ದಾಳಿಯ ಬಗ್ಗೆ ಚಿತ್ರ ನಟ ಅನಂತನಾಗ್ ಆಕ್ರೋಶ
Team Udayavani, Feb 17, 2019, 4:25 AM IST
ಮಂಗಳೂರು: ಜಮ್ಮು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸಿಆರ್ಪಿಎಫ್ ಯೋಧರ ಮೇಲೆ ಉಗ್ರರಿಂದ ನಡೆದ ದಾಳಿ ಆಕ್ರೋಶ ಉಂಟು ಮಾಡಿದೆ. ಸಿಟ್ಟಿನೊಂದಿಗೆ ಅಸಹಾಯಕತೆ ಕಾಡುತ್ತಿದೆ. ಈ ಘಟನೆಗಳ ಹಿಂದಿರುವ ಭಯೋತ್ಪಾದಕ ದೇಶ ಪಾಕಿಸ್ಥಾನಕ್ಕೆ ಮೋದಿ ನೇತೃತ್ವದ ಸರಕಾರ ತಕ್ಕ ಪಾಠ ಕಲಿಸಬೇಕು ಎಂದು ಹಿರಿಯ ಚಿತ್ರನಟ ಅನಂತನಾಗ್ ಹೇಳಿದರು.
ನಗರದ ಲಕ್ಷ್ಮೀ ಮೆಮೋರಿಯಲ್ ಹೋಟೆಲ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಉಗ್ರರನ್ನು ಹತ್ತಿಕ್ಕಲು ಸೇನೆಗೆ ಹೆಚ್ಚಿನ ಬಲ ನೀಡಬೇಕು. ಕಾಶ್ಮೀರದಲ್ಲಿ ಸೇಬು ಬೆಳೆಯುತ್ತದೆ. ಜತೆಗೆ ಭಯೋತ್ಪಾದನೆಯೂ ಹುಲುಸಾಗಿ ಬೆಳೆಯುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದವರು ಹೇಳಿದರು.
ತುಳುವಿನಲ್ಲಿ ಬಣ್ಣ
ತುಳು ಚಲನಚಿತ್ರ ರಂಗ ಬೆಳೆಯುತ್ತಿದ್ದು, “ಇಂಗ್ಲಿಷ್’ ಚಲನಚಿತ್ರದ ಮುಖೇನ ಇದೇ ಮೊದಲ ಬಾರಿಗೆ ತುಳು ಭಾಷೆಯ ಚಿತ್ರವೊಂದಕ್ಕೆ ಬಣ್ಣ ಹಚ್ಚಿದ್ದೇನೆ ಎಂದು ಇದೇವೇಳೆ ಅನಂತ್ನಾಗ್ ಹೇಳಿದರು. ಚಲನಚಿತ್ರದಲ್ಲಿ ಇಂಗ್ಲಿಷ್ ಅಧ್ಯಾಪಕನ ಪಾತ್ರ ನಿರ್ವಹಿಸಿದ್ದೇನೆ. ಇತ್ತೀಚಿನ ದಿನಗಳಲ್ಲಿ ಇಂಗ್ಲಿಷ್ ಭಾಷೆ ವ್ಯಾಪ್ತಿ ಹೆಚ್ಚುತ್ತಿದೆ. ಇದರ ನಡುವೆ ಮಾತೃ ಭಾಷೆಗೆ ಪೆಟ್ಟು ಬೀಳಬಾರದು. ಈ ತಾತ್ಪರ್ಯ ಚಲನಚಿತ್ರದಲ್ಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅನಂತ್ನಾಗ್ ಅವರ ಪತ್ನಿ ಗಾಯತ್ರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ