ ಮೌಲ್ಯ ಕುಸಿತ ಚಿನ್ನದ ಬೆಲೆ ಏರಿಕೆಯಾಗಲು ಕಾರಣ. ಅಲ್ಲದೆ ಆಮದು ಮತ್ತು ರಫ್ತಿನಲ್ಲಿ ಅಸಮತೋಲನ ಉಂಟಾಗಿ ರೂಪಾಯಿ ಮೌಲ್ಯ ಕಡಿಮೆ ಯಾಗಿರುವುದೂ ಚಿನ್ನದ ಬೆಲೆಯಲ್ಲಿ ದಾಖಲೆ ಏರಿಕೆಗೆ ಕಾರಣ ಎಂದು ಸ್ವರ್ಣ ವ್ಯಾಪಾರಿಗಳು ಹಾಗೂ ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಡಿಸೆಂಬರ್‌ನಲ್ಲಿ ಗ್ರಾಂಗೆ ಸುಮಾರು 2985 ರೂ. ವರೆಗೆ ಇದ್ದ 22 ಕ್ಯಾರೆಟ್‌ ಚಿನ್ನದ ಬೆಲೆ, ಜನವರಿ 3ರಂದು 3,005 ರೂ.ಗೆ ತಲುಪಿತ್ತು. ಬಳಿಕ ಕೆಲವೇ ರೂ. ಕುಸಿತ ಕಂಡಿದ್ದ ಬೆಲೆ ಜ. 10ರ ವೇಳೆಗೆ 3,030 ರೂ.ಗಳಾಗಿತ್ತು. ಆನಂತರ ನಿರಂತರವಾಗಿ ಬೆಲೆ ಏರುತ್ತಲೇ ಹೋಗಿದೆ. ಸದ್ಯ 24 ಕ್ಯಾರೆಟ್‌ ಚಿನ್ನದ ದರ 3,339 ರೂ.ಗಳಾಗಿವೆ ಎಂದು ಜಿಲ್ಲಾ ಸ್ವರ್ಣ ವ್ಯಾಪಾರಿಗಳ ಸಂಘದಿಂದ ಮಾಹಿತಿ ಲಭಿಸಿದೆ.
 
ಆಮದು ಹೆಚ್ಚಳ ಕಾರಣ?
ಪ್ರಮುಖವಾಗಿ ಭಾರತವು ಸ್ವಿಟ್ಜರ್‌ಲ್ಯಾಂಡ್‌, ಕೊಲ್ಲಿ ಹಾಗೂ ದಕ್ಷಿಣಆಫ್ರಿಕಾದಿಂದ ಚಿನ್ನ ಆಮದು ಮಾಡಿಕೊಳ್ಳುತ್ತವೆ. ದೇಶೀಯ ಮಟ್ಟದಲ್ಲಿ ಉತ್ಪಾದನೆ ಕಡಿಮೆಯಾಗಿ ಆಮದು ಮಾಡಿ ಕೊಳ್ಳುವುದು ಹೆಚ್ಚಿರುವುದು ಮತ್ತು ರಫ್ತಿನ ಪ್ರಮಾಣ ಇಳಿಮುಖ ವಾಗುವುದರಿಂದ ಆಮದು-ರಫ್ತಿನ ನಡುವೆ ಅಸಮತೋಲನ ಏರ್ಪಟ್ಟು ರೂಪಾಯಿ ಮೌಲ್ಯ ಕುಸಿತಗೊಳ್ಳುತ್ತದೆ. ಇದು ಮತ್ತು ಚಿನ್ನಕ್ಕೆ ಬೇಡಿಕೆ ಹೆಚ್ಚಿರುವುದೂ ಬಂಗಾರ ದರ ಏರಿಕೆಗೆ ಕಾರಣ ಎನ್ನುತ್ತಾರೆ ಆರ್ಥಿಕ ಸಲಹೆಗಾರ ಸಿಎ ಎಸ್‌.ಎಸ್‌. ನಾಯಕ್‌. ಜಾಗತಿಕ ಮಟ್ಟದಲ್ಲಿ ಆರ್ಥಿಕ ಅನಿಶ್ಚಿತತೆ ಉಂಟಾಗುತ್ತಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಮಾಡುವುದೇ ಸುರಕ್ಷಿತ ಎಂಬ ಭಾವನೆಯಲ್ಲಿ ಚಿನ್ನ ಖರೀದಿಗೆ ಮುಗಿಬಿದ್ದಿರುವುದೂ ಚಿನ್ನದ ದರ ಹಠಾತ್‌ ಏರಿಕೆಯಾಗಲು ಕಾರಣವಾಗಿರಬಹುದು ಎಂದು ಅವರು ವಿಶ್ಲೇಷಿಸುತ್ತಾರೆ.

ವಿವಿಧ ದೇಶಗಳ ಕರೆನ್ಸಿ ಮೌಲ್ಯ ಕುಸಿದಿರುವುದು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಕಳೆದ ಎರಡು ತಿಂಗಳಿಂದ ಸುಮಾರು 200 ರೂ.ಗಳಿಗೂ ಹೆಚ್ಚು ಬೆಲೆ ಏರಿಕೆಯಾಗಿದೆ. ಪುಷ್ಯ ಮಾಸದ ಹಿನ್ನೆಲೆಯಲ್ಲಿ ಚಿನ್ನ ಖರೀದಿಸುವವರ ಸಂಖ್ಯೆ ಇಳಿಮುಖ ವಾಗಿರುವುದರಿಂದ ವ್ಯಾಪಾರದ ಮೇಲೆಯೂ ಪರಿಣಾಮ ಬೀರಿದೆ.
– ಪ್ರಶಾಂತ್‌ ಶೇಟ್‌, ಕಾರ್ಯದರ್ಶಿ ,ದ.ಕ.ಜಿಲ್ಲಾ  ಸ್ವರ್ಣ ವ್ಯಾಪಾರಿಗಳ ಸಂಘ

– ಧನ್ಯಾ ಬಾಳೆಕಜೆ
 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.