ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ ಪ್ರಕ್ರಿಯೆ ಚುರುಕು
Team Udayavani, Feb 18, 2019, 3:55 AM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಈಗ ಚುರುಕುಗೊಂಡಿದ್ದು, ಈ ನಿಲ್ದಾಣದ ನಿರ್ವಹಣೆ ಗುತ್ತಿಗೆ ಪಡೆದುಕೊಳ್ಳುವುದಕ್ಕೆ ಜಿಎಂಆರ್ ಸಹಿತ ಮೂರು ಖಾಸಗಿ ಕಂಪೆನಿಗಳು ಆಸಕ್ತಿ ತೋರಿಸಿವೆ ಎನ್ನಲಾಗಿದೆ.
ಮಂಗಳೂರು ವಿಮಾನ ನಿಲ್ದಾಣವನ್ನು ಹೊರಗುತ್ತಿಗೆ ಪಡೆದುಕೊಂಡು ಅಭಿವೃದ್ಧಿ ಹಾಗೂ ನಿರ್ವಹಣೆ ಮಾಡುವುದಕ್ಕೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್(ಸಿಐಎಎಲ್) ಕೂಡ ಒಲವು ವ್ಯಕ್ತಪಡಿಸಿದ್ದು, ಬಿಡ್ನಲ್ಲಿ ಪಾಲ್ಗೊಂಡಿದೆ. ಉನ್ನತ ಮೂಲಗಳ ಪ್ರಕಾರ ಮಂಗಳೂರು ಸಹಿತ ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವುದಕ್ಕೆ ಫೆ.14ರಿಂದ ಬಿಡ್ ಓಪನ್ ಆಗಿದೆ. ಇಲ್ಲಿಯ ವರೆಗೆ ಒಟ್ಟು ಮೂರು ಖಾಸಗಿ ಕಂಪೆನಿಗಳು ಮಂಗಳೂರು ವಿಮಾನ ನಿಲ್ದಾಣವನ್ನು ಗುತ್ತಿಗೆ ಪಡೆದುಕೊಂಡು ಅಭಿವೃದ್ಧಿಪಡಿಸುವುದಕ್ಕೆ ಮುಂದೆ ಬಂದಿವೆ. ಹೊಸದಿಲ್ಲಿ ಹಾಗೂ ಹೈದರಾಬಾದ್ನಂಥ ಕೆಲವು ಪ್ರಮುಖ ವಿಮಾನ ನಿಲ್ದಾಣಗಳ ನಿರ್ವಹಣೆ ನೋಡಿಕೊಳ್ಳುತ್ತಿರುವ ಜಿಎಂಆರ್ ಗ್ರೂಪ್ ಈಗ ಮಂಗಳೂರು ನಿಲ್ದಾಣವನ್ನು ಗುತ್ತಿಗೆ ವಹಿಸಿಕೊಳ್ಳುವುದಕ್ಕೆ ಬಿಡ್ನಲ್ಲಿ ಪಾಲ್ಗೊಂಡಿದೆ. ಪ್ರತಿಷ್ಠಿತ ಅದಾನಿ ಎಂಟರ್ಪ್ರೈಸಸ್ ಹಾಗೂ ಸಿಐಎಎಲ್ ಕೂಡ ಬಿಡ್ನಲ್ಲಿ ಪಾಲ್ಗೊಂಡಿವೆ ಎನ್ನಲಾಗಿದೆ.
ಕೊಚ್ಚಿ ನಿಲ್ದಾಣದ ಆಸಕ್ತಿ !
ಮಂಗಳೂರು ವಿಮಾನ ನಿಲ್ದಾಣವನ್ನು ಗುತ್ತಿಗೆ ಪಡೆದುಕೊಂಡು ಅಭಿವೃದ್ಧಿಪಡಿಸುವುದಕ್ಕೆ ನೆರೆಯ ರಾಜ್ಯವಾಗಿರುವ ಕೇರಳದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ನೋಡಿಕೊಳ್ಳುತ್ತಿರುವ ಸಿಐಎಎಲ್ ಆಸಕ್ತಿ ವಹಿಸಿರುವುದು ಕುತೂಹಲ ಮೂಡಿಸಿದೆ. ಕೇರಳದಲ್ಲಿ ಈಗ ಒಟ್ಟು ನಾಲ್ಕು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿದ್ದು, ಇತ್ತೀಚೆಗಷ್ಟೇ ಮಂಗಳೂರಿಗೆ ಸ್ಪರ್ಧಿಯಾಗುವ ರೀತಿಯಲ್ಲಿ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೂಡ ಕಾರ್ಯಾರಂಭಿಸಿದೆ. ಹೀಗಾಗಿ ಸಿಐಎಎಲ್ ಈಗ ಪಾಲ್ಗೊಂಡಿರುವುದು ವಿಶೇಷ. ಬಿಡ್ನಲ್ಲಿ ಭಾಗವಹಿಸಿದವರ ಪೈಕಿ ಯಾರು ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಗೆ ಅರ್ಹತೆ ಪಡೆದುಕೊಳ್ಳಲಿದ್ದಾರೆ ಎನ್ನುವುದು ಫೆ.26ಕ್ಕೆ ಗೊತ್ತಾಗಲಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ