ಶ್ರೀನಿವಾಸ್‌ ಯೂನಿವರ್ಸಿಟಿ ಪ್ರಥಮ ಘಟಿಕೋತ್ಸವ


Team Udayavani, Feb 16, 2019, 1:10 AM IST

1502pb1-ghatikotsava.jpg

ಸುರತ್ಕಲ್‌: ಶ್ರೀನಿವಾಸ ಯೂನಿವರ್ಸಿಟಿಯ ಪ್ರಥಮ ಘಟಿಕೋತ್ಸವ ಶುಕ್ರವಾರ ನಡೆದಿದ್ದು, ಈ ಸಂದರ್ಭ ಉಡುಪಿಯ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಿ ಗೌರವಿಸಿತು.

ಬೆಂಗಳೂರಿನ ರಾಜೀವ್‌ ಗಾಂಧಿ ಯೂನಿವರ್ಸಿಟಿ ಆಫ್‌ ಹೆಲ್ತ್‌ ಸೈನ್ಸ್‌ನ ವೈಸ್‌ ಚಾನ್ಸಲರ್‌ ಡಾ| ಎಸ್‌. ಸಚ್ಚಿದಾನಂದ ಹಾಗೂ ಶ್ರೀನಿವಾಸ್‌ ಯೂನಿವರ್ಸಿಟಿಯ ಚಾನ್ಸಲರ್‌ ಸಿಎ ಎ. ರಾಘವೇಂದ್ರ ರಾವ್‌ ಗೌರವ ಡಾಕ್ಟರೇಟ್‌ ಪ್ರದಾನ ಮಾಡಿದರು. 1,400 ವಿದ್ಯಾರ್ಥಿಗಳಿಗೆ ಪದವಿ, ಓರ್ವರಿಗೆ ಪಿಎಚ್‌ಡಿ ಹಾಗೂ ಮೂವರಿಗೆ ಡಿ.ಲಿಟ್‌ ಪದವಿ ಪ್ರದಾನಿಸಲಾಯಿತು.

ಪ್ರಜ್ಞಾವಂತ ಸಮಾಜ ನಿರ್ಮಾಣ ಅಗತ್ಯ
ಗೌರವ ಡಾಕ್ಟರೇಟ್‌ ಸ್ವೀಕರಿಸಿದ ಶ್ರೀ ವಿಶ್ವೇಶತೀರ್ಥರು ಮಾತನಾಡಿ, ಮಾನವ ಹೃದಯ ವಿಕಾಸಕ್ಕೆ ವಿದ್ಯೆಯೂ ಅಗತ್ಯ. ಶಿಕ್ಷಣದಿಂದ ಪ್ರಜ್ಞಾ ವಂತ ಸಮಾಜ ನಿರ್ಮಾಣವಾಗಬೇಕು. ಶ್ರೀನಿವಾಸ ಯೂನಿವರ್ಸಿಟಿಯಲ್ಲಿ ಕಲಿತ ವಿದ್ಯಾರ್ಥಿಗಳು ಸಂಸ್ಕಾರವಂತ ರಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಗೌರವ ಡಾಕ್ಟರೇಟನ್ನು ಪ್ರೀತಿಯಿಂದ ಸ್ವೀಕರಿಸಿದ್ದೇನೆ ಎಂದ ಶ್ರೀಗಳು, ಸಂಸ್ಥೆಯು ವಿವಿಧ ಶೈಕ್ಷಣಿಕ ಚಟುವಟಿಕೆಗಳ ಮೂಲಕ ವಿದ್ಯಾನಿವಾಸವಾಗಿ ಬೆಳಗುತ್ತಿದೆ ಎಂದು ಶ್ಲಾಘಿಸಿದರು.

ಡಾ| ಎಸ್‌. ಸಚ್ಚಿದಾನಂದ ಮಾತನಾಡಿ, ಇಂದಿನ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಆಯ್ಕೆಗೆ ವಿಪುಲ ಅವಕಾಶಗಳಿವೆ. ವೃತ್ತಿಪರ ಶಿಕ್ಷಣ ಪಡೆದವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ದೇಶದ ಒಳಿತಿಗಾಗಿ ಈ ವಿದ್ಯೆ ಬಳಕೆಯಾಗಬೇಕು. ದೇಶ ವಿರೋ ಧಿ ಕೃತ್ಯಗಳನ್ನು ವಿದ್ಯಾರ್ಥಿ ಸಮುದಾಯ ಒಕ್ಕೊರಲಿನಿಂದ ಖಂಡಿಸಿ ಒಗ್ಗಟ್ಟು ಪ್ರದರ್ಶಿಸ ಬೇಕು ಎಂದರು.

ಚಾನ್ಸಲರ್‌ ಸಿಎ ಎ. ರಾಘವೇಂದ್ರ ರಾವ್‌ ಪದವಿ ಪಡೆದ ವಿದ್ಯಾರ್ಥಿ ಸಮೂಹಕ್ಕೆ ಶುಭ ಕೋರಿದರು. ಸಂಸ್ಥೆಯ ಟ್ರಸ್ಟಿಗಳಾದ ಎ. ವಿಜಯಲಕ್ಷ್ಮೀ ಆರ್‌. ರಾವ್‌, ಪ್ರೊ| ಎ. ಮಿತ್ರಾ ಎಸ್‌. ರಾವ್‌, ಪದ್ಮಿನಿ ಕುಮಾರ್‌, ರಿಜಿಸ್ಟ್ರಾರ್‌ ಡಾ| ಅನಿಲ್‌ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

ಪ್ರೊ ಚಾನ್ಸಲರ್‌ ಡಾ| ಎ. ಶ್ರೀನಿವಾಸ ರಾವ್‌ ಸ್ವಾಗತಿಸಿದರು. ವೈಸ್‌ ಚಾನ್ಸಲರ್‌ ಡಾ| ಪಿ.ಎಸ್‌. ಐತಾಳ ವರದಿ ವಾಚಿಸಿದರು. ಡಾ| ಶ್ರೀನಿವಾಸ ಮಯ್ಯ ಡಿ. ಅವರು ವಂದಿಸಿದರು.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.